Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಶ್ವವಿಖ್ಯಾತ ದಸರಾಗೆ ಇಂದು ಚಾಲನೆ

ವಿಶ್ವವಿಖ್ಯಾತ ದಸರಾಗೆ ಇಂದು ಚಾಲನೆ

ಕೆ.ದೀಪಕ್, ಮೈಸೂರುಕೆ.ದೀಪಕ್, ಮೈಸೂರು30 Sept 2016 11:52 PM IST
share
ವಿಶ್ವವಿಖ್ಯಾತ ದಸರಾಗೆ ಇಂದು ಚಾಲನೆ

ಮೈಸೂರು, ಸೆ.30: ರಾಜ್ಯಕ್ಕೆ ಬಂದೊದಗಿರುವ ಹಲವು ಸಂಕಷ್ಟಗಳ ನಡುವೆ ದಸರಾ ಸಂಭ್ರಮಕ್ಕೆ ಕ್ಷಣಗಣನೆ ಆರಂಭ ಗೊಂಡಿದೆ. ಹೆಸರಿಗೆ ಸರಳ ದಸರಾ ಎಂದು ಹೇಳಲಾಗುತ್ತಿ ದ್ದರೂ ಸರಕಾರ 11 ಕೋಟಿ ರೂ. ವ್ಯಯಿಸಿದೆ. ಅ.1ರಂದು ಬೆಳಗ್ಗೆ 11:40ಕ್ಕೆ ಚಾಮುಂಡಿಬೆಟ್ಟದ ಮೇಲೆ ನಡೆಯುವ ಸಮಾರಂಭದಲ್ಲಿನಾಡದೇವಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ದೊರೆಯಲಿದೆ.

ತನ್ಮಧ್ಯೆ, ವಿಶ್ವವಿಖ್ಯಾತ ದಸರಾ ಉತ್ಸವ ಉದ್ಘಾಟನೆಗೆ ಈಗಾಗಲೇ ಖ್ಯಾತ ಸಾಹಿತಿ, ನಾಡೋಜ ಚೆನ್ನವೀರ ಕಣವಿ ಅವರು ಕಳೆದ ಗುರುವಾರವೇ ಸಾಂಸ್ಕೃತಿಕ ನಗರಿಗೆ ಆಗಮಿಸಿ ದ್ದಾರೆ. ಈ ಬಾರಿ ರಾಜ ಮಾರ್ಗಕ್ಕೆ ಮೆರುಗು ನೀಡಲು ವಿಶೇಷ ದೀಪಾಲಂಕಾರಕ್ಕೆ ಆದ್ಯತೆ ನೀಡಲಾಗಿದೆ. ಾವೇರಿ ಸಂಘರ್ಷದಿಂದ ಮೈಸೂರಿಗೆ ಆಗಮಿಸಬೇಕಾದ ಪ್ರವಾಸಿಗರ ಸಂಖ್ಯೆ ಈಗಾಗಲೇಕ್ಷೀಣಿಸಿದ್ದು, ವಿಶೇಷವಾಗಿ ತಮಿಳುನಾಡಿನಿಂದಯಾವುದೇ ಪ್ರವಾಸಿ ವಾಹನ ಮೈಸೂರಿಗೆ ಆಗಮಿಸುತ್ತಿಲ್ಲ. ಈಗಾಗಲೇಭರ್ತಿಯಾಗಬೇಕಿದ್ದ ಹೊಟೇಲ್ ರೂಮ್‌ಗಳು ಖಾಲಿ ಹೊಡೆಯುತ್ತಿವೆ.ಪ್ಯಾಕೇಜ್‌ಟೂರ್‌ಗಳನ್ನುದೇಶ-ವಿದೇಶಿಪ್ರವಾಸಿಗರು ರದ್ದುಪಡಿಸಿದ್ದಾರೆ. ಮತ್ತೊಂದೆಡೆದಸರಾಕಾಮಗಾರಿಗಳು ಅಪೂರ್ಣಗೊಂಡಿದ್ದು,ದಸರಾ ವಸ್ತು ಪ್ರದರ್ಶನದಲ್ಲಿ ಮಳಿಗೆಗಳು ಇನ್ನೂ ಭರ್ತಿಯಾಗಿಲ್ಲ.

ಯಾವ ಕಾರ್ಯಕ್ರಮ, ಎಲ್ಲೆಲ್ಲಿ ಉದ್ಘಾಟನೆ?

