Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಿವಾಲ್ವರ್ ತೋರಿಸಿ ಕಟೀಲು ದೇವಳದ ಅರ್ಚಕರ...

ರಿವಾಲ್ವರ್ ತೋರಿಸಿ ಕಟೀಲು ದೇವಳದ ಅರ್ಚಕರ ಮನೆಯಿಂದ ದರೋಡೆ

82 ಪವನ್ ಚಿನ್ನಾಭರಣ, 50 ಸಾವಿರ ನಗದು ದೋಚಿ ಪರಾರಿಯಾದ ಕಳ್ಳರು

ವಾರ್ತಾಭಾರತಿವಾರ್ತಾಭಾರತಿ4 Oct 2016 12:26 PM IST
share
ರಿವಾಲ್ವರ್ ತೋರಿಸಿ ಕಟೀಲು ದೇವಳದ ಅರ್ಚಕರ ಮನೆಯಿಂದ ದರೋಡೆ

ಮುಲ್ಕಿ, ಅ.4: ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ ಅವರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮಾರಕಾಸ್ತ್ರಗಳಿಂದ ಮನೆ ಮಂದಿಯನ್ನು ಬೆದರಿಸಿ ಹಲ್ಲೆ ನಡೆಸಿ ಲಕ್ಷಾಂತರ ರೂ. ಬೆಲೆ ಬಾಳುವ ಸುಮಾರು 82 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದು ದೋಚಿರುವ ಘಟನೆ ಸೋಮವಾರ ತಡ ರಾತ್ರಿ ಕಟೀಲು ಗಿಡಿಗೆರೆ ಎಂಬಲ್ಲಿ ನಡೆದಿದೆ.

ಕಟೀಲು ದೇವಳದಲ್ಲಿ ನವರಾತ್ರಿಯ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ತಡರಾತ್ರಿ ಮುಗಿಸಿಕೊಂಡು ರಾತ್ರಿ 12 ಗಂಟೆ ಸುಮಾರಿಗೆ ಗಿಡಿಗೆರೆ ಶೇಡಿಗುರಿ ಬಳಿಯ ಮನೆಯಲ್ಲಿ ಮಲಗಿದ್ದ ಕುಟುಂಬವನ್ನು ಎಚ್ಚರಿಸಿದ ದರೋಡೆಕೋರರು ನಮ್ಮವರೊಬ್ಬರಿಗೆ ಅನಾರೋಗ್ಯ ಕಾಡುತ್ತಿದ್ದು ಅದಕ್ಕಾಗಿ ಆಸ್ರಣ್ಣರ ಬಳಿ ಪ್ರಸಾದ ಸ್ವೀಕರಿಸಲು ಬಂದಿರುವುದಾಗಿ ಹೇಳಿ ಬಾಗಿಲು ತೆರೆಯುವಂತೆ ಕೇಳಿಕೊಂಡಿದ್ದರು. ಆದರೆ ಹೆದರಿದ್ದ ಮನೆಮಂದಿ ಬಾಗಿಲು ತೆರೆಯಲು ಹಿಂದೇಟು ಹಾಕಿದ್ದರು. ಆದಾಗಲೇ ಶಸ್ತ್ರಸಜ್ಜಿತರಾಗಿ ಬಂದಿದ್ದ ಸುಮಾರು 6 ಮಂದಿ ದರೋಡೆ ಕೋರರು ಬಾಗಿಲು ಮುರಿದು ಒಳ ಪ್ರವೇಶಿಸಿದ್ದರು. ಅದೇ ಸಮಯಕ್ಕೆ ಮನೆಯ ಮಾಳಿಗೆ ಮೂಲಕ ಇಬ್ಬರು ದರೋಡೆಕೋರರು ನುಸುಳಿ ಮಾರಕಾಯುಧಗಳನ್ನು ತೋರಿಸಿ ಬೆದರಿಸಿದ್ದರು.

