Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಳ್ಳಾರಿ ಟಸ್ಕರ್ಸ್‌ ಕೆಪಿಎಲ್ ಚೊಚ್ಚಲ...

ಬಳ್ಳಾರಿ ಟಸ್ಕರ್ಸ್‌ ಕೆಪಿಎಲ್ ಚೊಚ್ಚಲ ಚಾಂಪಿಯನ್

ಫೈನಲ್‌ನಲ್ಲಿ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ 35 ರನ್‌ಗಳ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ2 Oct 2016 9:47 PM IST
share
ಬಳ್ಳಾರಿ ಟಸ್ಕರ್ಸ್‌ ಕೆಪಿಎಲ್ ಚೊಚ್ಚಲ ಚಾಂಪಿಯನ್

ಹುಬ್ಬಳ್ಳಿ, ಅ.2: ಬಳ್ಳಾರಿ ಟಸ್ಕರ್ಸ್‌ ತಂಡ ಇಲ್ಲಿ ನಡೆದ ಆರನೆ ಆವೃತ್ತಿಯ ಕೆಪಿಎಲ್ ಟ್ವೆಂಟಿ-20 ಟೂರ್ನಿಯ ಫೈನಲ್‌ನಲ್ಲಿ ಇಂದು ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ 35 ರನ್‌ಗಳ ಜಯ ಗಳಿಸುವ ಮೂಲಕ ಮೊದಲ ಬಾರಿ ಕೆಪಿಎಲ್ ಕಿರೀಟ ಧರಿಸಿದೆ.

ಹುಬ್ಬಳ್ಳಿಯ ಕೆಎಸ್‌ಸಿಎ ರಾಜ್‌ನಗರ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 190 ರನ್‌ಗಳ ಕಠಿಣ ಸವಾಲನ್ನು ಪಡೆದಿದ್ದ ಹುಬ್ಬಳ್ಳಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 154 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ತವರಿನಲ್ಲಿ ಪ್ರಶಸ್ತಿ ಎತ್ತುವ ಅವಕಾಶವನ್ನು ಹುಬ್ಬಳ್ಳಿ ಕಳೆದುಕೊಂಡಿತು.

ಬಳ್ಳಾರಿ ತಂಡದ ಸಂಘಟಿತ ದಾಳಿಯ ಮುಂದೆ ಹುಬ್ಬಳ್ಳಿಯ ದಾಂಡಿಗರು ರನ್ ಗಳಿಸಲು ಪರದಾಡಿದರು. ಮುಹಮ್ಮದ್ ತಾಹ (36), ಡಿ. ನೇಗಿ (39), ನಯಕ ಕಪೂರ್(27), ಎಸ್. ಅರವಿಂದ್(ಔಟಾಗದೆ 11) ಎರಡಂಕೆಯ ಸ್ಕೋರ್ ದಾಖಲಿಸಿದರು.
ಬಳ್ಳಾರಿ ತಂಡದ ಲಾಝಾರುಸ್ 21ಕ್ಕೆ 3 ವಿಕೆಟ್, ಅಮಿತ್ ವರ್ಮ 38ಕ್ಕೆ 2, ಎಂಪಿ ಕೃಷ್ಣ, ಅಖಿಲ್, ಅನಿಲ್, ಎಸ್‌ಎನ್ ರಾಜು ತಲಾ 1 ವಿಕೆಟ್ ಹಂಚಿಕೊಂಡರು.

ಬಳ್ಳಾರಿ ಟಸ್ಕರ್ಸ್‌ 189/5ಬಳ್ಳಾರಿ ಟಸ್ಕರ್ಸ್‌ ತಂಡ ಕೆಪಿಎಲ್ ಟ್ವೆಂಟಿ-20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 189 ರನ್ ಗಳಿಸಿತ್ತು. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಳ್ಳಾರಿ ತಂಡಕ್ಕೆ ಆರಂಭಿಕ ದಾಂಡಿಗ ಆರ್‌ಪಿ ಕದಮ್ ಮತ್ತು ಬಿ.ಅಖಿಲ್ ಅವರ ಅರ್ಧಶತಕಗಳ ಕೊಡುಗೆ ನೀಡಿದರು.

