Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಿರೆ- ಏಸ್ ಸಿವಿಲ್ ಸರ್ವಿಸ್ ಅಕಾಡಮಿ...

ಕರ್ನಿರೆ- ಏಸ್ ಸಿವಿಲ್ ಸರ್ವಿಸ್ ಅಕಾಡಮಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Oct 2016 1:39 PM IST
share
ಕರ್ನಿರೆ- ಏಸ್ ಸಿವಿಲ್ ಸರ್ವಿಸ್ ಅಕಾಡಮಿ ಉದ್ಘಾಟನೆ

ಮಂಗಳೂರು, ಅ.2: ಉನ್ನತ ನಾಗರಿಕ ಸೇವೆಗಳ ಪರೀಕ್ಷೆಗೆ ತರಬೇತಿ ನೀಡುವ ಉದ್ದೇಶವನ್ನಿಟ್ಟುಕೊಂಡು ಏಸ್ ಫೌಂಡೇಶನ್ ವತಿಯಿಂದ ಆರಂಭಿಸಲಾದ ಕರ್ನಿರೆ- ಏಸ್ ಸಿವಿಲ್ ಸರ್ವಿಸ್ ಅಕಾಡಮಿಯನ್ನು ಇಂದು ಬಲ್ಮಠದ ಮಿಷನ್ ಕಂಪೌಂಡ್‌ನ ವಿಶ್ವಾಸ್ ರಾಯಲ್ ಅಪಾರ್ಟ್‌ಮೆಂಟ್ ಸನಿಹದಲ್ಲಿರುವ ಕೆಎಸಿಎಸ್‌ಎ ಕ್ಯಾಂಪಸ್‌ನಲ್ಲಿ ಚೆನ್ನೈ ಎಕೆ ಐಎಎಸ್ ಅಕಾಡಮಿ ಸ್ಥಾಪಕಾಧ್ಯಕ್ಷ ಮೌಲಾನ ಶಂಸುದ್ಧೀನ್ ಖಾಸಿಮಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉನ್ನತ ನಾಗರಿಕ ಸೇವೆಯಾದ ಐಎಎಸ್, ಐಪಿಎಸ್‌ನಲ್ಲಿ ತೇರ್ಗಡೆಯಾಗಲು ಶ್ರಮ, ಸಹನೆ ಅಗತ್ಯ. ಸಮುದಾಯದ ಯುವಜನರಿಗೆ ಪದವಿಯಾದ ತಕ್ಷಣ ಹಣ ಮಾಡಬೇಕೆಂಬ ಆಸೆಯಿರುತ್ತದೆ. ಆದರೆ ಐಎಎಸ್, ಐಪಿಎಸ್ ತೇರ್ಗಡೆಯಾಗಲು ಸಹನೆಯಿರಬೇಕು. ಅದೇ ರೀತಿಯಲ್ಲಿ ಸಂಸ್ಥೆ ಕೂಡ ತಕ್ಷಣ ಫಲಿತಾಂಶವನ್ನು ನಿರೀಕ್ಷಿಸದೆ ತರಬೇತಿಯನ್ನು ನೀಡಬೇಕು ಎಂದು ಹೇಳಿದರು.

ರಾಜಕಾರಣದಲ್ಲಿ ಸೀಮಿತ ಅವಧಿಯಲ್ಲಿ ಅಧಿಕಾರ ಪಡೆಯಬಹುದು. ಆದರೆ ಅಧಿಕಾರಿಯಾಗಿದ್ದರೆ ದೀರ್ಘಾವಧಿ ಅಧಿಕಾರ ನಡೆಸಬಹುದು. ಈ ಹಿನ್ನೆಲೆಯಲ್ಲಿ ಸಮುದಾಯದ ಯುವಕರು ಅಧಿಕಾರಿಗಳಾಗುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಐಜಿಪಿ ಯು.ನಿಸಾರ್ ಅಹ್ಮದ್, ಸರಕಾರಿ ಕೆಲಸಕ್ಕೆ ಸೇರುವ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಮುಸ್ಲಿಂ ಸಮುದಾಯದ ಯುವಕರು ಸರಕಾರಿ ಸೇವೆಯಲ್ಲಿ ಕೆಲಸ ಮಾಡಲು ಹಿಂಜರಿಯುತ್ತಾರೆ. ಯುವಕರು ಸರಕಾರಿ ಸೇವೆಯಲ್ಲಿ ಕೆಲಸ ಮಾಡುವ ಬಗ್ಗೆ ಜಾಗೃತಿಯನ್ನು ಯುವಕರಲ್ಲಿ ಮತ್ತು ಪೋಷಕರಲ್ಲಿ ಮೂಡಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಕರ್ನಾಟಕ ಗೃಹ ಮಂಡಳಿ ಆಯುಕ್ತ ಎ.ಬಿ.ಇಬ್ರಾಹೀಂ ಮಾತನಾಡಿ, ಮುಸ್ಲಿಂ ಸಮುದಾಯದ ಯುವಕರು ಕೇವಲ ಐಎಎಸ್, ಐಪಿಎಸ್ ಗುರಿಯನ್ನಿಡುವುದರ ಜೊತೆಗೆ ದೇಶದಲ್ಲಿರುವ ಎಲ್ಲಾ ನಾಗರಿಕ ಸೇವೆಯಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಚಿಂತನೆ ಹೊಂದಿರಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಮಂಡಳಿ ಅಧ್ಯಕ್ಷ ಎಸ್ .ಎಂ.ರಶೀದ್ ಹಾಜಿ, ಏಸ್ ಫೌಂಡೇಶನ್ ಅಧ್ಯಕ್ಷ ಹಾಜಿ ಕರ್ನಿರೆ ಸೈಯದ್ , ಮನ್ಸೂರ್ ಆಝಾದ್, ಅಬ್ದುರ್ರವೂಫ್ ಪುತ್ತಿಗೆ, ಸಿರಾಜ್ ಅಹ್ಮದ್ ಉಪಸ್ಥಿತರಿದ್ದರು.

ಏಸ್ ಫೌಂಡೇಶನ್ ಅಧ್ಯಕ್ಷ ಸಾದುದ್ದೀನ್ ಸಾಲಿಹ್ ಸ್ವಾಗತಿಸಿದರು. ನಿರ್ದೇಶಕ ನಝೀರ್ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X