Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಪಾಕಿಸ್ತಾನದಿಂದ ನಂ.1 ಸ್ಥಾನ...

ಭಾರತಕ್ಕೆ ಪಾಕಿಸ್ತಾನದಿಂದ ನಂ.1 ಸ್ಥಾನ ವಶಪಡಿಸಿಕೊಳ್ಳಲು ಇನ್ನೊಂದು ಗೆಲುವು ಅಗತ್ಯ

ಐಸಿಸಿ ಟೆಸ್ಟ್ ರ್ಯಾಂಕಿಂಗ್:

ವಾರ್ತಾಭಾರತಿವಾರ್ತಾಭಾರತಿ27 Sept 2016 11:47 PM IST
share
ಭಾರತಕ್ಕೆ ಪಾಕಿಸ್ತಾನದಿಂದ ನಂ.1 ಸ್ಥಾನ ವಶಪಡಿಸಿಕೊಳ್ಳಲು ಇನ್ನೊಂದು ಗೆಲುವು ಅಗತ್ಯ

ದುಬೈ, ಸೆ.27: ಕೋಲ್ಕತಾದಲ್ಲಿ ಶುಕ್ರವಾರ ನ್ಯೂಝಿಲೆಂಡ್ ವಿರುದ್ಧ ಆರಂಭವಾಗಲಿರುವ ಎರಡನೆ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದರೆ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ವಶಪಡಿಸಿಕೊಳ್ಳುವ ಸಾಧ್ಯತೆಯಿದೆ.

 ಕಾನ್ಪುರದಲ್ಲಿ ಆಡಿದ ತನ್ನ 500ನೆ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ ಪಾಕಿಸ್ತಾನ ತಂಡದಿಂದ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಗದೆಯನ್ನು ವಶಪಡಿಸಿಕೊಳ್ಳುವುದರಿಂದ ಇನ್ನು ಒಂದು ಗೆಲುವಿನಿಂದ ಹಿಂದುಳಿದಿದೆ. ಕಿವೀಸ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಮೊದಲು ಭಾರತ ತಂಡ ನಂ.1 ತಂಡ ಪಾಕಿಸ್ತಾನದಿಂದ ಕೇವಲ ಒಂದು ಅಂಕದಿಂದ ಹಿಂದುಳಿದಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ನಂ.1 ಪಟ್ಟದಿಂದ ಕೆಳಗಿಳಿಸಲು ಕೊಹ್ಲಿ ಪಡೆಗೆ ಇನ್ನು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಬೇಕಾಗಿದೆ.

ಕಾನ್ಪುರ ಟೆಸ್ಟ್ ಪಂದ್ಯದ ಹೀರೊ ಆಫ್-ಸ್ಪಿನ್ನರ್ ಆರ್.ಅಶ್ವಿನ್ ಐಸಿಸಿ ಬೌಲರ್‌ಗಳ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಸೋಮವಾರ ಕೊನೆಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 225 ರನ್‌ಗೆ 10 ವಿಕೆಟ್‌ಗಳನ್ನು ಕಬಳಿಸಿದ ಅಶ್ವಿನ್ ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್‌ರನ್ನು ಒಂದು ಅಂಕದಿಂದ ಮುನ್ನಡೆ ಸಾಧಿಸಿದರು.

ಅಶ್ವಿನ್ ನಂ.1 ರ್ಯಾಂಕಿನಲ್ಲಿರುವ ದಕ್ಷಿಣ ಆಫ್ರಿಕದ ಡೇಲ್ ಸ್ಟೇಯ್ನಿರಿಂದ ಕೇವಲ 7 ಅಂಕಗಳಿಂದ ಹಿಂದಿದ್ದಾರೆ. ಕೋಲ್ಕತಾದಲ್ಲಿ ಅಶ್ವಿನ್ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿದರೆ ಎರಡನೆ ಬಾರಿ ವಿಶ್ವದ ನಂ.1 ಬೌಲರ್ ಆಗುವ ಅವಕಾಶ ಸಿಗಲಿದೆ.

ಕಳೆದ ವರ್ಷ ಬಾಕ್ಸಿಂಗ್ ಡೇ ಟೆಸ್ಟ್‌ನ ಬಳಿಕ ಅಶ್ವಿನ್ ನಂ.1 ರ್ಯಾಂಕಿಗೆ ಏರಿದ್ದರು. ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ ನ್ಯೂಝಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಒಂದು ಸ್ಥಾನ ಭಡ್ತಿ ಪಡೆದು ದ್ವಿತೀಯ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯದ ನಾಯಕ ಸ್ಟೀವನ್ ಸ್ಮಿತ್(906 ಅಂಕ) ನಂ.1 ಸ್ಥಾನದಲ್ಲಿದ್ದಾರೆ. ಭಾರತದ ಯುವ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 5 ಸ್ಥಾನ ಮೇಲಕ್ಕೇರಿ 57ನೆ ಸ್ಥಾನ ತಲುಪಿದ್ದಾರೆ. ರೋಹಿತ್ ಶರ್ಮ 52ನೆ ಸ್ಥಾನಕ್ಕೇರಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜೀವನಶ್ರೇಷ್ಠ 450 ಅಂಕ ಗಳಿಸಿರುವ ಅಶ್ವಿನ್ ನಂ.1 ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X