ತಂಡದ ಸ್ಕೋರ್ 1.2 ಓವರ್‌ಗಳಲ್ಲಿ 7 ಆಗಿದ್ದಾಗ ತಂಡದ ಮೊದಲ ವಿಕೆಟ್ ಉರುಳಿತು. ಆರಂಭಿಕ ದಾಂಡಿಗ ಕೆ.ಬಿ ಪವನ್ (1) ಅವರು ರನೌಟಾದರು.
 
ಎರಡನೆ ವಿಕೆಟ್‌ಗೆ ಕದಮ್ ಮತ್ತು ಎಸ್‌ಎನ್ ರಾಜು ಜೊತೆಯಾದರು. ಇವರು ಎರಡನೆ ವಿಕೆಟ್‌ಗೆ ಜೊತೆಯಾಟದಲ್ಲಿ 83 ರನ್ ಸೇರಿಸಿದರು. ರಾಜು 36 ರನ್ (27ಎ, 3ಬೌ, 2ಸಿ) ಗಳಿಸಿದರು. ಕದಮ್ ತಂಡದ ಸ್ಕೋರ್ 113 ತಲುಪುವ ತನಕ ಕ್ರೀಸ್‌ನಲ್ಲಿ ನಿಂತರು. 40 ಎಸೆತಗಳನ್ನು ಎದುರಿಸಿದ ಅವರು 8 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 61 ರನ್ ಜಮೆ ಮಾಡಿದರು. ನಾಯಕ ಅಮಿತ್ ವರ್ಮ 15 ರನ್ ಗಳಿಸಿ ನಿರ್ಗಮಿಸಿದರು.

ಬಿ. ಅಖಿಲ್ ಅವರು 24 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಮದ ವೇಗದ ಅರ್ಧಶತಕ ದಾಖಲಿಸಿ ಹೂವೆರ ಎಸೆತದಲ್ಲಿ ವಿಕೆಟ್ ಕೀಪರ್ ಭರತ್‌ಗೆ ಕ್ಯಾಚ್ ನೀಡಿದರು. ಆಗ ತಂಡದ ಸ್ಕೋರ್ 16.4 ಓವರ್‌ಗಳಲ್ಲಿ 160ಕ್ಕೆ ತಲುಪಿತ್ತು.

ಎಸ್‌ಪಿ ಮಂಜುನಾಥ್ ಔಟಾಗದೆ 12 ರನ್ ಮತ್ತು ಲಾಝಾರುಸ್ ಔಟಾಗದೆ 10 ರನ್ ಗಳಿಸಿದರು.

ಹುಬ್ಬಳ್ಳಿ ತಂಡದ ಕೌಶಿಕ್ 18ಕ್ಕೆ 2 ವಿಕೆಟ್, ಎಸ್.ಅರವಿಂದ್ ಮತ್ತು ಹೂವೆರ್ ತಲಾ 1 ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್ ವಿವರ

ಬಳ್ಳಾರಿ ಟಸ್ಕರ್ಸ್‌ 20 ಓವರ್‌ಗಳಲ್ಲಿ 189/5(ಕದಮ್ 61, ಅಖಿಲ್ 50, ರಾಜು 36; ಕೌಶಿಕ್ 18ಕ್ಕೆ 2).

ಹುಬ್ಬಳ್ಳಿ ಟೈಗರ್ಸ್‌ 20 ಓವರ್‌ಗಳಲ್ಲಿ 154/9( ನೇಗಿ 39,ತಾಹ 36, ಕಪೂರ್ 27; ಲಾಝಾರುಸ್ 21ಕ್ಕೆ 3, ಅಮಿತ್ ಅರ್ಮ 38ಕ್ಕೆ 2).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X