Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್‌ಗೆ ರೋಚಕ ಜಯ, ಸರಣಿ ಕೈವಶ

ಪಾಕ್‌ಗೆ ರೋಚಕ ಜಯ, ಸರಣಿ ಕೈವಶ

ದ್ವಿತೀಯ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ25 Sept 2016 11:45 PM IST
share
ಪಾಕ್‌ಗೆ ರೋಚಕ ಜಯ, ಸರಣಿ ಕೈವಶ

ದುಬೈ, ಸೆ.25: ಆಲ್‌ರೌಂಡ್ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ ದ್ವಿತೀಯ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ವೆಸ್ಟ್‌ಇಂಡೀಸ್ ತಂಡವನ್ನು 16 ರನ್‌ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು.

 ಶನಿವಾರ ರಾತ್ರಿ ಇಲ್ಲಿನ ದುಬೈ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡ ನಾಯಕ ಸರ್ಫರಾಝ್ ಅಹ್ಮದ್ 32 ಎಸೆತಗಳಲ್ಲಿ ಔಟಾಗದೆ ಬಾರಿಸಿದ 46 ರನ್ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಶಿಸ್ತುಬದ್ಧ ಬೌಲಿಂಗ್ ದಾಳಿ ನಡೆಸಿದ ವೇಗಿ ಸೊಹೈಲ್ ತನ್ವೀರ್(3-13) ಹಾಗೂ ಹಸನ್ ಅಲಿ(3-49) ವೆಸ್ಟ್‌ಇಂಡೀಸ್‌ನ್ನು 9 ವಿಕೆಟ್ ನಷ್ಟಕ್ಕೆ 144 ರನ್‌ಗೆ ನಿಯಂತ್ರಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

 ಶುಕ್ರವಾರ ನಡೆದ ಮೊದಲ ಪಂದ್ಯವನ್ನು 9 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದ ಪಾಕಿಸ್ತಾನ ತಂಡ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಹೀಗಾಗಿ ಮಂಗಳವಾರ ಅಬುಧಾಬಿಯಲ್ಲಿ ನಡೆಯಲಿರುವ 3ನೆ ಹಾಗೂ ಅಂತಿಮ ಪಂದ್ಯ ಔಪಚಾರಿಕ ಪಂದ್ಯ ಎನಿಸಿಕೊಂಡಿದೆ.

ಗೆಲ್ಲಲು 161 ರನ್ ಗುರಿ ಪಡೆದಿದ್ದ ವಿಂಡೀಸ್‌ಗೆ ವೇಗಿ ತನ್ವೀರ್ ದುಃಸ್ವಪ್ನವಾದರು. ಎವಿನ್ ಲೂವಿಸ್(3) ಹಾಗೂ ಮರ್ಲಾನ್ ಸ್ಯಾಮುಯೆಲ್ಸ್(1) ವಿಕೆಟ್ ಕಬಳಿಸಿ ಅಗ್ರ ಸರದಿಯನ್ನು ಬೇಧಿಸಿದ ತನ್ವೀರ್ ನಿಕೊಲಸ್ ಪೂರನ್(4) ವಿಕೆಟ್ ಪಡೆದರು. ಈ ಮೂಲಕ 53 ಟ್ವೆಂಟಿ-20 ಪಂದ್ಯಗಳಲ್ಲಿ 52 ವಿಕೆಟ್ ಪಡೆದ ಸಾಧನೆ ಮಾಡಿದರು.

ಪಾಕ್‌ನ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೆಂಟಿ-20ಯಲ್ಲಿ ಗರಿಷ್ಠ ವಿಕೆಟ್(97) ಪಡೆದಿದ್ದಾರೆ. ವೇಗದ ಬೌಲರ್ ಉಮರ್ ಗುಲ್ ಹಾಗೂ ಸ್ಪಿನ್ನರ್ ಸಯೀದ್ ಅಜ್ಮಲ್ ತಲಾ 85 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ಸತತ 2ನೆ ಪಂದ್ಯದಲ್ಲೂ ಬ್ಯಾಟಿಂಗ್‌ನಲ್ಲಿ ವಿಫಲವಾದ ವಿಂಡೀಸ್ ಇನಿಂಗ್ಸ್‌ನಲ್ಲಿ ಸುನೀಲ್ ನರೇನ್(30) ಸರ್ವಾಧಿಕ ರನ್ ಗಳಿಸಿದರು. ಆ್ಯಂಡ್ರೆ ಫ್ಲೆಚರ್(29) ಹಾಗೂ ಕೀರನ್ ಪೊಲಾರ್ಡ್(18) ಎರಡಂಕೆ ಸ್ಕೋರ್ ದಾಖಲಿಸಿದರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನವನ್ನು ನಾಯಕ ಅಹ್ಮದ್(ಔಟಾಗದೆ 46) ಹಾಗೂ ಆಲ್‌ರೌಂಡರ್ ಶುಐಬ್ ಮಲಿಕ್(37 ರನ್, 28 ಎಸೆತ) 3ನೆ ವಿಕೆಟ್‌ಗೆ 69 ರನ್ ಗಳಿಸಿ ತಂಡವನ್ನು ಆಧರಿಸಿದರು. ಅಹ್ಮದ್ ಇನಿಂಗ್ಸ್‌ನಲ್ಲಿ 5 ಬೌಂಡರಿಗಳನ್ನು ಬಾರಿಸಿದರೆ, ಮಲಿಕ್ ಒಂದು ಸಿಕ್ಸರ್, 3 ಬೌಂಡರಿ ಬಾರಿಸಿದ್ದರು. ಆರಂಭಿಕ ಆಟಗಾರ ಖಲಿದ್ ಲತೀಫ್(36 ಎಸೆತ, 40 ರನ್) ಹಾಗೂ ಬಾಬರ್ ಆಝಂ(19) ಉತ್ತಮ ಆರಂಭ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X