Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉರ್ದು ಭಾಷೆಯು ಬದುಕು, ಸಂಸ್ಕೃತಿಯ...

ಉರ್ದು ಭಾಷೆಯು ಬದುಕು, ಸಂಸ್ಕೃತಿಯ ಮುಖವಾಣಿ: ಅಝೀಝುಲ್ಲಾಬೇಗ್

ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ30 Sept 2016 10:20 PM IST
share
ಉರ್ದು ಭಾಷೆಯು ಬದುಕು, ಸಂಸ್ಕೃತಿಯ ಮುಖವಾಣಿ: ಅಝೀಝುಲ್ಲಾಬೇಗ್

ಚಿಕ್ಕಮಗಳೂರು, ಸೆ.30: ಉರ್ದು ಒಂದು ಭಾಷೆಗಿಂತಲೂ ಮಿಗಿಲಾಗಿ ವಿಶಿಷ್ಟ ಬಗೆಯ ಬದುಕಿನ ಹಾಗೂ ಸಂಸ್ಕೃತಿಯ ಮುಖವಾಣಿ ಆಗಿದೆ. ಉರ್ದು ಪತ್ರಿಕೋದ್ಯಮ ಉತ್ತರ ಭಾರತದಲ್ಲಿ ಹೆಚ್ಚಾಗಿ ವ್ಯಾಪಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲೂ ನಾಲ್ಕೈದು ಉರ್ದು ಪತ್ರಿಕೆಗಳು ಉತ್ತಮವಾಗಿ ಬರುತ್ತಿವೆ ಎಂದು ಕರ್ನಾಟಕ ಉರ್ದು ಅಕಾಡಮಿ ಅಧ್ಯಕ್ಷ ವಿಶ್ರಾಂತ ಐಎಎಸ್‌ಅಧಿಕಾರಿ ಅಝೀಝುಲ್ಲಾಬೇಗ್ ಅಭಿಪ್ರಾಯಿಸಿದರು.

 ಅವರು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಸುವರ್ಣ ಮಾಧ್ಯಮ ಭವನದ ಚಿಕ್ಕೊಳಲೆ ಸದಾಶಿವಶಾಸ್ತ್ರಿ ಸಭಾಂಗಣದಲ್ಲಿ ಸನ್ಮಾನ ಸ್ವೀಕರಿಸಿ ಆಸಕ್ತರೊಂದಿಗೆ ಉರ್ದು ಬರವಣಿಗೆ ಪ್ರಸ್ತುತತೆ ಕುರಿತಂತೆ ಸಂವಾದಿಸಿದರು. ಉರ್ದುಭಾಷೆಗೆ ಚಾರಿತ್ರಿಕ ಇತಿಹಾಸವಿದೆ. ಉರ್ದು ಭಾಷೆಯಲ್ಲಿ ಕಂಡುಬರುವ ಮಾಧುರ್ಯ, ಅಭಿವ್ಯಕ್ತಿ ಸಾಮರ್ಥ್ಯ, ಸೂಕ್ಷ್ಮತೆಗಳು ಅಚ್ಚರಿ ಹುಟ್ಟಿಸುವಂತಿದೆ. ಉರ್ದು ಪದಕೋಶದ ಆಳ ಮತ್ತು ವ್ಯಾಪ್ತಿ, ಉರ್ದು ಬಳಕೆಯ ಹಾಸುಬೀಸುಗಳು ಓದುಗರನ್ನು-ಕೇಳುಗರನ್ನು ಮೂಕವಿಸ್ಮಿತಗೊಳಿಸುತ್ತದೆ. ಉರ್ದು ಗದ್ಯ ಶೈಲಿ, ಕಾವ್ಯ ಶೈಲಿ, ವಿಶಿಷ್ಟ ಸಾಹಿತ್ಯ ಪ್ರಕಾರಗಳು ಕುತೂಹಲಕಾರಿಯಾಗಿ ಕಂಡುಬರುತ್ತದೆ ಎಂದು ಅವರು ವಿವರಿಸಿದರು.

