Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಚ್ಛ ಭಾರತ ಅಭಿಯಾನಕ್ಕೆ 2 ವರ್ಷ

ಸ್ವಚ್ಛ ಭಾರತ ಅಭಿಯಾನಕ್ಕೆ 2 ವರ್ಷ

ಗುರಿ ಸಾಧಿಸುವಲ್ಲಿ ವಿಫಲ, ಸಮೀಕ್ಷಾ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ1 Oct 2016 11:04 PM IST
share

ಹೊಸದಿಲ್ಲಿ, ಅ.1: ಪ್ರಧಾನಿ ನರೇಂದ್ರ ಮೋದಿಯವರ ನೆಚ್ಚಿನ ಸ್ವಚ್ಛ ಭಾರತ್ ಅಭಿಯಾನಕ್ಕೆ ಅ.2ರಂದು ಎರಡು ವರ್ಷ ತುಂಬಲಿದ್ದು ಅಂದು ಎರಡನೆ ವರ್ಷಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಯುತ್ತಿದೆ. ಆದರೆ ಈಚೆಗೆ ರಾಷ್ಟ್ರಮಟ್ಟದ ಸಮೀಕ್ಷೆಯೊಂದರಲ್ಲಿ ಪಾಲ್ಗೊಂಡ ಪ್ರತೀ ಐವರಲ್ಲಿ ಒಬ್ಬರು ಮಾತ್ರ ಈ ಎರಡು ವರ್ಷಗಳಲ್ಲಿ ಪೌರಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ಸುಧಾರಣೆಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  ಸಮೀಕ್ಷೆ ಪ್ರಕಾರ ಕೇವಲ ನಾಲ್ಕು ರಾಜ್ಯಗಳಲ್ಲಿ ಮಾತ್ರ ಸ್ವಚ್ಛತಾ ಕಾರ್ಯದಲ್ಲಿ ಸುಧಾರಣೆಯಾಗಿರುವುದು ಸ್ಪಷ್ಟವಾಗಿದೆ. ಇದರಲ್ಲಿ ಮೂರು ಬಿಜೆಪಿ ಆಡಳಿತದ ರಾಜ್ಯಗಳು. ಸರಕಾರದ ಶೌಚಾಲಯ ನಿರ್ಮಾಣ ಅಭಿಯಾನ, ಪ್ರಮುಖ ರಾಜಕಾರಣಿಗಳು, ಸಿನೆಮಾ ತಾರೆಯರ ಮೂಲಕ ವ್ಯಾಪಕ ಪ್ರಚಾರ ನೀಡಿದರೂ ದೇಶದ ಇತರ ರಾಜ್ಯಗಳಲ್ಲಿ ಹೆಚ್ಚಿನ ಬದಲಾವಣೆೆಯಾಗಿಲ್ಲ . ಸಿಟಿಝನ್ ಎಂಗೇಜ್‌ಮೆಂಟ್ ಪ್ಲಾಟ್‌ಫಾರಂ ನಡೆಸಿದ ಸಮೀಕ್ಷೆ ಪ್ರಕಾರ ಆಂಧ್ರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಹೆಚ್ಚು ಸುಧಾರಣೆಯಾಗಿದೆ. ದಿಲ್ಲಿ, ಉತ್ತರಪ್ರದೇಶ, ಪಂಜಾಬ್ ಮತ್ತು ಬಿಹಾರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಉಳಿದ ರಾಜ್ಯಗಳಲ್ಲಿ ಅಲ್ಪಪ್ರಮಾಣದ ಸುಧಾರಣೆಯಾಗಿದೆ. ಆದರೆ ಪೌರಸಂಸ್ಥೆಗಳು ಜನರೊಡನೆ ಅಥವಾ ಅಭಿಯಾನದ ಜೊತೆ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡದಿರುವುದು ಹೆಚ್ಚಿನ ಕಳವಳಕ್ಕೆ ಕಾರಣವಾಗಿದೆ ಎಂದು ಸಿಟಿಝನ್ ಎಂಗೇಜ್‌ಮೆಂಟ್ ಪ್ಲಾಟ್‌ಫಾರಂನ ಮುಖ್ಯ ಯೋಜನಾಧಿಕಾರಿ ಕೆ.ಯತೀಶ್ ರಜಾವತ್ ತಿಳಿಸಿದ್ದಾರೆ . ಕಳೆದ ಎರಡು ವರ್ಷಗಳಲ್ಲಿ ಜನರಲ್ಲಿ ನಾಗರಿಕ ಪ್ರಜ್ಞೆ ಜಾಗೃತಗೊಂಡಿಲ್ಲ ಎಂದು ಸರ್ವೆಯಲ್ಲಿ ಪಾಲ್ಗೊಂಡವರಲ್ಲಿ ಅರ್ಧಾಂಶಕ್ಕೂ ಹೆಚ್ಚಿನ ಮಂದಿ ಅಭಿಪ್ರಾಯಪಟ್ಟರೆ, ಶೇ.71ರಷ್ಟು ಮಂದಿ ಪೌರಸಂಸ್ಥೆಗಳ ಸಿಬ್ಬಂದಿಯ ದೂರವಾಣಿ ಸಂಖ್ಯೆ ತಮ್ಮಲ್ಲಿಲ್ಲ ಎಂದು ತಿಳಿಸಿದ್ದಾರೆ. ನಗರದಲ್ಲೆಡೆ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ರಾಶಿ ಹಾಕಿರುವುದನ್ನು ತಾವು ಗಮನಿಸಿದ್ದೇವೆ ಎಂದು ಶೇ.87ರಷ್ಟು ಮಂದಿ ತಿಳಿಸಿದ್ದಾರೆ. 