Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಮರನ್ನು ದ್ವೇಷಿಸುವ ಆರೆಸ್ಸೆಸ್ ನ...

ಮುಸ್ಲಿಮರನ್ನು ದ್ವೇಷಿಸುವ ಆರೆಸ್ಸೆಸ್ ನ ಮೋದಿಯಿಂದ ಈಗ ಮೊಸಳೆ ಕಣ್ಣೀರು : ಪಿ.ವಿ. ಮೋಹನ್

ವಾರ್ತಾಭಾರತಿವಾರ್ತಾಭಾರತಿ29 Sept 2016 7:16 PM IST
share
ಮುಸ್ಲಿಮರನ್ನು ದ್ವೇಷಿಸುವ  ಆರೆಸ್ಸೆಸ್ ನ ಮೋದಿಯಿಂದ ಈಗ ಮೊಸಳೆ ಕಣ್ಣೀರು : ಪಿ.ವಿ. ಮೋಹನ್

ಮಂಗಳೂರು, ಸೆ.29: ಮುಸ್ಲಿಮರು ದ್ವೇಷದ ವಸ್ತುವಲ್ಲ, ಮತದ ಸರಕಲ್ಲ, ಅವರನ್ನು ಸಬಲೀಕರಣಗೊಳಿಸಬೇಕೆಂದು ಕರೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಯು ಮುಸ್ಲಿಂ ಸಮುದಾಯವನ್ನು ದಾರಿತಪ್ಪಿಸುವಂತಹದು. ಮುಂದಿನ ವರ್ಷ ಉತ್ತರಪ್ರದೇಶ ಮತ್ತು ಪಂಜಾಬ್‌ನಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೇಳಿದ ಮಾತಿನಲ್ಲಿ ರಾಜಕೀಯ ದುರುದ್ದೇಶವಿದೆ ಹೊರತು ಅದರಲ್ಲಿ ಪ್ರಾಮಾಣಿಕತೆ ಇಲ್ಲ. ಅದು ಮೋದಿಯವರ ಅಂತ:ಕರಣದಿಂದ ಬಂದ ಮಾತಲ್ಲ ಎಂದು ಎಐಸಿಸಿ ಸದಸ್ಯ ಪಿ.ವಿ. ಮೋಹನ್ ಹೇಳಿದ್ದಾರೆ.

ಮೊನ್ನೆ ಕೇರಳದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ದೀನದಯಾಳ್ ಉಪಾಧ್ಯಾಯರ ಮಾತುಗಳನ್ನು ಉಲ್ಲೇಖಿಸಿ ಮೋದಿಯವರು ಮುಸ್ಲಿಮರನ್ನು ನಮ್ಮವರಂತೆ ಕಾಣಿ ಎಂದು ಹೇಳಿದ್ದಾರೆ. ಆರೆಸ್ಸೆಸ್‌ನ ಸಂಸ್ಥಾಪಕರಲ್ಲಿ ಓರ್ವರಾದ ಗೋಳ್ವಾಲ್ಕರ್ ಮುಸ್ಲಿಮರನ್ನು ರಾಷ್ಟ್ರದ ಶತ್ರುವೆಂದು ಕಾಣಿರಿ ಎಂದು ಹೇಳಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರು ಆರೆಸ್ಸೆಸ್‌ನಿಂದ ಬಂದವರು. ಮುಖ್ಯ ಪ್ರಚಾರಕರಾಗಿದ್ದವರು. ಅವರು ಅಲ್ಪಸಂಖ್ಯಾತರಿಗಾಗಿ ಸುರಿಸುತ್ತಿರುವುದು ಮೊಸಳೆ ಕಣ್ಣೀರು ಎಂಬುದು ದೇಶದ ಜನತೆಗೆ ಗೊತ್ತಿದೆ ಎಂದು ಪಿ.ವಿ.ಮೋಹನ್ ತಿಳಿಸಿದ್ದಾರೆ.

ದೇಶದ ಸೆಕ್ಯೂಲರ್ ಸಿದ್ಧಾಂತದ ಸಂಕೇತವಾಗಿದ್ದ ಬಾಬ್ರಿ ಮಸೀದಿಯನ್ನು ಕೆಡವಿದಾಗ ಮಾತನಾಡದ, ತನ್ನ ಮುಖ್ಯಮಂತ್ರಿ ಅವಧಿಯಲ್ಲಿ ಗುಜರಾತ್‌ನಲ್ಲಿ ನಡೆದ ನರಮೇಧದ ಬಗ್ಗೆ ಈಗಲೂ ವಿಷಾದ ವ್ಯಕ್ತಪಡಿಸದ ಮೋದಿಯವರ ಮಾತುಗಳು ನಯವಂಚನೆ ಹೊರತು ನಂಬಿಕೆಯನ್ನು ಹುಟ್ಟಿಸುವಂತಹದಲ್ಲ. ಮೋದಿಯವರು ಪೇಟಾ, ಟರ್ಬನ್, ಜಾಪಿ ಅಥವಾ ಅಸ್ಸಾಂನ ಟೋಪಿಯನ್ನು ಧರಿಸುತ್ತಾರೆ. ಆದರೆ ಇವತ್ತಿಗೂ ಮುಸ್ಲಿಮರ ಟೋಪಿಯನ್ನು ತಲೆಗೆ ಇಡಲು ನಿರಾಕರಿಸುತ್ತಾರೆ. ದಾದ್ರಿಯ ಮುಹಮ್ಮದ್ ಅಖ್ಲಾಕ್ ಕುಟುಂಬದವರನ್ನು ಕರೆದು ಇವತ್ತಿಗೂ ಸಾಂತ್ವನ ಹೇಳಿಲ್ಲ. ಮೋದಿಯವರು ಸೋನಿಯಾಗಾಂಧಿಯವರನ್ನು ನೋಡಿ ಕಲಿಯಬೇಕು. ಬಾಬ್ರಿ ಮಸೀದಿ ಕೆಡವಿದ ಘಟನೆ ವಿಷಾದ ವ್ಯಕ್ತಪಡಿಸಿದ್ದಾರೆ. ದಿಲ್ಲಿಯಲ್ಲಿ ನಡೆದ ಸಿಖ್ ಗಲಭೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ಅಲ್ಪಸಂಖ್ಯಾತರ, ದಲಿತರ ಪರವಾಗಿ ಧ್ವನಿ ಎತ್ತುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದೆ ಎಂದು ಪಿ.ವಿ. ಮೋಹನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X