Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐತಿಹಾಸಿಕ ಮಸೂದೆ ಅಂಗೀಕರಿಸಿದ ಪಾಕ್...

ಐತಿಹಾಸಿಕ ಮಸೂದೆ ಅಂಗೀಕರಿಸಿದ ಪಾಕ್ ಸಂಸತ್ತು

ವಾರ್ತಾಭಾರತಿವಾರ್ತಾಭಾರತಿ27 Sept 2016 7:43 PM IST
share
ಐತಿಹಾಸಿಕ ಮಸೂದೆ ಅಂಗೀಕರಿಸಿದ ಪಾಕ್ ಸಂಸತ್ತು

ಇಸ್ಲಾಮಾಬಾದ್,ಸೆ.27: ಐತಿಹಾಸಿಕ ಕ್ರಮವೊಂದರಲ್ಲಿ ಪಾಕಿಸ್ತಾನ ಸಂಸತ್ತು ಕೊನೆಗೂ ಹಿಂದು ವಿವಾದ ಮಸೂದೆಯನ್ನು ಅಂಗೀಕರಿಸಿದೆ. ಇದರಿಂದಾಗಿ ದೇಶದ ಅಲ್ಪಸಂಖ್ಯಾತ ಹಿಂದುಗಳು ತಮ್ಮ ಮದುವೆಗಳನ್ನು ನೋಂದಾಯಿಸಿಕೊಳ್ಳುವುದು ಸಾಧ್ಯವಾಗಲಿದೆ. ಸೋಮವಾರ ಮಾನವ ಹಕ್ಕುಗಳ ಸಚಿವ ಕಮ್ರಾನ್ ಮಿಕಾಯಿಲ್ ಅವರು ಕೆಳಮನೆ ಅಥವಾ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಈ ಬಹು ವಿಳಂಬಿತ ಮಸೂದೆಯನ್ನು ಮಂಡಿಸಿದ್ದು, ಸದನವು ಪ್ರಪ್ರಥಮ ರಾಷ್ಟ್ರೀಯ ಕಾನೂನನ್ನು ಅಂಗೀಕರಿಸಿತು.

ಮಸೂದೆಯು ಹಿಂದುಗಳಿಗೆ ವಿವಾಹವಾಗಲು 18 ವರ್ಷಗಳ ಕನಿಷ್ಠ ವಯಸ್ಸನ್ನು ನಿಗದಿಗೊಳಿಸಿದೆ. ಇತರ ಧರ್ಮಗಳ ನಾಗರಿಕರಿಗೆ ಶಾಸನಬದ್ಧ ಕನಿಷ್ಠ ವಿವಾಹ ವಯಸ್ಸು ಪುರುಷರಿಗೆ 18 ಮತ್ತು ಮಹಿಳೆಯರಿಗೆ 16 ವರ್ಷಗಳಾಗಿವೆ.

ಕನಿಷ್ಠ ವಯಸ್ಸಿಗೆ ಸಂಬಂಧಿಸಿದಂತೆ ಕಾನೂನು ಉಲ್ಲಂಘಿಸಿದರೆ ಆರು ತಿಂಗಳ ಜೈಲುವಾಸದ ಜೊತೆಗೆ 5,000ರೂ.ದಂಡವನ್ನೂ ತುಂಬಬೇಕಾಗುತ್ತದೆ.

ಪಾಕಿಸ್ತಾನದಲ್ಲಿಯ 20ರಿಂದ 24ರ ವಯೋಮಿತಿಯ ಶೇ.21ರಷ್ಟು ಮಹಿಳೆಯರು 18 ವರ್ಷ ತುಂಬುವ ಮುನ್ನವೇ ಮೊದಲ ಮದುವೆಯಾಗುತ್ತಾರೆ ಮತ್ತು ಶೇ.3ರಷ್ಟು ಮಹಿಳೆಯರು 16 ವರ್ಷಕ್ಕೆ ಮೊದಲೇ ಮದುವೆಯಾಗುತ್ತಾರೆ ಎಂದು ಯುನಿಸೆಫ್ ಅಂದಾಜಿಸಿದೆ.

ಮದುವೆಯ ದಾಖಲೆ ಹಿಂದು ಮಹಿಳೆಯರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸಲಿದೆ ಎಂದು ಹೇಳಿರುವ ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ರೊಹ್ರಾ ಯೂಸುಫ್, ಮದುವೆ ನೋದಣಿಯಾದರೆ ಕನಿಷ್ಠ ಕೆಲವು ಹಕ್ಕುಗಳು ಅವರಿಗೆ ಪ್ರಾಪ್ತವಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ನಿರ್ದಿಷ್ಟವಾಗಿ ವಿಧವೆಯರು ಸರಕಾರದ ಸೌಲಭ್ಯ ಪಡೆಯಲು ತಾವು ವಿವಾಹಿತರು ಎಂದು ರುಜುವಾತು ಪಡಿಸಲು ಸಾಧ್ಯವಿರಲಿಲ್ಲ.

