Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯಲ್ಲಿ ಮರಳಿನ ಕೊರತೆ ಇಲ್ಲ:...

ಜಿಲ್ಲೆಯಲ್ಲಿ ಮರಳಿನ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ1 Oct 2016 8:58 PM IST
share
ಜಿಲ್ಲೆಯಲ್ಲಿ ಮರಳಿನ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್

ಮಂಗಳೂರು,ಅ.1: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಮರಳಿನ ಕೊರತೆ ಇಲ್ಲ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಗುರುತಿಸಲಾದ 19 ಮರಳಿನ ಬ್ಲಾಕ್‌ಗಳಲ್ಲಿ 425 ಗುತ್ತಿಗೆದಾರರಿಗೆ ಮರಳು ತೆಗೆಯಲು ಎಪ್ರಿಲ್ ತಿಂಗಳಲ್ಲಿ ಪರವಾನಿಗೆ ನೀಡಲಾಗಿದೆ. ಪ್ರಸಕ್ತ ನವೀಕರಣ ಮಾಡಿ ಅವರಿಗೆ ಮರಳು ತಗೆಯಲು ಅವಕಾಶ ನೀಡಲಾಗಿದೆ. ಹೊಸತಾಗಿ ಯಾರಿಗೂ ಮರಳು ತೆಗೆಯಲು ಪರವಾನಿಗೆ ನೀಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ ಜಗದೀಶ್ ತಿಳಿಸಿದರು.

ಕರಾವಳಿಯಲ್ಲಿ ಮಳೆಗಾಲದ ಎರಡು ತಿಂಗಳು ನಿಗದಿಪಡಿಸಿದ ಪ್ರದೇಶದಲ್ಲಿ ಮಾತ್ರ ಸಂಪೂರ್ಣ ನಿಷೇಧ ವಿಧಿಸಲಾಗಿತ್ತು. ಉಳಿದ ತಿಂಗಳಲ್ಲಿ ನಿಯಮಗಳನ್ನು ಪಾಲಿಸಿ ಮರಳು ತಗೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಬಗ್ಗೆ ಇತ್ತೀಚೆಗೆ ಎಲ್ಲಾ ಗುತ್ತಿಗೆದಾರರಿಗೂ ಸುತ್ತೋಲೆ ಕಳುಹಿಸಿದ ಸಂದರ್ಭದಲ್ಲಿ ಗುತ್ತಿಗೆದಾರರು ನಿರ್ಬಂಧ ಸಡಿಲಿಸಲು ಮನವಿ ಮಾಡಿದ್ದರು. ಆದರೆ ಈ ನಿಯಮಾವಳಿಯನ್ನು ಪರವಾನಿಗೆ ನೀಡಿದ ಸಂದರ್ಭದಲ್ಲಿ ನೀಡಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ ಇಲ್ಲ ಎನ್ನುವುದನ್ನು ಅವರ ಗಮನಕ್ಕೆ ತರಲಾಗಿದೆ. ಆದರೂ ಅದನ್ನು ಪಾಲಿಸಲು ಕೆಲವರು ವಿಳಂಬ ಮಾಡಿದ ಕಾರಣ ಮರಳಿನ ಸಾಗಾಟ ಆಗದೆ ಸಮಸ್ಯೆ ಉಂಟಾಗಿರಬಹುದು. ಅಲ್ಲದೆ ಲೋಕೋಪಯೋಗಿ ಇಲಾಖೆಯ ಬಳಿ ಒಂದು ಲಕ್ಷ ಕ್ಯೂಬಿಕ್ ಮೀಟರ್ ಮರಳು ಸಂಗ್ರಹವಿದೆ. ಇದರಲ್ಲಿ ಶೇ. 25 ಮಾತ್ರ ಬಳಕೆಯಾಗಿದೆ. ಉಳಿದಂತೆ ಮರಳಿನ ಅಗತ್ಯವಿರುವವರು ಪಡೆದುಕೊಳ್ಳಬಹುದಿತ್ತು. ಈ ಮರಳಿಗೆ ಕನಿಷ್ಠ ದರವನ್ನು ನಿಗದಿ ಪಡಿಸಲಾಗಿತ್ತು.ಇದರಿಂದ ಮರಳಿನ ಕೊರತೆ ಇರುವ ಸಂದರ್ಭದಲ್ಲಿ ಸಂಗ್ರಹಿತ ಮರಳನ್ನು ಸಾರ್ವಜನಿಕರಿಗೆ ನೀಡಲು ಅವಕಾಶವಿತ್ತು ಎನ್ನುವ ಸೂಚನೆಯನ್ನು ಹಿಂದೆ ನೀಡಲಾಗಿತ್ತು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ಮರಳು ತೆಗೆಯುವವರು ಸಿಆರ್‌ಝಡ್ ನಿಯಮಾವಳಿಯನ್ನು ಉಲ್ಲಂಘಿಸಬಾರದು.

ಸೇತುವೆಯ ಎರಡೂ ಬದಿಯಲ್ಲಿ 250 ಮೀಟರ್ ಒಳಗೆ ಮರಳು ತಗೆಯುವುದು,ಲೋಡಿಂಗ್ ಅನ್‌ಲೋಡಿಂಗ್ ಸಂಗ್ರಹ ಯಾವುದನ್ನೂ ಮಾಡಬಾರದು.

ಮರಳು ತೆಗೆಯಲು ಗುರುತಿಸಿದ ಸ್ಥಳಗಳಲ್ಲಿ ಸಿಸಿಟಿ.ವಿ ಅಳವಡಿಸಿ ಜಿಲ್ಲಾ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಲ್ಪಿಸಲು ಸೂಚನೆ ನೀಡಲಾಗಿದೆ.

ಮರಳು ಬ್ಲಾಕ್‌ನಿಂದ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆಗಳು ಮರಳುಗಾರಿಕೆಯಿಂದ ಹಾನಿಯಾದ ಸಂದರ್ಭದಲ್ಲಿ ಗುತ್ತಿಗೆದಾರರು ಸರಿಪಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಹೊರ ರಾಜ್ಯಕ್ಕೆ ಮರಳು ಸಾಗಾಟಕ್ಕೆ ಅವಕಾಶ ನೀಡಲಾಗಿಲ್ಲ.ಒಂದು ತಿಂಗಳಲ್ಲಿ ಜಿಪಿಎಸ್ ಅಳವಡಿಕೆಗೆ ಸೂಚನೆ ನೀಡಲಾಗಿದೆ.

ಮರಳು ತಗೆಯಲು ಪರವಾನಿಗೆ ನೀಡಿದ 19 ಬ್ಲಾಕ್‌ಗಳಿಗೂ ಉಸ್ತುವಾರಿ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಒಬ್ಬರು ಅಧಿಕಾರಿಯನ್ನು ನೇಮಿಸಲಾಗಿದೆ. ಈ ಬ್ಲಾಕ್‌ಗಳಲ್ಲಿ ನಿಗದಿ ಪಡಿಸಿದ ಪ್ರಮಾಣದ ಮರಳು ಮಾತ್ರ ತಗೆಯಲು ಅವಕಾಶವಿದೆ.

ಮರಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ನಿಗದಿ ಪಡಿಸಿದ ದರದಲ್ಲಿ ಗ್ರಾಹಕರಿಗೆ ನೀಡಲು ಅವಕಾಶವಿದೆ

ಎನ್ನುವ ಸೂಚನೆಯನ್ನು ಗುತ್ತಿಗೆದಾರರಿಗೂ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X