Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸಾಮ್ನಾ’ ವ್ಯಂಗ್ಯಚಿತ್ರಕ್ಕಾಗಿ...

‘ಸಾಮ್ನಾ’ ವ್ಯಂಗ್ಯಚಿತ್ರಕ್ಕಾಗಿ ಉದ್ಧವ್‌ರಿಂದ ಕ್ಷಮೆಯಾಚನೆ

ವಾರ್ತಾಭಾರತಿವಾರ್ತಾಭಾರತಿ1 Oct 2016 11:09 PM IST
share

ಮುಂಬೈ,ಅ.1: ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ಪ್ರಕಟಗೊಂಡಿದ್ದ, ಮರಾಠಾ ಸಮುದಾಯದ ರ್ಯಾಲಿಗಳನ್ನು ಗೇಲಿ ಮಾಡಿದ್ದ ವ್ಯಂಗ್ಯಚಿತ್ರಕ್ಕಾಗಿ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಶನಿವಾರ ಕ್ಷಮೆಯನ್ನು ಯಾಚಿಸಿದ್ದಾರೆ. ವಿವಾದವನ್ನು ಹುಟ್ಟು ಹಾಕಿದ್ದ ಈ ವ್ಯಂಗ್ಯಚಿತ್ರದಿಂದಾಗಿ ಪಕ್ಷವು ಮರಾಠಾ ಸಮುದಾಯ ಮತ್ತು ರಾಜಕೀಯ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತಲ್ಲದೆ, ಇಲ್ಲಿಯ ಪಕ್ಷದ ಕಚೇರಿಯ ಮೇಲೆ ದಾಳಿಯೂ ನಡೆದಿತ್ತು.

 ಕಳೆದ ರವಿವಾರದ ‘ಸಾಮ್ನಾ’ ಸಂಚಿಕೆಯಲ್ಲಿ ಪ್ರಕಟಗೊಂಡಿದ್ದ ವ್ಯಂಗ್ಯಚಿತ್ರವು ಸರಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಗಳಲ್ಲಿ ಮೀಸಲಾತಿಯಂತಹ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮರಾಠಾ ಸಮುದಾಯವು ರಾಜ್ಯಾದ್ಯಂತ ನಡೆಸಿದ್ದ ವೌನ ಮೆರವಣಿಗೆಗಳನ್ನು ಪ್ರಸ್ತಾಪಿಸಿತ್ತು.
ವ್ಯಂಗ್ಯಚಿತ್ರಕ್ಕೆ ಸಂಬಂಧಿಸಿದ ವಿವಾದ ಅಂತ್ಯ ಕಂಡಿರಬಹುದು. ಆದರೆ ನನ್ನ ಹೃದಯದಲ್ಲಿನ ಕ್ಷೋಭೆಯಿನ್ನೂ ಹಾಗೆಯೇ ಇದೆ. ನಾವು ಮಹಿಳೆಯರನ್ನು ಗೌರವಿಸುತ್ತೇವೆ,ಶಿವ ಸೈನಿಕನೋರ್ವ ಎಂದೂ ಮಹಿಳೆಯರನ್ನು ಅವಹೇಳನ ಮಾಡುವುದಿಲ್ಲ. ಹೀಗಾಗಿ ಈ ಘಟನೆ ನನಗೆ ತೀವ್ರ ನೋವನ್ನುಂಟು ಮಾಡಿದೆ. ಈ ವಿವಾದದಿಂದಾಗಿ ಶಿವಸೇನೆಯಲ್ಲಿನ ತಮ್ಮ ನಂಬಿಕೆಯನ್ನು ಕಳೆದುಕೊಳ್ಳದ ಜನತೆಗೆ ನಾನು ಆಭಾರಿಯಾಗಿದ್ದೇನೆ ಎಂದು ಠಾಕ್ರೆ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿವಸೇನೆಯ ಅಧ್ಯಕ್ಷನಾಗಿ ಮತ್ತು ‘ಸಾಮ್ನಾ’ದ ಸಂಪಾದಕನಾಗಿ ಈ ವ್ಯಂಗ್ಯಚಿತ್ರದಿಂದ ನೊಂದುಕೊಂಡಿರ ಬಹುದಾದ ಎಲ್ಲ ತಾಯಂದಿರು ಮತ್ತು ಸಹೋದರಿಯರ ಕ್ಷಮೆ ಕೋರುತ್ತೇನೆ. ಆದರೆ ಈ ವ್ಯಂಗ್ಯಚಿತ್ರವು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X