Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರಣಾಳ ಶಿಶು ಪ್ರಯತ್ನ ವಿಫಲ , ಕೋಮಾಕ್ಕೆ...

ಪ್ರಣಾಳ ಶಿಶು ಪ್ರಯತ್ನ ವಿಫಲ , ಕೋಮಾಕ್ಕೆ ಹೋದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ29 Sept 2016 3:07 PM IST
share
ಪ್ರಣಾಳ ಶಿಶು ಪ್ರಯತ್ನ ವಿಫಲ , ಕೋಮಾಕ್ಕೆ ಹೋದ ಮಹಿಳೆ

ಜ್ಯೋತಿ ಮತ್ತು ಸುಮನ್ ಕಲ್ಯಾಣ್ ಕಳೆದ ವಾರ ಬಹಳ ಉತ್ಸುಕರಾಗಿದ್ದರು. ಮದುವೆಯಾಗಿ ಒಂಭತ್ತು ವರ್ಷಗಳ ನಂತರ ಹೈದರಾಬಾದ್ ಹೊರಭಾಗದಲ್ಲಿರುವ ನಾಗೊಳೆಯ ಸೃಜನ ಫರ್ಟಿಲಿಟಿ ಸೆಂಟರ್ ಆಸ್ಪತ್ರೆ ಅವರಿಗೆ ವಿಟ್ರೋ ಫರ್ಟಿಲೈಸೇಶನ್ ಮೂಲಕ ಮಗುವಾಗಲು ನೆರವು ನೀಡುವ ಅಭಯ ಕೊಟ್ಟಿತ್ತು.

36 ವರ್ಷದ ಜ್ಯೋತಿ ತಮ್ಮ ಅಂಡವನ್ನು ಸಂಗ್ರಹಿಸಲು ಆಸ್ಪತ್ರೆಗೆ ಹೋಗಿದ್ದರು. ವೈದ್ಯರೇ ಆಗಿರುವ ಸುಮನ್ ಇದರಿಂದಾಗಬಹುದಾದ ಸಮಸ್ಯೆಯನ್ನು ಯೋಚಿಸಿಯೇ ಇರಲಿಲ್ಲ. ಆದರೆ ಇಂದು ಜ್ಯೋತಿ ತಮ್ಮ ಶೇ. 70ರಷ್ಟು ಮೆದುಳಿಗೆ ಹಾನಿಯಾಗಿ ಕೋಮಾದಲ್ಲಿದ್ದಾರೆ. ಅವರನ್ನು ಈಗ ಹೈದರಾಬಾದ್‌ನ ಕಾಮಿನೆನಿ ಆಸ್ಪತ್ರೆಗೆ ಸೇರಿಸಲಾಗಿದೆ. ಜ್ಯೋತಿಗೆ ಕೊಡಲಾದ ಸಾಮಾನ್ಯ ಅನೆಸ್ತೇಶಿಯ ತಪ್ಪಾಗಿದ್ದೇ ಇದಕ್ಕೆ ಕಾರಣ. ಸುಮಾರು ಸಂಜೆ 8.45ರ ಹೊತ್ತಿಗೆ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ ಸೌಜನ್ಯ ಅವರು ಜ್ಯೋತಿಗೆ ಸ್ವಲ್ಪ ಅನೆಸ್ತೇಶಿಯ ಕೊಡುವುದಾಗಿ ಹೇಳಿದ್ದರು. ಆದರೆ ರಾತ್ರಿ 9.30ಕ್ಕೆ ಜ್ಯೋತಿ ಅನೆಸ್ತೇಶಿಯದಿಂದ ಪ್ರಜ್ಞೆ ಪಡೆದುಕೊಂಡಿಲ್ಲ ಎನ್ನುವ ಮಾಹಿತಿಯನ್ನು ವೈದ್ಯರು ನೀಡಿದ್ದರು.

