Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆತ್ಮಹತ್ಯೆ ಮಾಡಿದ ಐಎಎಸ್ ಅಧಿಕಾರಿಯ ಡೆತ್...

ಆತ್ಮಹತ್ಯೆ ಮಾಡಿದ ಐಎಎಸ್ ಅಧಿಕಾರಿಯ ಡೆತ್ ನೋಟ್ ನಲ್ಲಿ ಅಮಿತ್ ಷಾ ಹೆಸರು !

ವಾರ್ತಾಭಾರತಿವಾರ್ತಾಭಾರತಿ28 Sept 2016 8:27 PM IST
share
ಆತ್ಮಹತ್ಯೆ ಮಾಡಿದ ಐಎಎಸ್ ಅಧಿಕಾರಿಯ ಡೆತ್ ನೋಟ್ ನಲ್ಲಿ ಅಮಿತ್ ಷಾ ಹೆಸರು !

ಹೊಸದಿಲ್ಲಿ, ಸೆ. 28 : ಇತ್ತೀಚಿಗೆ ತನ್ನ ಪುತ್ರನ ಜೊತೆ ಆತ್ಮಹತ್ಯೆ ಮಾಡಿಕೊಂಡ ಕಾರ್ಪೊರೇಟ್ ವ್ಯವಹಾರಗಳ  ಮಾಜಿ ಮಹಾ ನಿರ್ದೇಶಕ ಬಿ. ಕೆ. ಬನ್ಸಲ್ ಅವರ ಡೆತ್ ನೋಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪತ್ನಿ ಹಾಗು ಪುತ್ರಿ ತಮ್ಮ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾದ ಎರಡು ತಿಂಗಳ ಬಳಿಕ ಬನ್ಸಲ್ ತಮ್ಮ ಪುತ್ರನ ಜೊತೆ ಸಾವಿಗೆ ಶರಣಾಗಿದ್ದಾರೆ. 

ಸಾವಿಗೆ ಮೊದಲು ತಂದೆ, ಮಗ ಇಬ್ಬರೂ ಪ್ರತ್ಯೇಕ ಡೆತ್ ನೋಟ್ ಬರೆದಿದ್ದು ಸಿಬಿಐ ದಾಳಿಯಿಂದ ನಾವು ತೀವ್ರ ಅವಮಾನಿತರಾಗಿದ್ದು ಬದುಕಲು ಬಯಸಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಡೆತ್ ನೋಟ್ ನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರ ಹೆಸರು ಇರುವುದು ಚರ್ಚೆಗೆ ಗ್ರಾಸವಾಗಿದೆ. 

ತಮ್ಮ ಡೆತ್ ನೋಟ್ ನ ನಾಲ್ಕನೇ ಪುಟದಲ್ಲಿ " ಡಿಐಜಿ ಸಂಜೀವ್ ಗೌತಮ್, ಇಬ್ಬರು ಮಹಿಳಾ ಅಧಿಕಾರಿಗಳು ಹಾಗು ಹವಾಲ್ದಾರ್ ರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ. ಡಿಐಜಿ ಒಮ್ಮೆ ಹೇಳಿದ್ದರು, " ನಾನು ಅಮಿತ್ ಷಾ ಅವರ ಜನ, ನನ್ನನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ನಿನ್ನ ಪತ್ನಿ ಹಾಗು ಮಗಳಿಗೆ ನಾನು ಏನು ಮಾಡುತ್ತೇನೆಂದು ಕೇಳಿದರೆ ಜನರು ನಡುಗಿಬಿಡಬೇಕು..." 

" ಬನ್ಸಲ್ ಹಾಗು ಅವರ ಪುತ್ರ ಯೋಗೇಶ್ ಬನ್ಸಲ್ ಬರೆದ ಕೈಬರಹದ ಡೆತ್ ನೋಟ್ ಅನ್ನು ನಾವು ದೆಹಲಿ ಪೊಲೀಸರಿಂದ ಪಡೆದಿದ್ದೇವೆ. ಪ್ರಕರಣವನ್ನು ಪರಿಶೀಲಿಸಿದ್ದು ಆರೋಪಗಳ ಕುರಿತು ತನಿಖೆ ನಡೆಸಲಿದ್ದೇವೆ. ನಿಯಮ ಉಲ್ಲಂಘನೆ ಕಂಡು ಬಂದರೆ ಸಿಬಿಐ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು " ಎಂದು ಸಿಬಿಐ ಹೇಳಿದೆ ಎಂದು ಸಿಬಿಐ ಹೇಳಿಕೆಯನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿ ಮಾಡಿದೆ. 

ಪ್ರತಿಷ್ಠಿತ ಫಾರ್ಮಾ ಕಂಪೆನಿಯೊಂದರಿಂದ ಲಂಚ ಪಡೆದ ಆರೋಪದ ಮೇಲೆ ಆಗ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಅಪರ ಕಾರ್ಯದರ್ಶಿ ಮಟ್ಟದ ಅಧಿಕಾರಿಯಾಗಿದ್ದ ಬನ್ಸಲ್ ಅವರನ್ನು ಜುಲೈ 16 ರಂದು ಬಂಧಿಸಲಾಗಿತ್ತು. 

ಅಮಿತ್ ಷಾ ಹೆಸರು ಡೆತ್ ನೋಟ್ ನಲ್ಲಿ ಬಂದಿರುವುದನ್ನು ಪ್ರಸ್ತಾಪಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಬಗ್ಗೆ ವಿವರಣೆ ನೀಡುವಂತೆ ಬಿಜೆಪಿಯನ್ನು ಆಗ್ರಹಿಸಿದ್ದಾರೆ. ಆದರೆ ಇದನ್ನು " ಆಧಾರರಹಿತ " ಎಂದಿರುವ ಬಿಜೆಪಿ ವಕ್ತಾರೆ ಶೈನಾ ಅವರು ಪಕ್ಷಕ್ಕೆ ಸಂಬಂಧಿಸಿಲ್ಲದ ವಿಷಯದಲ್ಲಿ ಪಕ್ಷವನ್ನು ಎಳೆಯಬೇಡಿ ಎಂದು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X