Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ವರಕವಿ’ಯ ಪುತ್ರ, ಹಿರಿಯ ಸಾಹಿತಿ...

‘ವರಕವಿ’ಯ ಪುತ್ರ, ಹಿರಿಯ ಸಾಹಿತಿ ಡಾ.ವಾಮನ ಬೇಂದ್ರೆ ವಿಧಿವಶ

ವಾರ್ತಾಭಾರತಿವಾರ್ತಾಭಾರತಿ28 Sept 2016 10:39 AM IST
share
‘ವರಕವಿ’ಯ ಪುತ್ರ, ಹಿರಿಯ ಸಾಹಿತಿ ಡಾ.ವಾಮನ ಬೇಂದ್ರೆ ವಿಧಿವಶ

ಹುಬ್ಬಳ್ಳಿ, ಸೆ.28: ವರಕವಿ ದ.ರಾ.ಬೇಂದ್ರೆಯವರ ದ್ವಿತೀಯ ಪುತ್ರ ಹಿರಿಯ ಸಾಹಿತಿ ಡಾ.ವಾಮನ ಬೇಂದ್ರೆ ಇಂದು ಮುಂಜಾವ 4:30ಕ್ಕೆ ನಿಧನರಾದರು.
ಅವರಿಗೆ 82 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಧಾರವಾಡದ ಅವರ ನಿವಾಸ ಮಾತಾಕ್ಕೆ ತರಲಾಗಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮೃತರು ಓರ್ವ ಪುತ್ರಿ, ಸಹೋದರಿ ಹಾಗೂ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.
ಸಂಜೆ ಹೊಸ ಯಲ್ಲಾಪುರದ ರುದ್ರಭೂಮಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಲಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ 1935ರ ಜುಲೈ 28ರಂದು ಜನಿಸಿದ್ದ ವಾಮನ ಬೇಂದ್ರೆಯವರು ವರಕವಿ ದ.ರಾ.ಬೇಂದ್ರೆ, ತಾಯಿ ಲಕ್ಷ್ಮೀಬಾಯಿ ದಂಪತಿಯ ಪುತ್ರ.
 ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿ.ಎ. ಮತ್ತು ಎಂ.ಎ. ಪದವಿ ಪಡೆದಿದ್ದ ವಾಮನ ಬೇಂದ್ರೆ, ಪುಣೆ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ‘ಲಕ್ಷ್ಮೀಶನ ಜೈಮಿನಿ ಭಾರತ ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದಿದ್ದಾರೆ.
ಬಳಿಕ ಧಾರವಾಡದ ವಿದ್ಯಾರಣ್ಯ ಕಿರಿಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಕಿಟಲ್ ಕಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು.

ಕನ್ನಡ, ಮರಾಠಿ, ಇಂಗ್ಲಿಷ್, ಹಿಂದಿ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಿದ್ದರು. ಸಂಗೀತ, ನಾಟಕ, ಭಾಷಣ ಮುಂತಾದ ಕಲೆಗಳನ್ನು ಸಹ ತಮ್ಮ ಹವ್ಯಾಸವಾಗಿರಿಸಿಕೊಂಡಿದ್ದ ವಾಮನ ಬೇಂದ್ರೆಯವರ ಪ್ರಥಮ ಕವನ ‘ಮೊದಲ ತೊದಲು’. ನಂತರ ‘ಅನಂತಧಾರೆ’, ‘ಸ್ಪಂದನ’ ಪ್ರಕಟಗೊಂಡವು. ‘ಸೊಂಡಿಲ ಗಣಪ್ಪಬಂದ’, ‘ಸ್ಪರ್ಶ’ ಹಾಗೂ ಇತರ ನಾಟಕಗಳೂ ಸೇರಿ ಮೂವತ್ತಕ್ಕೂ ಹೆಚ್ಚು ರೇಡಿಯೊ ನಾಟಕಗಳ ರಚನೆ ಮಾಡಿದ್ದರು.
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಿದ್ಯಾರಣ್ಯ ಪ್ರಶಸ್ತಿ, ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪರಶುರಾಮ ಪ್ರಶಸ್ತಿ, ಕನ್ನಡಮರಾಠಿ ಭಾಷಾ ಬಾಂಧವ್ಯ ಪ್ರಶಸ್ತಿ, ಶ್ರೀವರದರಾಜ ಆದ್ಯ ಸಾಹಿತ್ಯ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿ ಗೌರವಗಳು ವಾಮನ ಬೇಂದ್ರೆಯವರಿಗೆ ಸಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X