Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ವೃದ್ಧರ ಬವಣೆ ಮುಂದುವರಿಕೆ

ಭಾರತದಲ್ಲಿ ವೃದ್ಧರ ಬವಣೆ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ30 Sept 2016 11:51 PM IST
share

ಹೊಸದಿಲ್ಲಿ, ಸೆ.30: ಭಾರತದಲ್ಲಿ ವೃದ್ಧರು ವೈದ್ಯಕೀಯ, ಸಾಮಾಜಿಕ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುವುದು ಮುಂದುವರಿದಿದೆಯೆಂದು ಹೊಸ ಅಧ್ಯಯನವೊಂದು ತಿಳಿಸಿದೆ.

ದಿಲ್ಲಿ ಮೂಲದ ಏಜ್‌ವೆಲ್ ಫೌಂಡೇಶನ್ ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯು ಭಾರತದ ಹಿರಿಯ ನಾಗರಿಕರ ಆರ್ಥಿಕ ಸ್ಥಿತಿಗತಿಯನ್ನು ವಿಶ್ಲೇಷಿಸಿದ್ದು, ನಿವ್ವಳ ವೌಲಿಕತೆ, ಆರ್ಥಿಕ ಅಗತ್ಯ ಹಾಗೂ ಹಕ್ಕುಗಳಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಅಂದಾಜು ನಡೆಸಿದೆ.
ಪ್ರತಿಷ್ಠಾನವು ಯಾದೃಚ್ಛಿಕವಾಗಿ 60ರ ಪ್ರಾಯದ ಮೇಲಿನ 15 ಸಾವಿರ ಮಂದಿಯ ಸಂದರ್ಶನ ನಡೆಸಿದೆ. ಕಳೆದ 2 ದಶಕಗಳಿಂದ ರಿಯಲ್ ಎಸ್ಟೇಟ್ ದರ ಏರಿಕೆಯಿಂದಾಗಿ ಸಂದರ್ಶಿಸಲಾದವರಲ್ಲಿ ಹೆಚ್ಚಿನ ಸಂಖ್ಯೆಯ ವೃದ್ಧರ ನಿವ್ವಳ ವೌಲಿಕತೆಯು ಹೆಚ್ಚಾಗಿರುವುದು ಕಂಡುಬಂದಿದೆ.

ತಮ್ಮ ವೃದ್ಧಾಪ್ಯದಲ್ಲಿ ನಿವ್ವಳ ವೌಲಿಕತೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ವೃದ್ಧ ಸಂವೇದಿ ಕಾರ್ಯಕ್ರಮಗಳ ಕೊರತೆಯಿಂದಾಗಿ ತಮ್ಮ ಬವಣೆ ಮುಂದುವರಿದಿದೆಯೆಂದು ಶೇ.46.4ರಷ್ಟು ಹಿರಿಯ ನಾಗರಿಕರು ಪ್ರತಿಪಾದಿಸಿದ್ದಾರೆ.
ಹೆಚ್ಚು ನಿವ್ವಳ ವೌಲಿಕತೆಯೊಂದಿಗೆ, ಸಮೀಕ್ಷೆ ನಡೆಸಲಾದವರು ಹೆಚ್ಚಿನ ಕೊಳ್ಳುವ ಸಾಮರ್ಥ್ಯವನ್ನೂ ಪಡೆದಿದ್ದಾರೆ. ಆದರೆ, ಕುಟುಂಬದ ಕಿರಿಯ ಸದಸ್ಯರು ಆಗಾಗ ಅವರ ನಿರ್ಧಾರಗಳ ದುರುಪಯೋಗ ಮಾಡುವುದರಿಂದ, ಅವರಿಗೆ ತಮ್ಮ ಎಣಿಕೆಯಂತೆ ಅದನ್ನು ಮಾಡಲು ಸಾಧ್ಯವಾಗುವುದಿಲ್ಲವೆಂದೂ ಅಧ್ಯಯನ ಹೇಳಿದೆ.
 ದೇಶದ ಆರ್ಥಿಕತೆಯಲ್ಲಿ ಹಿರಿಯ ನಾಗರಿಕರ ಮಹತ್ವದ ಪಾತ್ರ ಹಾಗೂ ಸಕ್ರಿಯ ಭಾಗವಹಿಸುವಿಕೆಯ ಹೊರತಾಗಿಯೂ ಯುವಕರಿಗೆ ಹೋಲಿಸಿದರೆ ಬಳಕೆದಾರರಾಗಿ ಅವರೀಗಲೂ ನಿರ್ಲಕ್ಷಿಸಲ್ಪಡುತ್ತಿದ್ದಾರೆ. ವೃದ್ಧರಿಗಾಗಿ ಸರಕಾರಿ ಕಾರ್ಯಕ್ರಮಗಳ ಕೊರತೆಯಿರುವುದರಿಂದ ಅವರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ತೊಂದರೆಗೊಳಗಾಗುವುದು ಮುಂದುವರಿದಿದೆ. ಸಮೀಕ್ಷಿಸಲಾದ ಅರ್ಧಕ್ಕೂ ಹೆಚ್ಚು ವೃದ್ಧರು ಆರ್ಥಿಕ ಸಮಸ್ಯೆಯಲ್ಲಿದ್ದರೆ, ಮೂರನೆ ಎರಡರಷ್ಟು ಮಂದಿ ತಮ್ಮ ದಿನವಹಿ ವೆಚ್ಚಕ್ಕಾಗಿ ಬೇರೆಯವರನ್ನು ಅವಲಂಬಿಸಿದ್ದಾರೆಂದು ಅಧ್ಯಯನ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X