Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಖ್ಲಾಕ್ ಕುಟುಂಬ ಗೋಹತ್ಯೆ...

ಅಖ್ಲಾಕ್ ಕುಟುಂಬ ಗೋಹತ್ಯೆ ಮಾಡಿತ್ತೆನ್ನುವುದಕ್ಕೆ ಸಾಕ್ಷ್ಯವಿಲ್ಲ: ಪೊಲೀಸರು

ದಾದ್ರಿ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Sept 2016 6:59 PM IST
share
ಅಖ್ಲಾಕ್ ಕುಟುಂಬ ಗೋಹತ್ಯೆ ಮಾಡಿತ್ತೆನ್ನುವುದಕ್ಕೆ ಸಾಕ್ಷ್ಯವಿಲ್ಲ: ಪೊಲೀಸರು

ಲಕ್ನೋ: ದಾದ್ರಿಯಲ್ಲಿ ಮತಾಂಧ ಗುಂಪಿನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮೊಹಮ್ಮದ್ ಅಖ್ಲಾಕ್ ಮತ್ತು ಅವರ ಕುಟುಂಬದವರು ಗೋಹತ್ಯೆಯನ್ನು ಮಾಡಿದ್ದರು ಎನ್ನುವುದಕ್ಕೆ ಯಾವುದೇ ಸಾಕ್ಷಾಧಾರವಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಅಖ್ಲಾಕ್ ಕುಟುಂಬದವರ ವಿರುದ್ಧ ದಾಖಲಾಗಿದ್ದ ಗೋಹತ್ಯೆ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಅಲಹಾಬಾದ್ ಉಚ್ಚ ನ್ಯಾಯಾಲಯವು ತಿಂಗಳ ಹಿಂದೆ ತಡೆಯಾಜ್ಞೆ ನೀಡಿತ್ತು.

ಪೊಲೀಸರು ಸುರಾಜಪುರ ನ್ಯಾಯಾಲಯದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅಖ್ಲಾಕ್‌ರ ಸೋದರ ಜಾನ್ ಮೊಹಮ್ಮದ್ ಕರುವೊಂದರ ಕತ್ತನ್ನು ಸೀಳುತ್ತಿದ್ದನ್ನು ತಾವು ನೋಡಿದ್ದಾಗಿ ಹೇಳಿಕೊಂಡ ದಾದ್ರಿಯ ಬಿಸಾಡಾ ಗ್ರಾಮದ ನಿವಾಸಿಗಳು ದೂರನ್ನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನೊಯ್ಡೆದ ನ್ಯಾಯಾಲಯವೊಂದು ಕಳೆದ ಜುಲೈನಲ್ಲಿ ಅಖ್ಲಾಕ್ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಉತ್ತರ ಪ್ರದೇಶ ಪೊಲೀಸರಿಗೆ ಸೂಚಿಸಿತ್ತು. ಇದರ ವಿರುದ್ಧ ಅಖ್ಲಾಕ್ ಕುಟುಂಬವು ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿತ್ತು.

ತನಿಖಾಧಿಕಾರಿಗಳು ಹಲವರು ಬಾರಿ ಗ್ರಾಮಕ್ಕೆ ಭೇಟಿ ನೀಡಿದ್ದರೂ ಗೋಹತ್ಯೆ ನಡೆದಿದ್ದಕ್ಕೆ ಯಾವುದೇ ಸಾಕ್ಷಾಧಾರಗಳು ಸಿಕ್ಕಿರಲಿಲ್ಲ ಎಂದು ವರದಿಯು ಹೇಳಿದೆ.

ಗೋಹತ್ಯೆ ನಡೆದಿತ್ತೆನ್ನಲಾದ ಇಡೀ ಪ್ರದೇಶವನ್ನು ವಿಧಿವಿಜ್ಞಾನ ತಜ್ಞರ ತಂಡ ಜಾಲಾಡಿದ್ದರೂ ಪ್ರಾಣಿರಕ್ತದ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಜು.15ರಂದು ಪ್ರಕರಣ ದಾಖಲಾಗಿದ್ದ ಜಾರ್ಚಾ ಪೊಲೀಸ್ ಠಾಣೆಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಅಖ್ಲಾಕ್ ಕುಟುಂಬದ ವಿರುದ್ಧ ಸಲ್ಲಿಸಲಾದ ದೂರಿನಲ್ಲಿ ಲೋಪಗಳಿದ್ದು ಇವುಗಳನ್ನು ಮುಕ್ತಾಯ ವರದಿಯಲ್ಲಿ ಕಾಣಿಸಲಾಗುವುದು ಎಂದು ತನಿಖಾ ತಂಡದ ಸದಸ್ಯರೋರ್ವರು ತಿಳಿಸಿದ್ದಾರೆ.

ಈದ್ ಸಂದರ್ಭದಲ್ಲಿ ಅಖ್ಲಾಕ್ ಮತ್ತು ಕುಟುಂಬದವರು ಗೋಹತ್ಯೆ ಮಾಡಿದ್ದಾರೆ ಮತ್ತು ಗೋಮಾಂಸವನ್ನು ಭಕ್ಷಿಸಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ 2015, ಸೆಪ್ಟೆಂಬರ್‌ನಲ್ಲಿ ಗುಂಪೊಂದು ಅಖ್ಲಾಕ್‌ರನ್ನು ಥಳಿಸಿ ಹತ್ಯೆಗೈದಿತ್ತು. ಅವರ ಪುತ್ರನನ್ನೂ ಗುಂಪು ಮಾರಣಾಂತಿಕವಾಗಿ ಥಳಿಸಿತ್ತು.

ಅಖ್ಲಾಕ್ ನಿವಾಸದಲ್ಲಿ ಪತ್ತೆಯಾಗಿದ್ದ ಮಾಂಸವು ದನದ್ದು ಅಥವಾ ಅದೇ ತಳಿಯದ್ದು ಎಂದು ವಿಧಿವಿಜ್ಞಾನ ವರದಿಯೊಂದು ಮೇ ತಿಂಗಳಲ್ಲಿ ಹೇಳಿತ್ತು. ಈ ವರದಿಯು ಕೊಲೆ ಅಪರಾಧ ಪ್ರಕರಣದ ಗಂಭೀರತೆಯನ್ನು ತಗ್ಗಿಸುವುದಿಲ್ಲ ಎಂದು ಉ.ಪ್ರದೇಶ ಪೊಲೀಸ್ ವರಿಷ್ಠ ಜಾವೇದ್ ಅಹ್ಮದ್ ಹೇಳಿದ್ದರು. ಉತ್ತರ ಪ್ರದೇಶದಲ್ಲಿ ಗೋಮಾಂಸ ಸೇವನೆ ಅಪರಾಧವಲ್ಲ,ಗೋಹತ್ಯೆ ಮಾತ್ರ ಅಪರಾಧವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X