Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನವರಾತ್ರಿ ವ್ರತಾಚರಣೆಯಲ್ಲಿ ಪ್ರಧಾನಿ...

ನವರಾತ್ರಿ ವ್ರತಾಚರಣೆಯಲ್ಲಿ ಪ್ರಧಾನಿ ಮೋದಿಗಿಂತಲೂ ಮಿಗಿಲು ಈ ಜನಪ್ರತಿನಿಧಿ!

* 8 ವರ್ಷಗಳಿಂದ ನವರಾತ್ರಿ ಪೂರ್ತಿ ಬರೀ ನೀರು ಸೇವಿಸುತ್ತಿರುವ ಮನಪಾ ಸದಸ್ಯೆ!

ವಾರ್ತಾಭಾರತಿವಾರ್ತಾಭಾರತಿ4 Oct 2016 1:05 PM IST
share
ನವರಾತ್ರಿ ವ್ರತಾಚರಣೆಯಲ್ಲಿ ಪ್ರಧಾನಿ ಮೋದಿಗಿಂತಲೂ ಮಿಗಿಲು ಈ ಜನಪ್ರತಿನಿಧಿ!

ಮಂಗಳೂರು, ಅ.4: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವರಾತ್ರಿ ಸಂದರ್ಭ ಕಳೆದ ಸುಮಾರು 4 ದಶಕದಿಂದ ಉಪವಾಸ ಆಚರಿಸುವುದು ಎಲ್ಲರಿಗೂ ತಿಳಿದ ವಿಚಾರ. ನಮ್ಮ ಮಂಗಳೂರಿನ ಜನಪ್ರತಿನಿಧಿಯೊಬ್ಬರು ಕಳೆದ 8 ವರ್ಷಗಳಿಂದ ನವರಾತ್ರಿ ಸಂದರ್ಭ ಕೇವಲ ನೀರು ಮಾತ್ರ ಸೇವಿಸಿ ವಿಶೇಷ ರೀತಿಯಲ್ಲಿ ದೇವಿಯ ಆರಾಧನೆ ಮಾಡುತ್ತಿದ್ದಾರೆ. ಪ್ರಸಕ್ತ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿರುವ ಕವಿತಾ ಸನಿಲ್ ಅವರೇ ಈ ಜನಪ್ರತಿನಿಧಿ.

ಅವರು ಕಳೆದ 8 ವರ್ಷಗಳಿಂದ ನವರಾತ್ರಿಯ ಪೂರ್ತಿ ಒಂಭತ್ತು ದಿನ ಅನ್ನಾಹಾರವಿಲ್ಲದೆ ಕೇವಲ ನೀರಿನಲ್ಲಿ ಉಪವಾಸ ವ್ರತ ಆಚರಿಸುತ್ತಿದ್ದಾರೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಿಯ ಪರಮ ಭಕ್ತೆಯಾಗಿರುವ ಕವಿತಾ ಸನಿಲ್ ಈ ವ್ರತವನ್ನು ತಮ್ಮ ಸ್ವ ಇಚ್ಛೆಯಿಂದ ಆಚರಿಸುತ್ತಿದ್ದು, ನವರಾತ್ರಿಯ ಒಂಬತ್ತು ದಿನಗಳಲ್ಲಿ ಯಾವುದಾದರೂ ಒಂದು ದಿನ ತಮ್ಮ ಮನೆಯಿಂದ ಅಂದರೆ ಬಿಜೈಯಿಂದ ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆಯನ್ನೂ ಕೈಗೊಳ್ಳುತ್ತಾರೆ.

