Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ವಿನ್ಯಾಸಕ್ಕೆ ಪಾಕಿಸ್ತಾನ ಆಕ್ಷೇಪ

ಭಾರತದ ವಿನ್ಯಾಸಕ್ಕೆ ಪಾಕಿಸ್ತಾನ ಆಕ್ಷೇಪ

ಕಿಶನ್‌ಗಂಗಾ ಜಲವಿದ್ಯುತ್ ಯೋಜನೆ

ವಾರ್ತಾಭಾರತಿವಾರ್ತಾಭಾರತಿ3 Oct 2016 11:37 PM IST
share

ಹೊಸದಿಲ್ಲಿ, ಅ.3: ಭಾರತದ ಕಿಶನ್‌ಗಂಗಾ ಜಲವಿದ್ಯುತ್ ಯೋಜನೆಯ ಕುರಿತಾಗಿ ತನ್ನ ಆಕ್ಷೇಪವನ್ನು ಆಲಿಸಲು ಮಧ್ಯಸ್ಥಿಕೆ ನ್ಯಾಯಾಲಯವೊಂದನ್ನು ರಚಿಸುವಂತೆ ಪಾಕಿಸ್ತಾನವು ವಿಶ್ವಬ್ಯಾಂಕನ್ನು ಆಗ್ರಹಿಸಿದೆ. ಅದೇ ವೇಳೆ ಭಾರತವು ವಿವಾದ ಪರಿಹಾರಕ್ಕೆ ತಟಸ್ಥ ಪರಿಣತನೊಬ್ಬನನ್ನು ನೇಮಿಸುವಂತೆ ವಿಶ್ವಬ್ಯಾಂಕನ್ನು ಕೇಳಿಕೊಂಡಿದೆ.

ಜಮ್ಮು-ಕಾಶ್ಮೀರದಲ್ಲಿ ನಿರ್ಮಿಸಲಾಗುವ ಈ ಜಲ ವಿದ್ಯುತ್ ಯೋಜನೆಯ ವಿನ್ಯಾಸದ ಬಗ್ಗೆ ಪಾಕಿಸ್ತಾನವು ಆಕ್ಷೇಪವೆತ್ತಿದೆ. ಅದು ಉಭಯ ದೇಶಗಳ ನಡುವಣ ಸಿಂಧೂ ಜಲ ಒಪ್ಪಂದದ ಮಾನದಂಡಕ್ಕೆ ಅನುಗುಣವಾಗಿಲ್ಲವೆಂದು ಪಾಕಿಸ್ತಾನ ಆರೋಪಿಸಿದೆ.

 ಆದಾಗ್ಯೂ, ಯೋಜನೆಯು ಒಪ್ಪಂದದ ಮಾನದಂಡಕ್ಕನುಸಾರವಾಗಿಯೇ ಇದೆಯೆಂದು ಭಾರತ ಒತ್ತಿ ಹೇಳಿದೆ. ಒಪ್ಪಂದದಲ್ಲಿ ಸೂಚಿಸಲಾಗಿರುವಂತೆ ಇದೊಂದು ‘ತಾಂತ್ರಿಕ ವಿಚಾರದ’ ವಿವಾದವಾಗಿರುವುದರಿಂದ ತಟಸ್ಥ ಪರಿಣತನೊಬ್ಬನನ್ನು ನೇಮಿಸುವಂತೆ ಅದು ವಿಶ್ವಬ್ಯಾಂಕ್‌ಗೆ ಮನವಿ ಮಾಡಿದೆ. ಪಾಕಿಸ್ತಾನವು ಮಧ್ಯಸ್ಥಿಕೆ ನ್ಯಾಯಾಲಯವನ್ನು ರಚಿಸುವಂತೆ ವಿಶ್ವ ಬ್ಯಾಂಕನ್ನು ವಿನಂತಿಸಿದ್ದರೆ, ತಟಸ್ಥ ಪರಿಣತನೊಬ್ಬನನ್ನು ನೇಮಿಸುವಂತೆ ಭಾರತ ಮನವಿ ಮಾಡಿದೆ. ಒಪ್ಪಂದವೂ ಅದನ್ನೇ ಹೇಳುತ್ತಿದೆ. ಈ ವಿಷಯವನ್ನು ಕಾನೂನು ಪರಿಣತನೊಬ್ಬನಿಗಿಂತ ಚೆನ್ನಾಗಿ ಒಬ್ಬ ಇಂಜಿನಿಯರ್‌ನಂತಹ ತಾಂತ್ರಿಕ ಪರಿಣತ ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲನೆಂದು ಮೂಲಗಳು ಹೇಳಿವೆ.
ಭಾರತ ಹಾಗೂ ಪಾಕಿಸ್ತಾನ ಯೋಜನೆಗೆ ಸಂಬಂಧಿಸಿ ತಮ್ಮ ತಮ್ಮ ಅಂಶಗಳನ್ನು ಸೆ.27 ರಂದು ವಾಶಿಂಗ್ಟನ್‌ನಲ್ಲಿ ವಿಶ್ವಬ್ಯಾಂಕ್‌ಗೆ ಪ್ರತ್ಯೇಕವಾಗಿ ಸಲ್ಲಿಸಿವೆ.
ಪಾಕಿಸ್ತಾನವು ನದಿಯ ಕೆಳಭಾಗ ದಲ್ಲಿರುವುದರಿಂದ ಭಾರತದ ಯೋಜನೆಯ ವಿನ್ಯಾಸದಿಂದ ತನಗೆ ನೀರು ಹರಿಯಲು ಅಡಚಣೆಯಾಗಬಹುದೆಂಬುದು ಅದರ ಭೀತಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X