2014ರಲ್ಲಿ ಅಭಿಯಾನಕ್ಕೆ ಚಾಲನೆ ದೊರೆತ ಬಳಿಕ ಸಾರ್ವಜನಿಕ ಶೌಚಾಲಯಗಳ ಲಭ್ಯತೆ ಹೆಚ್ಚಾಗಿದೆ ಎಂದು ಪ್ರತೀ ಐವರಲ್ಲಿ ಓರ್ವ ಮಾತ್ರ ಅಭಿಪ್ರಾಯಪಟ್ಟಿದ್ದಾನೆ. ಇಂಡಿಯಾ ಸ್ಪೆಂಡ್ ವೆಬ್‌ಸೈಟ್ ನಡೆಸಿದ ಅಧ್ಯಯನದ ಪ್ರಕಾರ, ಅತೀ ಕೆಳಮಟ್ಟದ ನಿರ್ವಹಣೆ ತೋರಿದ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಒರಿಸ್ಸಾ ಮತ್ತು ಝಾರ್ಖಂಡ್ ರಾಜ್ಯಗಳು ನೈರ್ಮಲ್ಯದ ವಿಷಯದಲ್ಲಿ ಕನಿಷ್ಠ ಪ್ರಯತ್ನ ತೋರಿದ ಇತಿಹಾಸ ಹೊಂದಿದೆ. ಈ ಐದು ರಾಜ್ಯಗಳಲ್ಲಿ ಕೇವಲ ಶೇ.23ರಷ್ಟು ಮನೆಗಳು ಮಾತ್ರ ಶೌಚಾಲಯ ವ್ಯವಸ್ಥೆಯನ್ನು ಹೊಂದಿದ್ದು ಕಳೆದ 15 ವರ್ಷಗಳಲ್ಲಿ ಇದು ಶೇ.2ರಷ್ಟು ಹೆಚ್ಚಳವಾಗಿದೆ. 17 ವರ್ಷಗಳ ಹಿಂದೆ ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿದ್ದಾಗ ಹಮ್ಮಿಕೊಂಡಿದ್ದ ಸಂಪೂರ್ಣ ನೈರ್ಮ್ಯಲೀಕರಣ ಅಭಿಯಾನದ ಸಂದರ್ಭದಲ್ಲೂ ಈ ಐದು ರಾಜ್ಯಗಳ ಸಾಧನೆ ಇದೇ ಆಗಿತ್ತು. ದೇಶದ 1.2 ಬಿಲಿಯನ್ ಜನಸಂಖ್ಯೆಯ ಶೇ.37ರಷ್ಟು ಜನ ಈ ಐದು ರಾಜ್ಯಗಳಲ್ಲಿದ್ದಾರೆ. ಈ ಐದು ರಾಜ್ಯಗಳಲ್ಲಿರುವ ಒಟ್ಟು ಜನಸಂಖ್ಯೆ 448 ಮಿಲಿಯನ್. ಈ ರಾಜ್ಯಗಳಲ್ಲಿ ವಿಫಲವಾದರೆ ಸ್ವಚ್ಛತಾ ಅಭಿಯಾನ ಯಶಸ್ವಿಯಾಗುವುದು ಬಹುತೇಕ ಅಸಂಭವ ಎಂದು ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ . ದೇಶದ ಸ್ವಾತಂತ್ರ ಹೋರಾಟದ ವೇಳೆ ಮಹಾತ್ಮಾ ಗಾಂಧೀಜಿ ಚಾಲನೆ ನೀಡಿದ್ದ ಸ್ವಚ್ಛಾಗ್ರಹ ಎಂಬ ಅಭಿಯಾನದ ಕಡೆಗೆ ಪ್ರಧಾನಿ ಮೋದಿ ಈ ವಾರ ಗಮನ ಸೆಳೆದಿದ್ದಾರೆ. ಆದರೆ ಪ್ರಧಾನಿಯವರ ಕ್ಷೇತ್ರ ವಾರಣಾಶಿಯಲ್ಲಿ ಶೌಚಾಲಯ ನಿರ್ಮಿಸುವ ತನ್ನ ಗುರಿಯನ್ನು ಸಾಧಿಸಲು ಸರಕಾರಕ್ಕೆ ಕನಿಷ್ಠ 32 ವರ್ಷ ಬೇಕಾಗಬಹುದು ಎಂದು ಸಿಟಿಝನ್ ಎಂಗೇಜ್‌ಮೆಂಟ್ ಪ್ಲಾಟ್‌ಫಾರಂ ಸಮೀಕ್ಷೆಯಲ್ಲಿ ತಿಳಿಸಿದೆ. ರಾಜನಾಥ್ ಸಿಂಗ್ ಅವರ ಕ್ಷೇತ್ರ ಲಕ್ನೋದಲ್ಲಿ 35 ವರ್ಷ, ವಿದೇಶಾಂಗ ವ್ಯವಹಾರ ಸಚಿವೆ ಸುಶ್ಮಾ ಸ್ವರಾಜ್ ಅವರ ಕ್ಷೇತ್ರ ವಿದಿಷಾದಲ್ಲಿ 8 ವರ್ಷ, ಕೃಷಿ ಸಚಿವ ರಾಧಾಮೋಹನ ಸಿಂಗ್ ಅವರ ಕ್ಷೇತ್ರದಲ್ಲಿ 74 ವರ್ಷ, ಸಾರಿಗೆ ಸಚಿವ ನಿತಿನ ಗಡ್ಕರಿ ಅವರ ಕ್ಷೇತ್ರದಲ್ಲಿ ಗುರಿ ಸಾಧಿಸಲು 2 ವರ್ಷ ಬೇಕಾಗುತ್ತದೆ ಎಂದು ಸಮೀಕ್ಷೆ ಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X