Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಪತ್ತೆಯಾದ ದಾಖಲೆಗಳ ಶೋಧಕ್ಕೆ ಎಫ್‌ಐಆರ್...

ನಾಪತ್ತೆಯಾದ ದಾಖಲೆಗಳ ಶೋಧಕ್ಕೆ ಎಫ್‌ಐಆರ್ ದಾಖಲು

ಇಶ್ರತ್ ಜಹಾನ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ25 Sept 2016 11:36 PM IST
share

ಹೊಸದಿಲ್ಲಿ, ಸೆ.25: ಭಾರೀ ವಿವಾದಕ್ಕೆ ಕಾರಣ ವಾಗಿರುವ ಇಶ್ರತ್ ಜಹಾನ್ 'ನಕಲಿ ಎನ್‌ಕೌಂಟರ್' ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಪತ್ತೆ ಯಾಗಿರುವ ಕೆಲವು ದಾಖಲೆಗನ್ನು ಶೋಧ ನಡೆಸುವ ನಿಟ್ಟಿನಲ್ಲಿ ಗೃಹ ಇಲಾಖೆ ಎಫ್‌ಐಆರ್ ದಾಖಲಿಸಿದೆ.

    ಇದರೊಂದಿಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸೆಣಸಾಟ ಮತ್ತಷ್ಟು ತೀವ್ರವಾಗುವ ನಿರೀಕ್ಷೆಯಿದೆ. ಗೃಹ ಇಲಾಖೆಯ ಉಪಕಾರ್ಯದರ್ಶಿ ಹೊಸದಿಲ್ಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಸ್ಟೇಷನ್‌ನಲ್ಲಿ ಐಪಿಸಿ ಸೆಕ್ಷನ್ 409ರ ಅಡಿ (ಸರಕಾರಿ ನೌಕರರಿಂದ ವಿಶ್ವಾಸಾರ್ಹತೆಗೆ ಭಂಗ) ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ದಾಖಲೆಗಳು ಹೇಗೆ, ಯಾಕೆ ಮತ್ತು ಯಾವ ಸಂದರ್ಭದಲ್ಲಿ ನಾಪತ್ತೆಯಾದವು ಎಂಬುದನ್ನು ಶೋಧ ನಡೆಸುವಂತೆ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
 ದಾಖಲೆಗಳನ್ನು 2009ರ ಸೆಪ್ಟಂಬರ್‌ನಲ್ಲಿ ಉದ್ದೇಶಪೂರ್ವಕವಾಗಿ ಅಥವಾ ಉದ್ದೇಶರಹಿತ ವಾಗಿ ಕಳೆದುಹಾಕಲಾಗಿದೆ ಎಂದು ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ತನಿಖಾ ಸಮಿತಿಯ ವರದಿಯಲ್ಲಿ ಉಲ್ಲೇಖಿ ಸಲಾದ ಬಳಿಕ ಗೃಹ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. 2009ರಲ್ಲಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಗೃಹ ಸಚಿವರಾಗಿದ್ದರು.
      
  
  ಇಶ್ರತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವಾಲಯದ ಕಡತದಿಂದ ನಾಪತ್ತೆಯಾಗಿರುವ ಐದು ದಾಖಲೆಗಳಲ್ಲಿ ಒಂದು ಮಾತ್ರ ಪತ್ತೆಯಾಗಿದೆ ಎಂದು ತನಿಖಾ ಸಮಿತಿ ತಿಳಿಸಿದೆ. ಈ ಸಮಿತಿಯು ಮೂರು ತಿಂಗಳ ತನಿಖೆಯ ಬಳಿಕ ತನ್ನ ವರದಿಯನ್ನು ಕಳೆದ ಜೂನ್‌ನಲ್ಲಿ ಸರಕಾರಕ್ಕೆ ಸಲ್ಲಿಸಿತ್ತು. ಆದರೆ ಈ ವರದಿಯಲ್ಲಿ ಚಿದಂಬರಂ ಅಥವಾ ಅಂದಿನ ಯುಪಿಎ ಸರಕಾರದ ಇತರ ಯಾವುದೇ ಸಚಿವರ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಗೃಹ ಇಲಾಖೆಯ ಅಂದಿನ ಕಾರ್ಯದರ್ಶಿ ಜಿ.ಕೆ.ಪಿಳ್ಳೈ ಸೇರಿದಂತೆ ಇದೀಗ ನಿವೃತ್ತರಾಗಿರುವವರನ್ನೂ ಒಳಗೊಂಡು 11 ಮಂದಿ ಅಧಿಕಾರಿಗಳ ಹೇಳಿಕೆಯನ್ನು ಪಡೆದ ಬಳಿಕ ಸಿದ್ದಪಡಿಸಿರುವ 52 ಪುಟಗಳ ವರದಿಯಲ್ಲಿ - 2009ರ ಸೆ.18ರಿಂದ 28ರ ಅವಧಿಯಲ್ಲಿ ದಾಖಲೆಗಳು ನಾಪತ್ತೆಯಾಗಿವೆ ಎಂದು ಉಲ್ಲೇಖಿಸಲಾಗಿದೆ. 2009ರ ಸೆ.18ರಂದು ಅಂದಿನ ಗೃಹಕಾರ್ಯದರ್ಶಿ ಅಂದಿನ ಅಟಾರ್ನಿ ಜನರಲ್‌ಗೆ ಕಳಿಸಿದ ಪತ್ರ ಮತ್ತು ಅದರ ಜೊತೆಗಿದ್ದ ಅಡಕ, ಅಂದೇ ಕಳಿಸಲಾದ ಇನ್ನೊಂದು ಪತ್ರದ ಕಚೇರಿ ಪ್ರತಿ, ಅಟಾರ್ನಿ ಜನರಲ್ ಪರಿಶೀಲಿಸಿದ ಅಫಿದಾವಿತ್ ಕರಡು ಪ್ರತಿ, 2009ರ ಸೆ.24ರಂದು ಅಂದಿನ ಗೃಹ ಸಚಿವರಿಂದ 'ತಿದ್ದುಪಡಿ ಮಾಡಲ್ಪಟ್ಟ' ಅಫಿದಾವಿತ್ ಕರಡು ಪ್ರತಿ, 2009ರ ಸೆ.29ರಂದು ಗುಜರಾತ್ ಹೈಕೋರ್ಟ್‌ನಲ್ಲಿ ಸಲ್ಲಿಸಲ್ಪಟ್ಟ ಅಫಿದಾವಿತ್‌ನ ಕಚೇರಿ ಪ್ರತಿಗಳು ನಾಪತ್ತೆಯಾಗಿವೆ. 2009ರ ಸೆ.29ರಂದು ಗುಜರಾತ್ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ದ್ವಿತೀಯ ಅಫಿದಾವಿತ್ ಮೊದಲ ಅಫಿದಾವಿತ್‌ಗಿಂತ ವಿಭಿನ್ನವಾಗಿದ್ದು ಇದರಲ್ಲಿ ಇಶ್ರತ್ ಓರ್ವ ಎಲ್‌ಇಟಿ (ಲಷ್ಕರೆ-ತಯೀಬಾ) ಕಾರ್ಯಕರ್ತೆ ಎಂಬುದಕ್ಕೆ ಯಾವುದೇ ನಿರ್ಣಾಯಕ ಸಾಕ್ಷಿ ಇಲ್ಲ ಎಂದು ತಿಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X