ಇದನ್ನು ಕಂಡ ವಾಸುದೇವ ಅಸ್ರಣ್ಣ ಅವರ ಪುತ್ರ ಕುಮಾರ ಆಸ್ರಣ್ಣ ಅವರು ತಮ್ಮ ಅಣ್ಣನಿಗೆ ಫೋನ್ ಮಾಡಿ ವಿಷಯ ತಿಳಿಸಲು ಯತ್ನಿಸಿದಾಗ ಬಂದೂಕು ತೋರಿಸಿ ಬೆದರಿಸಿ ಮೊಬೈಲ್ ಕೆಳಗೆ ಹಾಕುವಂತೆ ಬೆದರಿಸಿದ್ದರು. ಬಳಿಕ ಹಲ್ಲೆ ನಡೆಸಿ ಬೆದರಿಸಿ ಮನೆಯ ಕಪಾಟುಗಳಲ್ಲಿ ಇರಿಸಿದ್ದ ಸುಮಾರು 82 ಪವನ್ ಚಿನ್ನಾಭರಣ, ಹೆಂಗಸರ ಮೇಲಿದ್ದ ಚಿನ್ನಾಭರಣ ಹಾಗೂ ಸುಮಾರು 50 ಸಾವಿರ ರೂ. ನಗದು ಲೂಟಿ ಮಾಡಿ ಮನೆ ಮಂದಿಯನ್ನು ಒಂದು ಕೋಣೆಯಲ್ಲಿ ಕೂಡಿಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ವಾಸುದೇವ ಆಸ್ರಣ್ಣರ ತಮ್ಮ ವೆಂಕಟ್ರಮಣ ಆಸ್ರಣ್ಣ ವಾಸುದೇವ ಆಸ್ರಣ್ಣರ ಮನೆಗೆ ಧಾವಿಸಿ ಬಾಗಿಲು ತೆರೆದು ಕೋಣೆಯಲ್ಲಿದ್ದವರನ್ನು ಬಿಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಮನೆಯವರ ಚಲನವಲನಗಳನ್ನು ಮೊದಲೇ ತಿಳಿದು ಕೊಂಡು ಈ ಕೃತ್ಯ ನಡೆಸಲಾಗಿದೆ ಎನ್ನಲಾಗಿದ್ದು, ಸಿನಿಮೀಯ ಮಾದರಿಯಲ್ಲಿ ನಡೆದ ಈ ದರೋಡೆ ಪ್ರಕರಣ ಕಟೀಲು ಸಹಿತ ಸುತ್ತ ಮುತ್ತಲಿನ ಜನತೆಯಲ್ಲಿ ಭಯಬೀತರನ್ನಾಗಿಸಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ರೇಖಾಚಿತ್ರಗಾರರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ತಂಡದಲ್ಲಿ ಒಬ್ಬ ಮುಸುಕುಧಾರಿ ಕಳ್ಳ

ಆಸ್ರಣ್ಣರ ಮನೆ ದರೋಡೆಯಲ್ಲಿ 8 ಮಂದಿ ಕಳ್ಳರು ಇದ್ದರು. ಆದರೆ, ಅವರಲ್ಲಿ ಒಬ್ಬ ಮಾತ್ರ ಮುಖಕ್ಕೆ ಮುಸುಕು ಹಾಕಿಕೊಂಡು ಮುಖ ಮುಚ್ಚಿಕೊಂಡಿದ್ದ ಎಂದಿರುವ ಮನೆ ಮಂದಿ, ಈತ ಸ್ಥಳೀಯನಾಗಿರಬೇಕು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
  
3 ಮೊಬೈಲ್ ಫೊನ್‌ಗಳು, 1 ಟ್ಯಾಬ್ ಅಪಹರಿಸಿದ ಖದೀಮರು, 1 ಮೊಬೈಲನ್ನು ಮನೆಯ ಹಿಂಭಾಗದಲ್ಲಿ ಎಸೆದು ಹೋಗಿದ್ದರು. ಶ್ವಾನದಳದ ಕಾರ್ಯಾಚರಣೆಯ ವೇಳೆ ಈ ಮೊಬೈಲ್ ದೊರೆತಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಆಸ್ರಣ್ಣರ ಮನೆ ದರೋಡೆ ನಡೆಸಿದ ಕಳ್ಳರು ಅರ್ಧಂಬರ್ಧ ಹಿಂದಿ ಹಾಗೂ ತುಳು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಕುಮಾರ ಆಸ್ರಣ್ಣ ತಿಳಿಸಿದ್ದಾರೆ.

ಜನಪ್ರತಿನಿಧಿಗಳು ಭೇಟಿ

ದರೋಡೆ ನಡೆದ ವಾಸುದೇವ ಆಸ್ರಣ್ಣರ ಮನೆಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮುಲ್ಕಿ- ಮೂಡುಬಿದರೆ ಶಾಸಕ ಕೆ. ಅಭಯಚಂದ್ರ ಜೈನ್ ಭೇಟಿ ಮನೆ ಮಂದಿಗೆ ಸಾಂತ್ವನ ಹೇಳಿದ್ದು, ಶೀಘ್ರ ದರೋಡೆಕೋರರನ್ನು ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X