ನೂತನ ಕಾನೂನು ವಿಧವೆಯರು ತಮ್ಮ ಪತಿಯ ನಿಧನದ ಆರು ತಿಂಗಳ ಬಳಿಕ ಪುನರ್‌ವಿವಾಹವಾಗಲು ಶಾಸನಬದ್ಧ ಅವಕಾಶವನ್ನು ಕಲ್ಪಿಸಿದೆ.

ಈ ಕಾನೂನು ಹಿಂದುಗಳಿಗೆ ವಿಚ್ಛೇದನದ ಹಕ್ಕನ್ನೂ ನೀಡಿದೆ. ಪತಿಯ ಅಲಕ್ಷ,ದ್ವಿಪತ್ನಿತ್ವ ಅಥವಾ 16 ವರ್ಷಕ್ಕಿಂತ ಮೊದಲೇ ಮದುವೆಯಾಗಿದೆ ಎಂಬ ಕಾರಣಕ್ಕೆ ವಿಚ್ಛೇದನವನ್ನು ಕೋರುವ ಹೆಚ್ಚುವರಿ ಹಕ್ಕನ್ನು ಮಹಿಳೆಯರಿಗೆ ನೀಡಿದೆ.

ಆದರೆ ಅಪಹರಣ ಮತ್ತು ಮತಾಂತರ ವಿಷಯದಲ್ಲಿ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಮಾನವ ಹಕ್ಕು ಕಾರ್ಯಕರ್ತರು ಎಚ್ಚರಿಸಿದ್ದಾರೆ.

ಬಲವಂತದ ಮದುವೆ ನಡೆದಿದೆ ಎಂಬ ಶಂಕೆಯಿದ್ದಾಗ ಆ ಬಗ್ಗೆ ತನಿಖೆ ನಡೆಸಬೇಕು. ನ್ಯಾಯಾಲಯ ಸೇರಿದಂತೆ ಯಾರೂ ತಮ್ಮ ಗೋಳು ಕೇಳಿಸಿಕೊಳ್ಳುತ್ತಿಲ್ಲ ಎಂದು ಹಿಂದು ಸಮುದಾಯದ ಸದಸ್ಯರು ಪ್ರಸಕ್ತ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಯೂಸುಫ್ ಹೇಳಿದರು.

10 ತಿಂಗಳ ಸುದೀರ್ಘ ಚರ್ಚೆಯ ಬಳಿಕ ರಾಷ್ಟ್ರೀಯ ಅಸೆಂಬ್ಲಿ ಮಸೂದೆಯನ್ನು ಅಂಗೀಕರಿಸಿದೆ. ಈಗ ಸೆನೆಟ್ ಅದನ್ನು ಅಂಗೀಕರಿಸಬೇಕಾಗಿದ್ದು, ಹೆಚ್ಚು ವಿಳಂಬವಿಲ್ಲದೆ ಅದು ಅಂಗೀಕಾರವಾಗುವ ನಿರೀಕ್ಷೆಯಿದೆ.

  ಮುಸ್ಲಿಮರೇ ಬಹುಸಂಖ್ಯಾಕರಾಗಿರುವ 190 ಮಿ.ಜನಸಂಖ್ಯೆಯ ಪಾಕಿಸ್ತಾನದಲ್ಲಿ ಹಿಂದುಗಳ ಸಂಖ್ಯೆ ಅಂದಾಜು ಶೇ.1.6ರಷ್ಟಿದೆ. ಆದರೆ 1947ರಲ್ಲಿ ಪಾಕಿಸ್ತಾನಕ್ಕೆ ಸ್ವಾತಂತ್ರ ದೊರೆತಾಗಿನಿಂದಲೂ ತಮ್ಮ ಮದುವೆಗಳನ್ನು ನೋಂದಾಯಿಸುವ ಯಾವುದೇ ಕಾನೂನು ವ್ಯವಸ್ಥೆಯಿಂದ ಅವರು ವಂಚಿತರಾಗಿದ್ದಾರೆ.

ಇನ್ನೊಂದು ಪ್ರಮುಖ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯವಾಗಿರುವ ಕ್ರೈಸ್ತರು ತಮ್ಮ ಮದುವೆಗಳನ್ನು ನೋಂದಾಯಿಸಿಕೊಳ್ಳಲು 1870ರ ಬ್ರಿಟಿಷ್ ಕಾನೂನಿನಲ್ಲಿ ಅವಕಾಶ ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X