Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆಪಿಎಲ್: ಸೆಮಿಫೈನಲ್‌ನತ್ತ ಬಳ್ಳಾರಿ,...

ಕೆಪಿಎಲ್: ಸೆಮಿಫೈನಲ್‌ನತ್ತ ಬಳ್ಳಾರಿ, ಬೆಳಗಾವಿ

ಮಾಯಾಂಕ್ ಆಕರ್ಷಕ ಶತಕ

ವಾರ್ತಾಭಾರತಿವಾರ್ತಾಭಾರತಿ29 Sept 2016 11:39 PM IST
share
ಕೆಪಿಎಲ್: ಸೆಮಿಫೈನಲ್‌ನತ್ತ ಬಳ್ಳಾರಿ, ಬೆಳಗಾವಿ

ಹುಬ್ಬಳ್ಳಿ, ಸೆ.29: ಐದನೆ ಆವೃತ್ತಿಯ ಕೆಪಿಎಲ್ ಟೂರ್ನಿಯ ಮಳೆಬಾಧಿತ 25ನೆ ಪಂದ್ಯದಲ್ಲಿ 6 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿದ ಬಳ್ಳಾರಿ ಟಸ್ಕರ್ಸ್ ತಂಡ ಸೆಮಿ ಫೈನಲ್ ತಲುಪುವ ವಿಶ್ವಾಸ ಹೆಚ್ಚಿಸಿಕೊಂಡಿದೆ.

ಇಲ್ಲಿನ ಕೆಎಸ್‌ಸಿಎ ರಾಜ್‌ನಗರ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯವನ್ನು ಮಳೆಯಿಂದಾಗಿ 17 ಓವರ್‌ಗೆ ಕಡಿತಗೊಳಿಸಲಾಯಿತು.

 ಗೆಲ್ಲಲು ಪರಿಷ್ಕೃತ ಗುರಿ 130 ರನ್ ಗುರಿ ಪಡೆದ ಬಳ್ಳಾರಿ ತಂಡ ಹಿರಿಯ ಬ್ಯಾಟ್ಸ್‌ಮನ್ ಬಾಲಚಂದ್ರ ಅಖಿಲ್(ಔಟಾಗದೆ 61, 38 ಎಸೆತ, 5 ಬೌಂಡರಿ, 3 ಸಿಕ್ಸರ್) ಹಾಗೂ ಚಿರಂಜೀವಿ(ಔಟಾಗದೆ 42 ರನ್, 31 ಎಸೆತ, 5 ಬೌಂಡರಿ) ಸಾಹಸದ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್‌ಗಳ ನಷ್ಟಕ್ಕೆ 133 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಬಿಜಾಪುರದ ಸ್ಟಾರ್ ಬೌಲರ್ ಅಭಿಮನ್ಯು ಮಿಥುನ್(2-16) ದಾಳಿಗೆ ಸಿಲುಕಿದ ಬಳ್ಳಾರಿ ತಂಡ 4.3ನೆ ಓವರ್‌ನಲ್ಲಿ 29 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು.

ಆಗ 4ನೆ ವಿಕೆಟ್‌ಗೆ 104 ರನ್ ಜೊತೆಯಾಟ ನಡೆಸಿದ ಚಿರಂಜೀವಿ ಹಾಗೂ ಅಖಿಲ್ 15.5 ಓವರ್‌ಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ಟೂರ್ನಿಯಲ್ಲಿ ಆಡಿದ 7ನೆ ಪಂದ್ಯದಲ್ಲಿ 4ನೆ ಗೆಲುವು ಸಾಧಿಸಿ ಒಟ್ಟು 8 ಅಂಕ ಗಳಿಸಿರುವ ಬಳ್ಳಾರಿ ಅಂಕಪಟ್ಟಿಯಲ್ಲಿ ಎರಡನೆ ಸ್ಥಾನದಲ್ಲಿದೆ. ಸೆಮಿಫೈನಲ್ ತಲುಪುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

ಬಿಜಾಪುರ ಬುಲ್ಸ್ 125/9: ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಬಿಜಾಪುರ ಬುಲ್ಸ್ ತಂಡ ವಿಜೆಡಿ ಪದ್ದತಿಯಂತೆ ನಿಗದಿಯಾಗಿದ್ದ 17 ಓವರ್‌ಗಳ ಪಂದ್ಯದಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ ಕೇವಲ 125 ರನ್ ಗಳಿಸಿತು.

ಎಂದಿನಂತೆ ಆರಂಭಿಕ ಆಟಗಾರ ಆರ್. ಸಮರ್ಥ್(38) ತಂಡವನ್ನು ಆಧರಿಸಲು ಯತ್ನಿಸಿದರು. ನಾಯಕ ರಾಬಿನ್ ಉತ್ತಪ್ಪ(29 ರನ್) 17 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿ ಎದುರಾಳಿ ತಂಡದ ನಾಯಕ ಅಮಿತ್‌ವರ್ಮಾ ಬೀಸಿದ ಎಲ್‌ಬಿಡಬ್ಲು ಬಲೆಗೆ ಬಿದ್ದರು.