ಈ ಪಾದಯಾತ್ರೆಯನ್ನು ಕಳೆದ 12 ವರ್ಷಗಳಿಂದ ಅವರು ನಿರ್ವಹಿಸುತ್ತಿದ್ದಾರೆ. ‘‘ನಾನು 12 ವರ್ಷಗಳಿಂದ ನವರಾತ್ರಿಯ ಸಂದರ್ಭ ಒಂದು ದಿನ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ. ಕಳೆದ 8 ವರ್ಷಗಳಿಂದ ಅನ್ನಾಹಾರವಿಲ್ಲದೆ ಬರೀ ನೀರು ಕುಡಿದು ನನ್ನ ವ್ರತವನ್ನು ಮುಂದುವರಿಸಿದ್ದೇನೆ. ಈ ಬಾರಿಯ ನವರಾತ್ರಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಿಂದ ಈ ಉಪವಾಸ ಆರಂಭಿಸಿದ್ದು, ಸೋಮವಾರ (ಅಕ್ಟೋಬರ್ 3ರಂದು) ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿದ್ದೆ. ಮುಂಜಾವ 2:45ಕ್ಕೆ ಬಿಜೈಯಲ್ಲಿರುವ ನನ್ನ ಮನೆಯಿಂದ ಹೊರಟು ಬೆಳಗ್ಗೆ 9:30ರ ವೇಳೆಗೆ ದೇವಸ್ಥಾನ ತಲುಪಿದ್ದೆ’’ ಎಂದು ಕವಿತಾ ಸನಿಲ್ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.

‘‘ನವರಾತ್ರಿ ಸಂದರ್ಭ ನಾನು ಸುಮಾರು 10 ಕೆ.ಜಿ.ಯಷ್ಟು ತೂಕ ಕಳೆದುಕೊಳ್ಳುತ್ತೇನೆ. ಮತ್ತೆ ಕೆಲ ದಿನಗಳಲ್ಲೇ ಆ ತೂಕವನ್ನು ಪಡೆಯುತ್ತೇನೆ. ಉಪವಾಸದ ವೇಳೆ ಕೆಲವೊಮ್ಮೆ ಅಸಿಡಿಟಿಯ ಲಕ್ಷಣಗಳು ಗೋಚರಿಸುವುದನ್ನು ಬಿಟ್ಟರೆ, ಈವರೆಗೆ ನನ್ನ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಮನೆಯಲ್ಲೂ ಅಕ್ವಾಗಾರ್ಡ್‌ನ ಶುದ್ಧೀಕರಿಸಿದ ನೀರನ್ನು ಮಾತ್ರವೇ ಸೇವಿಸುತ್ತೇನೆ. ಹೊರಗಡೆ ಹೋದಾಗ ಶುದ್ಧೀಕರಿಸಿದ ನೀರನ್ನೇ ಸೇವಿಸುತ್ತೇನೆ. ದಿನದಲ್ಲಿ ಆಗಾಗ್ಗೆ ಕಾಫಿ ಕುಡಿಯುವ ಅಭ್ಯಾಸ ನನಗಿದ್ದು, ನವರಾತ್ರಿ ಸಂದರ್ಭ ಅದನ್ನೂ ಕುಡಿಯುವುದಿಲ್ಲ’’ ಎಂದು ಅವರು ಹೇಳುತ್ತಾರೆ. ಮನಪಾದ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆಯಾಗಿರುವ ಕವಿತಾ ಸನಿಲ್, ಕಳೆದ ಸುಮಾರು ಮೂರು ವರ್ಷಗಳ ಅವಧಿಯಲ್ಲಿ ಮನಪಾ ಸದಸ್ಯೆಯಾಗಿ ತಮಗೆ ಲಭಿಸಿದ್ದ ಗೌರವಧನವನ್ನು ತಾವು ಬಳಸದೆ, ಆ ಒಟ್ಟು ಹಣಕ್ಕೆ ತಮ್ಮ ಸ್ವಂತ ಒಂದಿಷ್ಟು ಹಣವನ್ನು ಸೇರಿಸಿ ತಮ್ಮ ವಾರ್ಡ್‌ನ ಕುಟುಂಬಗಳಿಗೆ ಅಕ್ಕಿ ವಿತರಿಸುವ ಮೂಲಕ ಗಮನ ಸೆಳೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X