ಭಾರತೀಯ ಭಾಷಾ ಪರಿಸರದಲ್ಲಿ ಒಂದಕ್ಕಿಂತ ಒಂದು ಸತ್ವಯುತ ಎನಿಸಿರುವ ಹಲವಾರು ಭಾಷೆಗಳು ಮೈದುಂಬಿ ಬೆಳೆದು ನಿಂತಿದೆ. ಕೆಲವು ಭಾಷೆಗಳು ಐತಿಹಾಸಿಕವಾಗಿ ಶತಶತಮಾನಗಳಷ್ಟು ಹಿಂದಕ್ಕೆ ಹೋದರೆ ಇನ್ನೂ ಕೆಲವು ರಾಜಕೀಯ ಮತ್ತು ಸಾಮಾಜಿಕ ಕಾರಣಗಳಿಂದ ಹಿರಿಮೆ ಮೆರೆಯುತ್ತಿವೆೆ. ಭಾಷೆಗಳು ಹಲವಾದರೂ ಭಾರತೀಯ ಸಾಹಿತ್ಯ ಒಂದೇ ಎಂಬುದನ್ನು ನೆನಪಿಡಬೇಕು. ಭಾಷಾ ಸಾಹಿತ್ಯಗಳ ನಡುವೆ ಕೊಡು-ಕೊಳ್ಳುವಿಕೆ ಒಂದು ನಿರಂತರ ಚಟುವಟಿಕೆಯಾಗಿ ವೈವಿಧ್ಯಮಯಗೊಳಿಸಿ ಅರಿವಿನ ಕಣಜವನ್ನು ಶ್ರೀಮಂತಗೊಳಿಸುತ್ತಿವೆ ಎಂದರು. ಉರ್ದು ಅಕಾಡಮಿ ವತಿಯಿಂದ ವಾರ್ಷಿಕ ಪ್ರಶಸ್ತಿ ನೀಡುವಾಗ ಉರ್ದು ಪತ್ರಿಕೋದ್ಯಮದ ಸೇವೆಯನ್ನು ಪರಿಗಣಿಸಿ ಓರ್ವರಿಗೆ ಪ್ರಶಸ್ತಿ ನೀಡುವ ಪರಿಪಾಠ ಹಮ್ಮಿಕೊಳ್ಳಲಾಗಿದೆ. ಎರಡು ವರ್ಷಗಳ ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ವಿತರಣಾ ಸಮಾರಂಭದ ದಿನಾಂಕ ಪ್ರಕಟಿಸಲಾಗುವುದು. ಎರಡು ದಿನಗಳ ಉರ್ದು ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಅಂತ್ಯದ ವೇಳೆ ನಡೆಸಲು ನಿರ್ಧರಿಸಲಾಗಿದೆ ಎಂದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಗಶಾಸ್ತ್ರಿ ಮಾತನಾಡಿ, ಉರ್ದು ಶ್ರೀಮಂತ ಭಾಷೆ, ಮಾಜಿ ಪ್ರಧಾನಿ ಅಟಲ್‌ಜೀ ಸೇರಿದಂತೆ ಹಲವು ಮುಖಂಡರು ಉರ್ದುವಿನಲ್ಲಿ ಕಾವ್ಯ ರಚಿಸಿದ್ದಾರೆ. ಭಾಷೆ ಜನಾಂಗ ಅಥವಾ ಧರ್ಮಕ್ಕೆ ಸೀಮಿತವಲ್ಲ. ಇದೊಂದು ಸಂವಹನದ ಸಾಧನ. ಉರ್ದು ಪತ್ರಿಕೋದ್ಯಮವು ಕರ್ನಾಟಕದಲ್ಲಿ ಸಶಕ್ತಗೊಂಡು ಭಾವೈಕ್ಯಕ್ಕೆ ಪೂರಕವಾಗಿ ಭಾಷಿಗರನ್ನು ಅಣಿಗೊಳಿಸಬೇಕು ಎಂದರು. ಪತ್ರಕರ್ತ ಶರೀಫ್, ಕವಿ ಎಂ.ಬಿ.ಘನಿ, ಶಾಯಿಬ್ ಅಲಿ, ಅಶ್ಫಾಕ್ ಅಹ್ಮದ್, ನಿವೃತ್ತ ಡಿಡಿಪಿಐ ರೆಹಮತುನ್ನೀಸಾ ಮತ್ತಿತರಿದ್ದರು. ಅಕ್ಮಲ್ ಕಿತಾಬ್ ಘರ್ ಕಾರ್ಯದರ್ಶಿ ಕೆ.ಮುಹಮ್ಮದ್‌ಜಾಫರ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X