Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಸರಕಾರದ 3 ವರ್ಷಗಳ ಸಾಧನೆ: ವಿವಿಧ...

ರಾಜ್ಯ ಸರಕಾರದ 3 ವರ್ಷಗಳ ಸಾಧನೆ: ವಿವಿಧ ಯೋಜನೆಗಳು

ಜನಮನದಲ್ಲಿ ಸಚಿವ ರೈ ಜೊತೆ ಫಲಾನುಭವಿಗಳ ಸಂವಾದ!

ವಾರ್ತಾಭಾರತಿವಾರ್ತಾಭಾರತಿ27 Sept 2016 2:58 PM IST
share
ರಾಜ್ಯ ಸರಕಾರದ 3 ವರ್ಷಗಳ ಸಾಧನೆ: ವಿವಿಧ ಯೋಜನೆಗಳು

ಮಂಗಳೂರು, ಸೆ.26: ಅನ್ನಭಾಗ್ಯದಡಿ ನೀಡುವ ಸೀಮೆಎಣ್ಣೆ ಹೆಚ್ಚಿಸಿ, ಕ್ಷೀರ ಭಾಗ್ಯ ಅನುದಾನಿತ ಶಾಲಾ ಮಕ್ಕಳಿಗೂ ದೊರೆಯಲಿ, ಹಣ್ಣುಹಂಪಲುಗಳನ್ನೂ ನೀಡಿ, ಮನಸ್ವಿನಿ ಯೋಜನೆಯಡಿ ಪಿಂಚಣಿ ಹಣ ಹೆಚ್ಚಿಸಿ, ಲಿಂಗ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆ ಜತೆ ಆಶ್ರಯದ ವ್ಯವಸ್ಥೆಯಾಗಲಿ, ಬಿದಾಯಿ ಯೋಜನೆ ಇನ್ನಷ್ಟು ಅರ್ಹ ಫಲಾನುಭವಿಗಳಿಗೆ ತಲುಪಲಿ, ಹರೀಶ್ ಸಾಂತ್ವನ ಯೋಜನೆಯ ಬಗ್ಗೆ ಆ್ಯಂಬುಲೆನ್ಸ್‌ನಲ್ಲಿ ಮಾಹಿತಿ ನೀಡಿ, ಮತ್ಸಾಶ್ರಯದ ಸಹಾಯಧನ ಹೆಚ್ಚಿಸಿ.

ಇದು ರಾಜ್ಯ ಸರಕಾರದ ವಿವಿಧ ಯೋಜನೆಗಳಡಿ ಪ್ರಯೋಜನ ಪಡೆದುಕೊಂಡಿರುವ ಫಲಾನುಭವಿಗಳಿಂದ ವ್ಯಕ್ತವಾದ ಬೇಡಿಕೆಗಳು.

ರಾಜ್ಯ ಸರಕಾರದ ಮೂರು ವರ್ಷಗಳ ಸಾಧನೆ ಹಾಗೂ ವಿವಿಧ ಯೋಜನೆಗಳ ಕುರಿತಂತೆ ಮಾಹಿತಿ ನೀಡುವ ನಿಟ್ಟಿನಲ್ಲಿ ನಗರದ ಪುರಭವನದಲ್ಲಿ ಇಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಜನಮನ ಕಾರ್ಯಕ್ರಮದಲ್ಲಿ ಫಲಾನುಭವಿಗಳು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಜತೆ ಸಂವಾದ ನಡೆಸುವ ಮೂಲಕ ಗಮನ ಸೆಳೆದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸಚಿವರ ಎದುರಲ್ಲಿ ಕುಳಿತುಕೊಂಡೇ ವಿವಿಧ ಯೋಜನೆಗಳ ಫಲಾನುಭವಿಗಳು ಯೋಜನೆಗಳಿಂದ ತಮಗಾದ ಪ್ರಯೋಜನದ ಜತೆಗೆ ತಮ್ಮ ಬೇಡಿಕೆಯನ್ನೂ ಮುಂದಿಟ್ಟರು.

ವಿದ್ಯಾಸಿರಿ ಯೋಜನೆಯ ಕುರಿತಂತೆ ಅನುಭವ ಹಂಚಿಕೊಂಡ ವಿದ್ಯಾರ್ಥಿಗಳಲ್ಲಿ ಓರ್ವರಾದ ಡೇಲನ್ ಎಂಬವರು ಮಾತನಾಡುತ್ತಾ, ಈ ಯೋಜನೆಯ ಕುರಿತಂತೆ ಸೂಕ್ತ ಪ್ರಚಾರದ ಮೂಲಕ ಇನ್ನಷ್ಟು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲು ಸರಕಾರ ವ್ಯವಸ್ಥೆ ಮಾಡಬೇಕು ಎಂದರು. ಅನ್ನ ಭಾಗ್ಯ ಯೋಜನೆಯಡಿ ಸೀಮೆಎಣ್ಣೆಯ ಪ್ರಮಾಣವನ್ನು ಹೆಚ್ಚಿಸಿ ಎಂಬ ಬೇಡಿಕೆ ಕುಪ್ಪೆಪದವಿನ ಅಹ್ಮದ್ ಬಾವಾ ಎಂಬವರದ್ದಾಗಿತ್ತು. ಪಡಿತರ ಕೂಪನ್ ವ್ಯವಸ್ಥೆ ಅಗತ್ಯವಿಲ್ಲ ಎಂಬ ಆಕ್ಷೇಪದ ಜತೆಗೆ ಆನ್‌ಲೈನ್ ಕೂಪನ್ ವ್ಯವಸ್ಥೆಯನ್ನು ಮಾಡಬೇಕೆಂಬ ಬೇಡಿಕೆಯೂ ಫಲಾನುಭವಿಗಳಿಂದ ವ್ಯಕ್ತವಾಯಿತು.

