Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ಪರ ವಾದ ಮಂಡಿಸಲು ನಾರಿಮನ್‌ ...

ಕರ್ನಾಟಕ ಪರ ವಾದ ಮಂಡಿಸಲು ನಾರಿಮನ್‌ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ4 Oct 2016 12:38 PM IST
share
ಕರ್ನಾಟಕ ಪರ ವಾದ ಮಂಡಿಸಲು ನಾರಿಮನ್‌  ಸಮ್ಮತಿ

ಬೆಂಗಳೂರು, ಅ.4: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಕನಾಟಕದ ಪರ ವಾದ ಮಂಡಿಸಲು ವಕೀಲ ಫಾಲಿ ಎಸ್‌.ನಾರಿಮನ್‌ ಒಪ್ಪಿಗೆ ನೀಡಿದ್ದಾರೆ. 
ಕರ್ನಾಟಕದ ಕಾನೂನು ತಂಡ ಇಂದು ನಾರಿಮನ್‌ ಅವರನ್ನು ದಿಲ್ಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್‌ ಅವರು ಕೂಡಾ ನಾರಿಮನ್‌ ಅವರನ್ನು ಭೇಟಿಯಾಗಿ ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್‌‌ನ ಆದೇಶ ಪಾಲಿಸಲು ಕರ್ನಾಟಕ ಒಪ್ಪಿಕೊಂಡಿದ್ದು, ಸದನದ ನಿರ್ಣಯದ ಮಾಹಿತಿಯನ್ನು ನಾರಿಮನ್‌ ಅವರಿಗೆ ಕರ್ನಾಟಕದ ಕಾನೂನು ತಂಡ ನೀಡಿದೆ. ಪ್ರತಿಪಕ್ಷಗಳ ಟೀಕೆಗೆ ಬೇಸರ  ಮಾಡಿಕೊಳ್ಳದಂತೆ   ಅವರು ಮನವಿ  ಮಾಡಿದರು ಎಂದು ತಿಳಿದು ಬಂದಿದೆ.  
ಫಾಲಿ ನಾರಿಮನ್‌ ಅವರು ತಾನು ಇನ್ನು ಮುಂದೆ ಕರ್ನಾಟಕದ ಪರ ವಾದಿಸುವುದಿಲ್ಲ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ  ಸಮಸ್ಯೆ ಉಂಟಾಗಿತ್ತು.

ತನ್ನ ಪ್ರತಿಷ್ಠಿತೆಗಾಗಿ ಸುಪ್ರೀಂ ಕೋರ್ಟ್‌‌ನಲ್ಲಿ ರಾಜ್ಯವನ್ನು ಬಲಿಪಶು ಮಾಡಿದರೆಂಬ ಆರೋಪ ಹೊತ್ತಿರುವ ನಾರಿಮನ್‌ ಅವರನ್ನು ಬದಲಾಯಿಸುವಂತೆ ವಿಪಕ್ಷ ನಾಯಕರು ಸೋಮವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಆಗ್ರಹಿಸಿದ್ದರು. ಆದರೆ  ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು  ರಾಜ್ಯದ ಪರ ವಕೀಲರಾಗಿ 32 ವರ್ಷಗಳ ಕಾಲ ಕೆಲಸ ಮಾಡಿರುವ ನಾರಿಮನ್‌ ಅವರನ್ನು ಬದಲಿಸಲು ಸಾಧ್ಯವಿಲ್ಲ  ಎಂದು ಸ್ಪಷ್ಟಪಡಿಸಿದ್ದರು.
"ನಾರಿಮನ್ ಅವರ ಸಾಮರ್ಥ್ಯ ಮತ್ತು ಬದ್ಧತೆಯನ್ನು ಯಾರೊಬ್ಬರಿಗೂ  ಪ್ರಶ್ನಿಸಲು ಅಸಾಧ್ಯ. ಈ ಕಾರಣದಿಂದಾಗಿ  ನಾರಿಮನ್ ಅವರ ಬದಲಾವಣೆ ಸಾಧ್ಯವಿಲ್ಲ. ಅ.18ರಂದು ನಡೆಯಲಿರುವ ವಿಚಾರಣೆಯಲ್ಲೂ ನಾರಿಮನ್ ಅವರೇ ರಾಜ್ಯದ ಪರವಾಗಿ ವಾದ ಮಂಡಿಸಲಿದ್ದಾರೆ. ತಂಡಕ್ಕೆ ಹೊಸಬರನ್ನು ಸೇರ್ಪಡೆ ಮಾಡುತ್ತೇವೆಯೇ ವಿನಃ ಯಾವುದೇ ಕಾರಣಕ್ಕೂ ತಂಡದ ಮುಖ್ಯಸ್ಥರ ಬದಲಾವಣೆ ಇಲ್ಲ ” ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
 ನಾರಿಮನ್‌  ವಾದ ಮಂಡನೆಯಿಂದ ಹಿಂದೆ ಸರಿಯುವ ನಿರ್ಧಾರವನ್ನು  ತಿಳಿಸಿದ ಬಳಿಕ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿತ್ತು. ಈ ಕಾರಣಕ್ಕಾಗಿ  ಕರ್ನಾಟಕದ ಕಾನೂನು ತಜ್ಞರ ನಿಯೋಗ  ಮಾಜಿ ಕೇಂದ್ರ ಸಚಿವ  ಹಾಗೂ ವಕೀಲ ಕಪಿಲ್‌ ಸಿಬಲ್‌  ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತ್ತು. ಈ ವೇಳೆ ಸಿಬಲ್‌ ಅವರು  ನಾರಿಮನ್ ಅವರು ವಾದ ಮಂಡನೆಯಿಂದ  ಹಿಂದೆ ಸರಿದರೆ ರಾಜ್ಯದ ಪರ ಸುಪ್ರೀಂ ಕೋರ್ಟ್‌‌ನಲ್ಲಿ ವಾದ ಮಂಡಿಸುವ ಭರವಸೆ ನೀಡಿದ್ದರು. 
ನಾರಿಮನ್‌ ಬೆಳಗ್ಗಿನ ತನಕ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ಕಂಡು ಬಾರದೆ ಇದ್ದಾಗ ಮುಖ್ಯ ಮಂತ್ರಿ  ಸಿದ್ದರಾಮಯ್ಯ ಅವರು ನಾರಿಮನ್‌ ಮನವೊಲಿಸುವ   ಯತ್ನಕ್ಕಾಗಿ ದಿಲ್ಲಿಗೆ  ತೆರಳುವ ಯೋಜನೆ ರೂಪಿಸಿದ್ದರು. ಈ ಉದ್ದೇಶಕ್ಕಾಗಿ ತನ್ನ ಇಂದಿನ ಪೂರ್ವ ನಿಯೋಜಿತ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X