Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮುಹಿಂಸೆಗೆ ದ್ವೇಷ ರಾಜಕಾರಣವೇ ಕಾರಣ:...

ಕೋಮುಹಿಂಸೆಗೆ ದ್ವೇಷ ರಾಜಕಾರಣವೇ ಕಾರಣ: ಆಲ್ಬನ್ ರೊಡ್ರಿಗಸ್

ವಾರ್ತಾಭಾರತಿವಾರ್ತಾಭಾರತಿ28 Sept 2016 8:09 PM IST
share
ಕೋಮುಹಿಂಸೆಗೆ ದ್ವೇಷ ರಾಜಕಾರಣವೇ ಕಾರಣ: ಆಲ್ಬನ್ ರೊಡ್ರಿಗಸ್

ಉಡುಪಿ, ಸೆ.28: ಬಾಬರಿ ಮಸೀದಿ ಧ್ವಂಸ, ಗುಜರಾತ್ ನರಮೇಧ, ಮಂಗಳೂರಿನಲ್ಲಿ ಕ್ರೈಸ್ತರ ದೇವಾಲಯಗಳ ಮೇಲೆ ದಾಳಿ ಹಾಗೂ ಗೋವಿನ ಹೆಸರಿನಲ್ಲಿ ನಡೆಸುತ್ತಿರುವ ಹಿಂಸೆಗಳಿಗೆ ಧ್ವೇಷ ರಾಜಕಾರಣವೇ ಕಾರಣ ಎಂದು ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಆರೋಪಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ‘ದ್ವೇಷ ರಾಜಕಾರಣ ನಿಲ್ಲಿಸಿ’ ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ಉಡುಪಿ ಜಿಲ್ಲಾ ಘಟಕದ ವತಿ ಯಿಂದ ಬುಧವಾರ ಉಡುಪಿ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಮನುಷ್ಯರು ತಿನ್ನುವ ಆಹಾರ ಪದ್ಧತಿಯ ಬಗ್ಗೆ ರಾಜಕಾರಣ ಮಾಡು ವುದು ಸರಿಯಲ್ಲ. ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ, ಕ್ರಿಶ್ಚಿಯನ್ನರು ಇಸ್ರೇಲ್‌ಗೆ ಹೋಗಲಿ ಎಂದು ಕೇಂದ್ರ ಸಚಿವರೊಬ್ಬರು ಹೇಳುತ್ತಿದ್ದಾರೆ. ಹಾಗಾದರೆ ಈ ದೇಶಕ್ಕೆ ನಾವು ಏನು ಕೊಡುಗೆ ನೀಡಿಲ್ಲವೇ ಎಂದು ಅವರು ಪ್ರಶ್ನಿಸಿದರು.
ಇಂದಿನ ಈ ಪರಿಸ್ಥಿತಿಯನ್ನು ಅವಲೋಕಿಸುವಾಗ ಮುಂದಿನ ದಿನಗಳು ಅಲ್ಪಸಂಖ್ಯಾತರಿಗೆ ಒಳ್ಳೆಯ ದಿನ ಆಗಿರುವುದಿಲ್ಲ. ಇದರ ವಿರುದ್ಧ ಹೋರಾ ಡಲು ಇರುವ ಅಸ್ತ್ರ ಅಂದರೆ ಚುನಾವಣೆ ಮಾತ್ರ. ನಾವು ಹಿಂಸೆಯನ್ನು ಹಿಂಸೆಯಿಂದ ಎದುರಿಸದೆ ಜನರನ್ನು ವಿದ್ಯಾವಂತರನ್ನಾಗಿಸಿ ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಬೇಕು ಎಂದರು.

ಕಾಂಗ್ರೆಸ್ ಮುಕ್ತ ಭಾರತ ಮಾಡುವುದೇ ನಮ್ಮ ಗುರಿ ಎಂದು ಹೇಳುತ್ತಿ ರುವ ಬಿಜೆಪಿ, ಹಾಗಾದರೆ ಜನರ ಮತ ಗಳಿಸಿ ಅಧಿಕಾರಕ್ಕೆ ಬಂದಿರುವುದು ಧ್ವೇಷ ರಾಜಕಾರಣಕ್ಕಾಗಿಯೇ ಹೊರತು ದೇಶದ ಅಭಿವೃದ್ಧಿಗಾಗಿ ಅಲ್ಲ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅವರು ಟೀಕಿಸಿದರು.

ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮಾತನಾಡಿ, ದೇಶದಲ್ಲಿ ದಲಿತರು, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾದ ಪ್ರಧಾನ ಮಂತ್ರಿ ಅಸಹಾಯಕತೆಯ ಮಾತನ್ನು ಆಡುತ್ತಿದ್ದಾರೆ. ಹಾಗಾಗಿ ಈ ದೇಶದ ನಿಯಂತ್ರಣ ಆರೆಸ್ಸೆಸ್ ಮುಖಂಡ ಮೋಹನ್ ಭಾಗವತರ ಕೈಯಲ್ಲಿದೆಯೇ ಹೊರತು ಪ್ರಧಾನ ಮಂತ್ರಿಯ ಕೈಯಲ್ಲಿ ಅಲ್ಲ ಎಂಬುದು ಗೊತ್ತಾಗುತ್ತದೆ ಎಂದು ದೂರಿದರು.

ಇವರಿಗೆ ಗೋವಿನ ಮೇಲಿನ ನಿಜವಾದ ಪ್ರೀತಿ ಇದ್ದರೆ ಮೊದಲು ಗೋ ಮಾಂಸ ರಫ್ತನ್ನು ನಿಲ್ಲಿಸಲಿ. ಯುಪಿಎ ಸರಕಾರದ ಅವಧಿಯಲ್ಲಿ ಗೋ ಮಾಂಸ ರಫ್ತಿನಲ್ಲಿ ಎರಡನೆ ಸ್ಥಾನದಲ್ಲಿದ್ದ ಭಾರತ, ಮೋದಿ ಆಡಳಿತದಲ್ಲಿ ಮೊದಲನೆ ಸ್ಥಾನಕ್ಕೆ ಬಂದಿದೆ. ಗೋವು ಇವರಿಗೆ ಬೇಕಾಗಿರುವುದು ಪೂಜೆಗೆ ಅಲ್ಲ, ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಚುನಾವಣೆಯಲ್ಲಿ ಸೀಟು ಗೆಲ್ಲಲು ಎಂದು ಅವರು ಟೀಕಿಸಿದರು.

ಪಿಎಫ್‌ಐ ಜಿಲ್ಲಾಧ್ಯಕ್ಷ ಫಝೀಲ್ ಅಹ್ಮದ್ ಉಪಸ್ಥಿತರಿದ್ದರು. ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಲಂ ಬ್ರಹ್ಮಾವರ ಸ್ವಾಗತಿಸಿದರು. ಹನೀಫ್ ಮೂಳೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X