ಕ್ಷೀರ ಭಾಗ್ಯ ಯೋಜನೆಯಡಿ ಮಕ್ಕಳಿಗೆ ಪೌಷ್ಠಿಕ ಆಹಾರ ದೊರೆಯುವಂತಾಗಿದೆ. ಹಾಲಿನ ಜತೆ ಹಣ್ಣು ಹಂಪಲುಗಳನ್ನೂ ನೀಡಬೇಕು ಎಂದು ಅತ್ತಾವರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯೋಗೀಶ್‌ನ ಆಗ್ರಹವಾದರೆ, ಅನುದಾನಿತ ಶಾಲೆಗಳಿಗೂ ಕ್ಷೀರ ಭಾಗ್ಯ ದೊರೆಯಲಿ ಎಂಬ ಬೇಡಿಕೆಯನ್ನು ಪಾಂಡೇಶ್ವರ ದ.ಕ.ಜಿ.ಪಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕ ಮಂಡಿಸಿದರು.

ಅಪ್ಪ, ಅಮ್ಮ ಇಲ್ಲದೆ, ತಮ್ಮನ ಜತೆ ಆಶ್ರಯ ಮಾಡಿಕೊಂಡಿರುವ ಅವಿವಾಹಿತೆಯಾದ ತನಗೆ ಮನಸ್ವಿನಿ ಯೋಜನೆಯಡಿ ಸಿಗುವ ಮಾಸಿಕ ಪಿಂಚಣಿ 500 ರೂ. ಬಹಳಷ್ಟು ಉಪಯೋಗವಾಗುತ್ತಿದೆ. ಈ ಮೊತ್ತವನ್ನು ಇನ್ನಷ್ಟು ಏರಿಸಿದರೆ, ಮತ್ತಷ್ಟು ಉಪಯೋಗವಾಗಬಹುದು ಎಂಬ ಆಗ್ರಹ ಪುಷ್ಪಾ ಎಂಬವರದ್ದಾಗಿತ್ತು. ಮಂಗಳಮುಖಿಯರಿಗೆ ಮೈತ್ರಿ ಯೋಜನೆಯಡಿ ಸಿಗುವ ಪಿಂಚಣಿಯಿಂದ ಪ್ರಯೋಜನವಾಗಿದೆ. ಆದರೆ ಆಶ್ರಯದ ವ್ಯವಸ್ಥೆ ಇಲ್ಲದೆ ಮಂಗಳಮುಖಿಯರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂಬ ಆಗ್ರಹ ಪ್ರೇಮಾ ಹಾಗೂ ಯೋಜನೆಯ ಇತರ ಫಲಾನುಭವಿಗಳದ್ದಾಗಿತ್ತು. ಗಂಡನನ್ನು ಕಳೆದುಕೊಂಡು ಮಗಳ ಮದುವೆ ತೀರಾ ಸಂಕಷ್ಟದಲ್ಲಿದ್ದ ತನಗೆ ಸರಕಾರದ ಬಿದಾಯಿ ಯೋಜನೆಯಡಿ ದೊರಕಿದ ಸಹಾಯಧನ ಬಹಳಷ್ಟು ನೆರವು ನೀಡಿದೆ. ಇನ್ನಷ್ಟು ಫಲಾನುಭವಿಗಳಿಗೆ ಈ ಯೋಜನೆ ಲಭ್ಯವಾಗುವ ಮೂಲಕ ಬಡ ಹೆಣ್ಣು ಮಕ್ಕಳ ಬಾಳು ಹಸನಾಗಲಿ ಎಂದು ಪೌಲಿನ್ ಡಿಸೋಜಾ ಆನಂದ ಬಾಷ್ಪದೊಂದಿಗೆ ಅನುಭವ ಹಂಚಿಕೊಂಡರು.