ಅರ್ಶದೀಪ್ ಸಿಂಗ್ ಔಟಾಗದೆ 17 ರನ್ ಗಳಿಸಿದರು. ಬಳ್ಳಾರಿ ಪರ ಅಮಿತ್ ವರ್ಮ(3-22) ಯಶಸ್ವಿ ಬೌಲರ್ ಎನಿಸಿಕೊಂಡರು. ಜೈನ್(2-30) ಎರಡು ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಬಿಜಾಪುರ ಬುಲ್ಸ್: 17 ಓವರ್‌ಗಳಲ್ಲಿ 125/9

(ಸಮರ್ಥ್ 38, ರಾಬಿನ್ ಉತ್ತಪ್ಪ 29, ಅರ್ಷದೀಪ್ ಸಿಂಗ್ ಔಟಾಗದೆ 17, ಅಮಿತ್ ವರ್ಮ 3-22, ಜೈನ್ 2-30)

ಬಳ್ಳಾರಿ ಟಸ್ಕರ್ಸ್: 15.5 ಓವರ್‌ಗಳಲ್ಲಿ 133/4

(ಬಿ. ಅಖಿಲ್ ಅಜೇಯ 61, ಚಿರಂಜೀವಿ ಅಜೇಯ 42, ಎಸ್‌ಎನ್ ರಾಜು 18, ಮಿಥುನ್ 2-16)

ಪಂದ್ಯಶ್ರೇಷ್ಠ: ಬಾಲಚಂದ್ರ ಅಖಿಲ್.

   ದ್ವಿತೀಯ ಸ್ಥಾನಕ್ಕೇರಿದ ಬೆಳಗಾವಿ

ಹುಬ್ಬಳ್ಳಿ, ಸೆ.29: ಆರಂಭಿಕ ಆಟಗಾರ ಮಾಯಾಂಕ್ ಅಗರವಾಲ್ ಬಾರಿಸಿದ ಆಕರ್ಷಕ ಶತಕ(ಔಟಾಗದೆ 119 ರನ್, 51 ಎಸೆತ, 15 ಬೌಂಡರಿ, 4 ಸಿಕ್ಸರ್)ದ ಸಹಾಯದಿಂದ ಬೆಳಗಾವಿ ಪ್ಯಾಂಥರ್ಸ್‌ ತಂಡ ಮಂಗಳೂರು ಯುನೈಟೆಡ್ ತಂಡವನ್ನು 39 ರನ್‌ಗಳ ಅಂತರದಿಂದ ಮಣಿಸಿತು. ಈ ಮೂಲಕ ಕೆಪಿಎಲ್ ಅಂಕಪಟ್ಟಿಯಲ್ಲಿ 2ನೆ ಸ್ಥಾನಕ್ಕೇರಿತು.

 ಗುರುವಾರ ಇಲ್ಲಿ ನಡೆದ ಕೆಪಿಎಲ್‌ನ 26ನೆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬೆಳಗಾವಿ ತಂಡದ ಅಗರವಾಲ್ ಹಾಗೂ ಅನುರಾಗ್ ಬಾಜ್‌ಪೈ(51 ರನ್) ಮಂಗಳೂರು ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿ ಮೊದಲ ವಿಕೆಟ್‌ಗೆ 169 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು.

ಬೆಳಗಾವಿ 15 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ಆರ್. ಮೋರೆ 3 ಓವರ್‌ಗಳಲ್ಲಿ 34 ರನ್ ನೀಡಿ ದುಬಾರಿಯಾದರು.

ಗೆಲ್ಲಲು ಕಠಿಣ ಗುರಿ ಪಡೆದ ಮಂಗಳೂರು 14 ಓವರ್‌ಗಳಲ್ಲಿ 137 ರನ್‌ಗೆ ಆಲೌಟಾಯಿತು. ವಿಶ್ವನಾಥನ್(46ರನ್), ರೋಹಿತ್ ಮೋರೆ(35), ನಾಯಕ ಕರುಣ್ ನಾಯರ್(25) ಎರಡಂಕೆ ಸ್ಕೋರ್ ದಾಖಲಿಸಿದರೂ ಮಂಗಳೂರು ಇನ್ನೂ 1 ಓವರ್ ಬಾಕಿ ಇರುವಾಗಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಅಕ್ಷಯ್(3-21), ಸಕುಜ(3-16), ವಿನಯ್‌ಕುಮಾರ್(2-13) ಹಾಗೂ ಸಿನ್ಹಾ(2-29) ಬೆಳಗಾವಿಯ ಗೆಲುವಿನಲ್ಲಿ ಪ್ರಮುಖ ಕಾಣಿಕೆ ನೀಡಿದರು. ಬಿರುಸಿನ ಶತಕ ಬಾರಿಸಿದ ಮಾಯಾಂಕ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X