ದಸರೆಯ ಮೊದಲ ದಿನ ಅನೇಕ ಸಾಂಸ್ಕೃತಿಕ ಕಾರ್ಯಕ್ರ ಮಗಳಿಗೆ ಚಾಲನೆ ದೊರಕಲಿದೆ. ಅಂದು ಸಂಜೆ ಅರಮನೆಯ ಆವರಣದಲ್ಲಿ ಸಜ್ಜಾಗಿರುವ ಸುಂದರ ವೇದಿಕೆಯಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು. ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಮಧ್ಯಾಹ್ನ 12:30ಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪೊಲೀಸ್ ಸಹಾಯವಾಣಿಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12:40ಕ್ಕೆ ಚಾಮುಂಡೇಶ್ವರಿ ದೇವಸ್ಥಾನದ ಎದುರು ದಸರಾ ಕ್ರೀಡಾ ಜ್ಯೋತಿಯನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಬರಮಾಡಿಕೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ದಸರಾ ಚಲನಚಿತ್ರೋತ್ಸವಕ್ಕೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ ನೀಡುವರು. ಮಧ್ಯಾಹ್ನ 1:15ಕ್ಕೆ ಮೈಸೂರು ತಾಲೂಕಿನ ವರುಣಾ ಕೆರೆ ಆಂಗಳದಲ್ಲಿ ಸಾಹಸ ಕ್ರೀಡೋತ್ಸವ ಆರಂಭಗೊಳ್ಳಲಿದೆ. ಜೆ.ಕೆ.ಮೈದಾನದಲ್ಲಿ ಹಿರಿಯರ ದಸರಾ, 1:30ಕ್ಕೆ ಮಹಿಳಾ ದಸರಾವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಉದ್ಘಾಟಿಸುವರು. ಜಿಲ್ಲಾಧಿಕಾರಿ ಕಛೇರಿ ಹಿಂಭಾಗವಿರುವ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳವನ್ನು ಆಹಾರ ಸಚಿವ ಯು.ಟಿ.ಖಾದರ್ ಉದ್ಘಾಟಿಸುವರು. ಮಧ್ಯಾಹ್ನ 3ಕ್ಕೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸುವರು. ಸಂಜೆ 4 ಗಂಟೆಗೆ ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಪ್ಪಣ ಪಾರ್ಕ್(ನಿಶಾದ್‌ಬಾಗ್)ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು. ಸಂಜೆ 4 ಗಂಟೆಗೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರು ರಂಗಾಯಣದಲ್ಲಿ ರಂಗಾಯಣ ನಾಟಕೋತ್ಸವಕ್ಕೆ ಚಾಲನೆ ನೀಡುವರು.

ಸಂಜೆ 4:30ಕ್ಕೆ ಸಚಿವರಾದ ಪ್ರಿಯಾಂಕ್ ಖರ್ಗೆ, ಜಾರಕಿಹೊಳಿ ರಮೇಶ್ ಲಕ್ಷ್ಮಣರಾವ್ ಅವರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವಸ್ತುಪ್ರದರ್ಶನ ಉದ್ಘಾಟಿಸುವರು. ಸಂಜೆ 6:30ಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಅವರು ಸಯ್ಯೆಜಿರಾವ್ ರಸ್ತೆಯಲ್ಲಿ ಹಸಿರು ಮಂಟಪ ದಸರಾ ದೀಪಾಲಂಕಾರ ಉದ್ಘಾಟಿಸುವರು.

ವಿಶೇಷ ವೇದಿಕೆ

ನಾಡಹಬ್ಬ ದಸರಾ ಉದ್ಘಾಟನೆಗೆ ಚಾಮುಂಡಿಬೆಟ್ಟದ ನಾಡದೇವಿಯ ಸನ್ನಿಧಿಯಲ್ಲಿ ವಿಶೇಷ ವೇದಿಕೆ ಸಜ್ಜಾಗಿದೆ. ವೇದಿಕೆಯ ಎಡ ಭಾಗದ ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಧಾರ್ಮಿಕ ಕೈಂಕರ್ಯಗಳನ್ನು ದೇವಸ್ಥಾನದ ಮುಖ್ಯ ಅರ್ಚಕ ಶಶಿ ಶೇಖರ ದಿಕ್ಷೀತ್ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ.

ಅ.1ರಂದು ಬೆಳಗ್ಗೆ 11:40ಕ್ಕೆ ಕವಿ, ನಾಡೋಜ ಚೆನ್ನವೀರ ಕಣವಿ ನಾಡಹಬ್ಬವನ್ನು ಉದ್ಘಾಟಿಸಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಮೇಯರ್ ಬಿ.ಎಲ್.ಭೈರಪ್ಪ, ಜಿಪಂ ಅಧ್ಯಕ್ಷ ನಯೀಮಾ ಸುಲ್ತಾನ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ.ದೇವೇಗೌಡ ವಹಿಸಲಿದ್ದಾರೆ.ಾಗಲೇ ಮಹಿಷಾಸುರನ ಪ್ರತಿಮೆಯಿಂದ ಕಾರ್ಯ ಕ್ರಮಗಳು ನಡೆಯುವ ವೇದಿಕೆಯವರೆಗೆ ಹಸಿರು ತೋರಣ, ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿದ್ದು, ದೇವಸ್ಥಾನವನ್ನು ಪುಷ್ಪಗಳಿಂದ ಅಲಂಕರಿಸಲಾಗಿದೆ.

share
ಕೆ.ದೀಪಕ್, ಮೈಸೂರು
ಕೆ.ದೀಪಕ್, ಮೈಸೂರು
Next Story
X