Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧ ಸಂಘ, ಸಂಸ್ಥೆಗಳಿಂದ ಕೊಡಗಿನಲ್ಲಿ...

ವಿವಿಧ ಸಂಘ, ಸಂಸ್ಥೆಗಳಿಂದ ಕೊಡಗಿನಲ್ಲಿ ಬೃಹತ್ ಮೆರವಣಿಗೆ

ಭಾರತೀಯ ಸೇನೆಗೆ ನೈತಿಕ ಬೆಂಬಲ: ಸೈನಿಕರ ಕಾರ್ಯಕ್ಕೆ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ30 Sept 2016 10:24 PM IST
share
ವಿವಿಧ ಸಂಘ, ಸಂಸ್ಥೆಗಳಿಂದ ಕೊಡಗಿನಲ್ಲಿ ಬೃಹತ್ ಮೆರವಣಿಗೆ

ಮಡಿಕೇರಿ, ಸೆ.30: ಜಮ್ಮು ಕಾಶ್ಮೀರದ ಗಡಿಭಾಗದ ಪಿಒಕೆಯ ಒಳನುಗ್ಗಿ ಭಯೋತ್ಪಾದಕ ಕೇಂದ್ರಗಳ ಮೇಲೆ ಸೀಮಿತ ದಾಳಿ ನಡೆಸುವ ಮೂಲಕ ಭಯೋತ್ಪಾದಕರನ್ನು ಸದೆ ಬಡಿದು ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಭಾರತೀಯ ಯೋಧರಿಗೆ ನೈತಿಕ ಬೆಂಬಲವನ್ನು ನೀಡುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ವಿವಿಧ ಸಂಘಟನೆ ಮತ್ತು ಸಂಘ ಸಂಸ್ಥೆಗಳು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಭಾರತೀಯ ಸೇನೆ ಪರ ಘೋ ಷಣೆಗಳನ್ನು ಕೂಗಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿಯಿಂದ ಫೀ.ಮಾ.ಕಾರ್ಯಪ್ಪವೃತ್ತದವರೆಗೆ ಸಾಗಿದ ಅನೇಕರು ಸೇನಾ ಕಾರ್ಯಾಚರಣೆಯನ್ನು ಶ್ಲಾಘಿಸಿದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪ್ರಮುಖರು, ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಪ್ಪವೃತ್ತದಲ್ಲಿ ಜಮಾಯಿಸಿ ಭಾರತೀಯ ಸೈನಿಕರಿಗೆ ನೈತಿಕ ಬೆಂಬಲ ಸೂಚಿಸಿದರು.

 ಜಿಲ್ಲಾ ಬಿಜೆಪಿ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ದೇಶದ ವೀರ ಸೇನಾನಿಗಳು ಪಿಒಕೆಯಲ್ಲಿನ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸುವ ಮೂಲಕ ಕೆಚ್ಚೆದೆಯನ್ನು ಪ್ರದರ್ಶಿಸಿದ್ದಾರೆ ಎಂದರು.

ನಗರ ಸಭೆಯ ಕಾಂಗ್ರೆಸ್ ಸದಸ್ಯ ಎ.ಸಿ.ದೇವಯ್ಯ ಮಾತನಾಡಿ, ಭಯೋತ್ಪಾದಕ ಕೃತ್ಯಗಳಿಗೆ ಪ್ರತಿಯಾಗಿ ಶಾಂತಿ ಮಂತ್ರವನ್ನಷ್ಟೆ ಪಠಿಸಿದರೆ ಸಾಲದು ಎನ್ನುವುದನ್ನು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಸೈನಿಕರು ತೋರಿಸಿಕೊಟ್ಟಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ, ರಾಜಕೀಯ ರಹಿತವಾಗಿ ಬೆಂಬಲವನ್ನು ಸೂಚಿಸಬೇಕೆಂದು ಕರೆ ನೀಡಿದರು.

 ಕೊಡಗು ಬ್ಯಾರೀಸ್ ಟ್ರಸ್ಟ್‌ನ ಅಧ್ಯಕ್ಷ ಬಿ.ಎ. ಶಂಸುದ್ದೀನ್ ಮಾತನಾಡಿ, ಭಯೋತ್ಪಾದಕರ ನೆಲೆಗಳನ್ನು ಧೂಳೀಪಟ ಮಾಡಿದ ಭಾರತೀಯ ಸೈನ್ಯದ ಕಾರ್ಯಾಚರಣೆ ನಿಜಕ್ಕೂ ಹೆಮ್ಮೆಯ ವಿಚಾರ ಎಂದರು. ಭಾರತೀಯ ಸೈನಿಕರ ಮನೋಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರು ಬೆಂಬಲವನ್ನು ನೀಡಬೇಕೆಂದು ತಿಳಿಸಿದರು.

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‌ನ ಪ್ರಮುಖ ಜಿ. ಚಿದ್ವಿಲಾಸ್, ವಿಎಚ್‌ಪಿ ಪ್ರಮುಖ ಚಿ.ನಾ.ಸೋಮೇಶ್ ಮಾತನಾಡಿ, ಸೇನೆಯ ಕಾರ್ಯವನ್ನು ಶ್ಲಾಘಿಸಿದರು.

ಬಿಜೆಪಿಯ ಪ್ರಮುಖರಾದ ಮೊಂತಿ ಗಣೇಶ್, ರವಿಬಸಪ್ಪ, ಶರೀನ್ ಸುಬ್ಬಯ್ಯ ಮಹೇಶ್ ಜೈನಿ, ಕಾಂಗ್ರೆಸ್‌ನ ಅಂಬೆಕಲ್ ನವೀನ್, ಪ್ರಕಾಶ್ ಆಚಾರ್ಯ, ವೆಂಕಟೇಶ್, ಅಬ್ದುಲ್ ರಝಾಕ್, ಮೈನಾ, ಮಹೇಶ್ ಕುಮಾರ್, ಜೆಡಿಎಸ್‌ನ ಮುನೀರ್ ಅಹ್ಮ್ಮದ್, ಬೆಳೆಗಾರರ ಒಕ್ಕೂಟದ ಕೆ.ಕೆ.ವಿಶ್ವನಾಥ್, ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ, ಕೊಡಗು ಏಕೀಕರಣ ರಂಗದ ತಮ್ಮು ಪೂವಯ್ಯ, ಬ್ಯಾರೀಸ್ ಟ್ರಸ್ಟ್‌ನ ಎಂ.ಇ.ಮುಹಮ್ಮದ್, ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ್ ಕುಟ್ಟಪ್ಪ ಸೇರಿದಂತೆ ಹಲವು ಪ್ರಮುಖರು, ಸಾರ್ವಜನಿಕರು ಈ ಸಂದರ್ಭ ಹಾಜರಿದ್ದು, ಭಾರತೀಯ ಸೈನಿಕರಿಗೆ ನೈತಿಕ ಬೆಂಬಲ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X