ದಂಪತಿಗಳಿಗೆ ಈ ಚಿಕಿತ್ಸೆ ಪಡೆಯಲು ಬಹಳ ಆತಂಕವಿತ್ತು. 2015ರಲ್ಲಿ ಅಂಡ ತೆಗೆದು ನಂತರ ಮಾಡಿದ ಐವಿಎಫ್ ಚಿಕಿತ್ಸೆ ವಿಫಲವಾದ ಕಾರಣ ಅವರು ಮತ್ತೊಮ್ಮೆ ಪ್ರಯತ್ನಿಸಲು ಬಯಸಿದ್ದರು. ಐವಿಎಫ್‌ನ ಎರಡನೇ ಪ್ರಯತ್ನ ಯಶಸ್ವಿಯಾಗಲಿದೆ ಎಂದುಕೊಂಡಿದ್ದರು. “ಮರುದಿನವೇ ನಾವು ಜ್ಯೋತಿಯನ್ನು ಓಮ್ನಿ ಆಸ್ಪತ್ರೆಗೆ ಸಾಗಿಸಿದೆವು. ಆಕೆ ಗಂಭೀರ ಹೈಪಾಕ್ಸಿಕ್ ಮೆದುಳು ಹಾನಿಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದರು. ನಂತರ ಆಕೆಯನ್ನು ಕಾಮಿನೆನಿ ಆಸ್ಪತ್ರೆಗೆ ಕರೆದೊಯ್ದೆವು. ಕಳೆದ ಎರಡು ವಾರದಿಂದ ಅವರು ವೆಂಟಿಲೇಟರ್‌ನಲ್ಲಿದ್ದಾರೆ. ವೈದ್ಯರ ಪ್ರಕಾರ ಆಕೆಯ ಮಿದುಳಿನ ಶೇ. 70ರಷ್ಟು ಭಾಗಕ್ಕೆ ಹಾನಿಯಾಗಿದೆ” ಎನ್ನುತ್ತಾರೆ ಸುಮನ್. ಜ್ಯೋತಿ ಅನೆಸ್ತೀಶಿಯದಿಂದ ಹೊರ ಬರುವ ಮೊದಲೇ ಟ್ಯೂಬ್ ತೆಗೆದದ್ದೇ ಮಿದುಳಿನ ಹಾನಿಗೆ ಕಾರಣ ಎನ್ನುವುದು ಸುಮನ್ ಅಭಿಪ್ರಾಯ. ಇತರ ದಂಪತಿಗಳಂತೆ ಸುಮನ್ ಮತ್ತು ಜ್ಯೋತಿ ಕೂಡ ಆರಂಭದಲ್ಲಿ ಮಗುವಿಗಾಗಿ ಚಿಂತಿಸಿರಲಿಲ್ಲ. ಆದರೆ ಮೊದಲ ಕೆಲವು ವರ್ಷಗಳ ನಂತರ ಚಿಂತೆ ಶುರುವಾಗಿತ್ತು. ಜ್ಯೋತಿಗೆ ಮಕ್ಕಳಾಗುವ ಇಷ್ಟವಿತ್ತು. ಹೀಗಾಗಿ ಐವಿಎಫ್‌ಗೆ ಹೊರಳಿದ್ದರು. ಆದರೆ ಈಗ ಆಕೆ ಪ್ರಜ್ಞೆಯೇ ಇಲ್ಲದೆ ಆಸ್ಪತ್ರೆಯಲ್ಲಿದ್ದಾರೆ.

ಐವರು ವೈದ್ಯರ ವಿರುದ್ಧ ಸುಮನ್ ದೂರು ದಾಖಲಿಸಿದ್ದಾರೆ. ಚೈತನ್ಯಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃತ್ತಿಪರವಾಗಿ ನಮಗೆ ಕಳಂಕ ಬಂದಿದೆ. ಈ ಪ್ರಕರಣದ ಬಗ್ಗೆ ಮಾತನಾಡಲು ಬಯಸುವುದಿಲ್ಲ. ನಮ್ಮ ವಿರುದ್ಧ ಅವರು ಮೊಕದ್ದಮೆ ದಾಖಲಿಸಿದ್ದಾರೆ. ಇನ್ನು ನ್ಯಾಯಾಲಯವೇ ತೀರ್ಮಾನಿಸಲಿ ಎಂದು ಡಾ ಸೌಜನ್ಯ ಹೇಳಿದ್ದಾರೆ.

ಕೃಪೆ: http://www.thenewsminute.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X