ಹೀಗೆ ಸಂವಾದದಲ್ಲಿ ಹರೀಶ್ ಸಾಂತ್ವಾನ ಯೋಜನೆ, ಮತ್ಸಾಶ್ರಯ ಸೇರಿದಂತೆ 20 ವಿವಿಧ ಯೋಜನೆಗಳಡಿ ಪ್ರಯೋಜನ ಪಡೆದ ಆಯ್ದ ಫಲಾನುಭವಿಗಳು ಸಚಿವರ ಜತೆ ಸಂವಾದ ನಡೆಸಿದರು. ಕ್ಷೀರ ಭಾಗ್ಯ ಯೋಜನೆ ಕುರಿತಂತೆ ಅಂಗನವಾಡಿ ಪುಟಾಣಿಗಳು ಕೂಡಾ ತಮ್ಮ ಶಿಕ್ಷಕರು ಹೇಳಿಕೊಟ್ಟಂತೆ ವೇದಿಕೆಯಲ್ಲಿ ಸಚಿವರ ಜತೆ ಸಂವಾದ ನಡೆಸಿದ ಪ್ರಸಂಗವೂ ಕಾರ್ಯಕ್ರಮದಲ್ಲಿ ನಡೆಯಿತು.

ಪ್ರತಿ ಯೋಜನೆಯ ಫಲಾನುಭವಿಗಳ ಸಂವಾದದ ಬಳಿಕ ಬೇಡಿಕೆಗಳಿಗೆ ಪ್ರತಿಕ್ರಿಯಿಸುತ್ತಾ ಸರಕಾರಿ ಮಟ್ಟದಲ್ಲಿ ಅವುಗಳ ಈಡೇರಿಕೆಗೆ ಪ್ರಯತ್ನ ಮಾಡುವುದಾಗಿ ಸಚಿವ ರೈ ಭರವಸೆ ನೀಡಿದರು.

ವಿದ್ಯಾಸಿರಿ ಯೋಜನೆಯಡಿ ಹಿಂದುಳಿದ ವರ್ಗಗಳ 5359 ವಿದ್ಯಾರ್ಥಿಗಳಿಗೆ 340.45 ಲಕ್ಷ ರೂ., ಹಾಗೂ ಅಲ್ಪಸಂಖ್ಯಾತ ವಿಭಾಗದ 7,614 ವಿದ್ಯಾರ್ಥಿಗಳಿಗೆ 456.84 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅನ್ನಭಾಗ ಯೋಜನೆಯಡಿ 13-14ನೆ ಸಾಲಿನಲ್ಲಿ 34 ಕೋಟಿ ರೂ., 14-15ನೆ ಸಾಲಿನಲ್ಲಿ 43.62 ಕೋಟಿ ರೂ. ಹಾಗೂ 15-16ನೆ ಸಾಲಿನಲ್ಲಿ 30.28 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ಒದಗಿಸಲಾಗಿದೆ ಎಂದು ಸಚಿವ ರೈ ತಿಳಿಸಿದರು. ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲೆಲ್ಲಿ 2,102 ಅಂಗನವಾಡಿಗಳ 1,09,279 ಮಕ್ಕಳಿಗೆ ಹಾಲು ನೀಡಲಾಗುತ್ತಿದ್ದು, ಕ್ಷೀರ ಧಾರ ಯೋಜನೆಯಡಿ 13-14ನೆ ಸಾಲಿನಲ್ಲಿ 18.78 ಕೋಟಿ ರೂ., 14-15ನೆ ಸಾಲಿನಲ್ಲಿ 22.98 ಕೋಟಿ ರೂ., 15-16ನೆ ಸಾಲಿನಲ್ಲಿ 27.68 ಕೋಟಿ ರೂ. ಸಬ್ಸಿಡಿಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ಮೂರು ವರ್ಷಗಳ ಅವಧಿಯಲ್ಲಿ ವಿವಿಧ ಯೋಜನೆಗಳ ಮೂಲಕ ಕರ್ನಾಟಕವನ್ನು ಋಣಮುಕ್ತ ರಾಜ್ಯವನ್ನಾಗಿಸುವ ಜತೆಗೆ, ಜನಸಾಮಾನ್ಯರಿಗೆ ಸ್ವಾಭಿಮಾನದ ಬದುಕಿಗೆ ಪೂರಕವಾದ ಯೋಜನೆಗಳ ಯಶಸ್ವಿಯಾಗಿ ಜಾರಿಗೊಳಿಸಿ, ಪ್ರಣಾಳಿಕೆಯಲ್ಲಿ ನೀಡಲಾದ ಆಶ್ವಾಸನೆಗಳಲ್ಲಿ ಶೇ. 85ರಷ್ಟನ್ನು ಪೂರೈಸಲಾಗಿದೆ ಎಂದು ಸಚಿವ ರೈ ಹೇಳಿದರು.

ಉದ್ಘಾಟನಾ ಸಮಾರಂಭದ ವೇಳೆ ವೇದಿಕೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಅಭಯ ಚಂದ್ರ ಜೈನ್, ಶಾಸಕ ಮೊಯ್ದಿನ್ ಬಾವ, ಮೇಯರ್ ಹರಿನಾಥ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ, ಮಂಗಳೂರು ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕವಿತಾ ಸನಿಲ್, ಲ್ಯಾನ್ಸಿ ಲೋಟ್ ಪಿಂಟೋ, ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್, ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮೊದಲಾದವರು ಉಪಸ್ಥಿತರಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X