Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಪಾಸ್ ಪೋರ್ಟ್ ವಾಪಸ್ ಬೇಕಿದ್ದರೆ ಬಾಕಿ...

ಪಾಸ್ ಪೋರ್ಟ್ ವಾಪಸ್ ಬೇಕಿದ್ದರೆ ಬಾಕಿ ವೇತನ ಮರೆತುಬಿಡಿ: ಸೌದಿ ಕಂಪೆನಿ

ಸೌದಿ ಸಂಕಟ

ವಾರ್ತಾಭಾರತಿವಾರ್ತಾಭಾರತಿ27 Sept 2016 2:02 PM IST
share
ಪಾಸ್ ಪೋರ್ಟ್ ವಾಪಸ್ ಬೇಕಿದ್ದರೆ ಬಾಕಿ ವೇತನ ಮರೆತುಬಿಡಿ: ಸೌದಿ ಕಂಪೆನಿ

ರಿಯಾದ್, ಸೆ.27: ಸೌದಿ ಅರೆಬಿಯದ ಪ್ರಮುಖ ನಿರ್ಮಾಣ ಸಂಸ್ಥೆ ಯುನೈಟೆಡ್ ಸೀಮ್ಯಾಕ್ನ ನೂರಾರು ವಲಸಿಗ ಕಾರ್ಮಿಕರು ಕಳೆದ ಹಲವಾರು ತಿಂಗಳುಗಳಿಂದ ವೇತನ ದೊರೆಯದೆ ಸಂಕಷ್ಟಕ್ಕೀಡಾಗಿದ್ದು, ಇದೀಗ ಸಂಸ್ಥೆ ಕಾರ್ಮಿಕರ ಇಚ್ಛೆಯಂತೆ ಅವರ ಪಾಸ್ ಪೋರ್ಟ್ ಹಿಂದಿರುಗಿಸಲು ಒಪ್ಪಿದೆಯಾದರೂ ಅದಕ್ಕೊಂದು ಷರತ್ತು ವಿಧಿಸಿದೆ. ತಮಗೆ ಕಂಪೆನಿಯಿಂದ ಯಾವುದೇ ಹಣ ನೀಡಲು ಬಾಕಿಯಿಲ್ಲವೆಂದು ಲಿಖಿತವಾಗಿ ನೀಡಿದರೆ ಮಾತ್ರ ಪಾಸ್ ಪೋರ್ಟ್ ಹಿಂದಿರುಗಿಸುವುದಾಗಿ ಕಂಪೆನಿ ಹೇಳಿದೆಯೆಂದು ತಿಳಿದು ಬಂದಿದೆ.

ಭಾರತ, ಪಾಕಿಸ್ತಾನ ಹಾಗೂ ಫಿಲಿಪ್ಪೈನ್ಸ್ನ ನೂರಾರು ಕಾರ್ಮಿಕರು ಈ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 500 ಕ್ಕೂ ಮಿಕ್ಕಿ ಕಾರ್ಮಿಕರಿಗೆ ಕಳೆದ ಆರು ತಿಂಗಳುಗಳಿಂದ ಕನಿಷ್ಠ ವೇತನವನ್ನೂ ಪಾವತಿಸಿಲ್ಲ. ಅವರಲ್ಲಿ ಕೆಲವರಿಗೆ ಕಳೆದ 20 ತಿಂಗಳಿಂದಲೂ ವೇತನ ದೊರೆತಿಲ್ಲವೆನ್ನಲಾಗಿದೆ. ಆರ್ಥಿಕ ಸಮಸ್ಯೆಯಿಂದ ಕಂಗೆಟ್ಟಿರುವ ಈ ಕಾರ್ಮಿಕರು ಹಾಗೂ ಅವರನ್ನೇ ನಂಬಿರುವ ಅವರ ಕುಟುಂಬಗಳು ಈಗ ಮತ್ತೆ ತಮಗೆ ದೊರೆಯಬೇಕಾದ ವೇತನವನ್ನು ಕಂಪೆನಿ ಹೇಳಿದಂತೆ ಮರೆತು ಬಿಡಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ.

ತೈಲ ಬೆಲೆ ಕುಸಿತದಿಂದ ಸೌದಿ ಅರೇಬಿಯಾ ಈಗಾಗಲೇ ತೀವ್ರ ಸಮಸ್ಯೆಯೆದುರಿಸುತ್ತಿದೆ. ತನಗೆ ಸರಕಾರದಿಂದ ಅದರ ಯೋಜನೆಗಳನ್ನು ನಿರ್ವಹಿಸಿದ ವೆಚ್ಚದ ಹಣ ಇನ್ನೂ ಪಾವತಿಯಾಗಿಲ್ಲವೆಂಬ ಸಬೂಬನ್ನು ಸೀಮ್ಯಾಕ್ ಕಂಪೆನಿ ನೀಡುತ್ತಿದೆ.

ಸೌದಿ ಸರಕಾರ ಯಾ ತಮ್ಮ ದೇಶದ ದೂತಾವಾಸ ಕಚೇರಿಗಳು ತಮ್ಮ ಸಹಾಯಕ್ಕೆ ಬರುತ್ತಿಲ್ಲವೆಂದು ಕಾರ್ಮಿಕರು ದೂರುತ್ತಿದ್ದಾರೆ. ಮೇಲಾಗಿ ಅವರ ಕೆಲಸದ ಪರ್ಮಿಟ್ ಅಥವಾ ಇಖಾಮಾ ಅವಧಿ ಕೂಡ ಮುಕ್ತಾಯವಾಗಿದ್ದು ಅವರ ಉದ್ಯೋಗದಾತ ಕಂಪೆನಿ ಅವುಗಳನ್ನು ನವೀಕರಿಸದ ಪರಿಣಾಮ ಕಾರ್ಮಿಕರು ಜೈಲು ಶಿಕ್ಷೆಗೊಳಗಾಗುವ ಯಾ ದೇಶದಿಂದ ಹೊರದಬ್ಬಲ್ಪಡುವ ಭಯ ಎದುರಿಸುತ್ತಿದ್ದಾರೆ.

ಸಂಕಷ್ಟಕ್ಕೀಡಾಗಿರುವ ಕಾರ್ಮಿಕರು ಕಾರ್ಮಿಕ ನ್ಯಾಯಾಲಯವೊಂದನ್ನು ಸಂಪರ್ಕಿಸಿದ್ದರಾದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಸೌದಿಯಲ್ಲಿ ಭಾರತ, ಪಾಕಿಸ್ತಾನ ಹಾಗೂ ಫಿಲಿಪ್ಪೈನ್ಸ್ ದೇಶಗಳ ಸುಮಾರು 30,000 ಕಾರ್ಮಿಕರಿದ್ದಾರೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X