Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮನಸೋ ಇಚ್ಛೆ...

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮನಸೋ ಇಚ್ಛೆ ಶುಲ್ಕ ವಸೂಲಿ: ಕ್ರಮಕ್ಕೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ29 Sept 2016 10:04 PM IST
share

ಶಿವಮೊಗ್ಗ, ಸೆ.29: ನಗರದ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ಶಿವಮೊಗ್ಗ ಪೀಸ್ ಆರ್ಗನೈಝೇಷನ್ ಸಂಘಟನೆಯು ಗುರುವಾರ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಮನವಿ ಪತ್ರ ಸಲ್ಲಿಸಿತು. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಸದಾಗಿ ಸ್ಥಾಪನೆಯಾಗುತ್ತಿವೆ. ಗುಣಮಟ್ಟದ ಶಿಕ್ಷಣ ನೀಡುವ ನೆಪದಲ್ಲಿ ಕೆಲ ಸಂಸ್ಥೆಗಳು ಹಣ ಮಾಡುವುದನ್ನೇ ದಂಧೆಯನ್ನಾಗಿಸಿಕೊಂಡಿವೆ. ಪೋಷಕರ ಬಳಿ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ. ಹಗಲು ದರೋಡೆ ನಡಸುತ್ತಿವೆ ಎಂದು ಧರಣಿ ನಿರತರು ದೂರಿದ್ದಾರೆ. ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸ್ಪಷ್ಟ ನೀತಿ-ನಿಯಮ ರೂಪಿಸಿವೆ. ಆದರೆ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕಾಯ್ದೆ ಹಾಗೂ ನಿಯಮಗಳ ಪರಿಪಾಲನೆ ಮಾಡದೆ ಉಲ್ಲಂಘಿಸುತ್ತಿವೆ. ಇವರನ್ನು ಹೇಳುವವರು ಕೇಳುವವರ್ಯಾರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಿಸಿದ ಇಲಾಖೆಗಳು ವೌನವಾಗಿವೆ ಎಂದು ಧರಣಿ ನಿರತರು ದೂರಿದ್ದಾರೆ. ಕೆಲ ಸಂಸ್ಥೆಗಳ ದುಬಾರಿ ಶುಲ್ಕ ವಸೂಲಿ ನೀತಿಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಪರದಾಡುವಂತಾಗಿದೆ. ಇನ್ನಿಲ್ಲದ ಸಂಕಷ್ಟ ಅನುಭವಿಸುವಂತಾಗಿದೆ. ಹಣವಿದ್ದವರು ಮಾತ್ರ ಶಿಕ್ಷಣ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಪಾದಿಸಿದ್ದಾರೆ. ತಕ್ಷಣವೇ ಜಿಲ್ಲಾಡಳಿತ ನಿಯಮ ಮೀರಿ ಪೋಷಕರಿಂದ ಹಣ ಸುಲಿಗೆ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕಠಿಣ ಕ್ರಮ ಜರಗಿಸಬೇಕು. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ದಿಟ್ಟ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯು ಬೀದಿಗಿಳಿದು ಧರಣಿ ನಡೆಸುವುದು ಅನಿವಾರ್ಯವಾಗಲಿದೆ ಎಂದು ಧರಣಿ ನಿರತರು ಎಚ್ಚರಿಕೆ ನೀಡಿದ್ದಾರೆ. ಧರಣಿಯಲ್ಲಿ ಸಂಘಟನೆಯ ಮುಖಂಡರಾದ ರಿಯಾಝ್ ಅಹ್ಮದ್, ಸೈಯದ್, ಸಮೀವುಲ್ಲ್ಲಾ, ಮುಸ್ತಫಾ, ಉಮರ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X