Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ವಿದೇಶದಲ್ಲಿ ಖಾಯಂ ಆಗಿ ನೆಲೆಸುವುದು...

ಮೋದಿ ವಿದೇಶದಲ್ಲಿ ಖಾಯಂ ಆಗಿ ನೆಲೆಸುವುದು ಸೂಕ್ತ: ಶಾಸಕ ಕಿಮ್ಮನೆ ರತ್ನಾಕರ

ಬ್ಲಾಕ್ ಕಾಂಗ್ರೆಸ್ ಶೃಂಗೇರಿ-ಹರಿಹರಪುರ ಪಾದಯಾತ್ರೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Sept 2016 10:15 PM IST
share

ಶೃಂಗೇರಿ, ಸೆ.26: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೂ ಮುನ್ನ ಎರಡು ತಿಂಗಳು ದೇಶದಾದ್ಯಂತ ನೂರಾರು ಸಭೆ ನಡೆಸಿ, ತಮ್ಮ ಮಾತಿನ ಮೋಡಿಯಲ್ಲಿ ಜನರಿಗೆ ಸುಳ್ಳು ಹೇಳುವ ಮೂಲಕ ದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣರಾದರು ಎಂದು ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ ಹೇಳಿದರು.

  ಸೋಮವಾರ ಕೇಂದ್ರ ಸರಕಾರದ ಜನ ವಿರೋಧಿ ಹಾಗೂ ರೈತ ವಿರೋಧಿ ನೀತಿಯನ್ನು ಖಂಡಿಸಿ, ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಶೃಂಗೇರಿ-ಹರಿಹರಪುರ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಆದರೆ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳು ಸುಳ್ಳು ಎಂಬುದು ಈಗ ಜನ ಸಾಮಾನ್ಯರಿಗೆ ಅದರಲ್ಲೂ ರೈತರಿಗೆ ಹೆಚ್ಚು ಮನವರಿಕೆಯಾಗಿದೆ. ವಿದೇಶದಲ್ಲಿರುವ ಕಪ್ಪುಹಣವನ್ನು ತಂದು ತಲಾ ಹದಿನೈದು ಲಕ್ಷ ರೂ. ನೀಡುವುದಾಗಿ ಹೇಳಿದ್ದ ಅವರು, ತೀರ್ಥಹಳ್ಳಿ ತಾಲೂಕಿಗೆ ಕಳುಹಿಸಿದ್ದಾರೆ. ನೀವು ಏಕೆ ಇನ್ನೂ ಪಡೆದಿಲ್ಲ ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

  ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ದೇಶದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಸಂಘ ಪರಿವಾರದಿಂದ ನಿರಂತರ ಕಿರುಕುಳ ನಡೆದಿದೆ. ಮನ್ ಕಿ ಬಾತ್ ನಲ್ಲಿ ಶೌಚಾಲಯ, ಸ್ವಚ್ಛತೆ ಬಗ್ಗೆ ಮಾತನಾಡುವ ಪ್ರಧಾನಿ ಮಹಾದಾಯಿ, ಹಾಗೂ ಕಾವೇರಿ ವಿವಾದದ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

 ಪಟ್ಟಣದ ಬಸ್ ನಿಲ್ದಾಣದಲ್ಲಿ ಪಾದಯಾತ್ರೆಗೆ ಶಾಸಕ ಕಿಮ್ಮನೆ ರತ್ನಾಕರ ಚಾಲನೆ ನೀಡಿದರು.

  ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ವಿಜಯಕುಮಾರ್, ಪಕ್ಷದ ಮುಖಂಡರಾದ ಟಿ.ಡಿ.ರಾಜೇಗೌಡ, ಗಾಯತ್ರಿ ಶಾಂತೇಗೌಡ, ಮತ್ತಿತರರು ಪಾಲ್ಗೊಂಡಿದ್ದರು.

n

ಮೋದಿ ವಿದೇಶದಲ್ಲಿ ಖಾಯಂ ಆಗಿ ನೆಲೆಸುವುದು ಸೂಕ್ತ. ವಿದೇಶ ಪ್ರವಾಸದಲ್ಲೇ ದಿನಗಳನ್ನು ಕಳೆಯುತ್ತಿದ್ದಾರೆ. ಬಿಜೆಪಿ ಸರಕಾರ ಬಂದ ನಂತರ ಗೋಮಾಂಸ ಮಾರಾಟದ ರಪ್ತು ಹೆಚ್ಚಾಗಿದೆ. ಇದು ಬಿಜೆಪಿ ಗೋಮಾತೆ ಹೆಸರಿನಲ್ಲಿ ನಡೆಸುತ್ತಿರುವ ಸುಳ್ಳು ಗೋ ಪ್ರೇಮವಾಗಿದೆ. ಬಿಜೆಪಿಯ ಉಪ ಸಂಘಟನೆಗಳು ಹತ್ತಾರು ಇದ್ದು, ಸಮಾಜದ ಅಹಿತಕರ ಘಟನೆಗಳನ್ನು ಆ ಸಂಘಟನೆಗಳ ಮೂಲಕ ಆಡಿಸುತ್ತಿದೆ. ಘಟನೆ ನಂತರ ಪಕ್ಷಕ್ಕೂ ಸಂಘಟನೆಗೂ ಸಂಬಂಧವಿಲ್ಲ ಎಂದು ಬಿಜೆಪಿ ನುಣುಚಿಕೊಳ್ಳುತ್ತಿದೆ. ಕಿಮ್ಮನೆ ರತ್ನಾಕರ ತೀರ್ಥಹಳ್ಳಿ ಶಾಸಕ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X