Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘‘ಸ್ಮಾರ್ಟ್ ಸಿಟಿಗೆ ಮಂಗಳೂರು...

‘‘ಸ್ಮಾರ್ಟ್ ಸಿಟಿಗೆ ಮಂಗಳೂರು ಆಯ್ಕೆಯಾಗಿರುವುದು ಯಾರ ಭಿಕ್ಷೆಯಿಂದಲ್ಲ’’

ವಾರ್ತಾಭಾರತಿವಾರ್ತಾಭಾರತಿ4 Oct 2016 1:48 PM IST
share
‘‘ಸ್ಮಾರ್ಟ್ ಸಿಟಿಗೆ ಮಂಗಳೂರು ಆಯ್ಕೆಯಾಗಿರುವುದು ಯಾರ ಭಿಕ್ಷೆಯಿಂದಲ್ಲ’’

ಮಂಗಳೂರು, ಅ.4: ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನದಿಂದ ರೂಪುಗೊಳ್ಳಲಿರುವ ಸ್ಮಾರ್ಟ್ ಸಿಟಿಗೆ ಮಂಗಳೂರು ಮಹಾನಗರ ಪಾಲಿಕೆ ಆಯ್ಕೆಯಾಗಿರುವುದು ನಗರದ ಅರ್ಹತೆಯಿಂದಾಗಿಯೇ ವಿನಹ ಯಾರೂ ಭಿಕ್ಷೆ ಕೊಟ್ಟಿದ್ದಲ್ಲ ಎಂದು ಮೇಯರ್ ಹರಿನಾಥ್ ತಮ್ಮ ಎದುರಾಳಿಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಇತ್ತೀಚೆಗೆ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮೋನಪ್ಪ ಭಂಡಾರಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆ ಯಾವತ್ತೋ ಎಚ್ಚೆತ್ತುಕೊಂಡಿದೆ ಎಂದು ಪ್ರತಿ ವಾಗ್ದಾಳಿ ನಡೆಸಿದರು. ಮನಪಾವು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಗೆ ಸಂಬಂಧಿಸಿ ಕೇಂದ್ರದ ತಜ್ಞರ ತಂಡ ತನಿಖೆ, ಪರಿಶೀಲನೆ ನಡೆಸಿದೆ. ನಗರದ ಅರ್ಹತೆ ಆಧಾರದಲ್ಲಿಯೇ ಆಯ್ಕೆಗೊಂಡಿದೆ. ಮಾತ್ರವಲ್ಲದೆ, ಸ್ಮಾಟ್ ಸಿಟಿ ಯೋಜನೆ ನಮ್ಮದು ಎಂದು ಬಿಜೆಪಿಯ ಕೆಲ ನಾಯಕರು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ಕೇಂದ್ರ ಹಾಗೂ ರಾಜ್ಯ ಸರಕಾರದ ಸಮಪಾಲಿನ ಅನುದಾನದಲ್ಲಿ ಅನುಷ್ಠಾನಗೊಳ್ಳಲಿರುವ ಯೋಜನೆ. ಮಾತ್ರವಲ್ಲದೆ ಸ್ಥಳೀಯಾಡಳಿತ ಕೂಡಾ ಇದಕ್ಕೆ 79 ಕೋಟಿ ರೂ. ಖರ್ಚು ಮಾಡಬೇಕಿದೆ ಎಂದವರು ಹೇಳಿದರು. ಹಿರಿಯ ಮುತ್ಸದ್ದಿ ರಾಜಕಾರಣಿ ರಾಮಕೃಷ್ಣರವರು ಮುಖ್ಯಮಂತ್ರಿಯಾಗಿದ್ದಾಗಲೇ ಮಂಗಳೂರು ಮಹಾನಗರ ಪಾಲಿಕೆಗೆ ಅತ್ಯುತ್ತಮ ನಗರ ಎಂದು ಮೂರು ಬಾರಿ ಪ್ರಶಸ್ತಿಯ ಜತೆಗೆ ನಗದು ಬಹುಮಾನವೂ ಲಭ್ಯವಾಗಿತ್ತು. ಹಾಗಿರುವುದರಿಂದ ಮನಪಾ ಆಡಳಿತ ಎಚ್ಚೆತ್ತುಕೊಂಡಿರುವುದರಿಂದಲೇ ಇದು ಸಾಧ್ಯವಾಗಿದೆ ಎಂದವರು ಹೇಳಿದರು. ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರೋತ್ಥಾನ ಮುಖ್ಯಮಂತ್ರಿಯ 100 ಕೋಟಿ ರೂ. ಅನುದಾನದ 1ನೆ ಹಂತದಲ್ಲಿ 4 ಕಾಮಾಗರಿಗಳ ಟೆಂಡರ್ ಕರೆಯಲಾಗಿದ್ದು, ಉಳಿದ ಎಲ್ಲಾ ಕಾಮಗಾರಿ ಪೂರ್ಣಗೊಂಡಿದೆ. 2ನೆ ಹಂತದ ಅನುದಾನದಲ್ಲಿ ಒಟ್ಟು 124 ಕಾಮಗಾರಿಗಳಿಗೆ ಅನುಮೋದನೆ ದೊರೆತು, 89 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ. 3ನೆ ಹಂತದ ಅನುದಾನದಡಿ 169 ಕಾಮಗಾರಿಗಳಿಗೆ ಅನುಮೋದನೆ ದೊರೆತು 66 ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. ಪಂಪ್‌ವೆಲ್ ಬಸ್ಸು ನಿಲ್ದಾಣಕ್ಕೆ ಪೂರಕವಾಗಿ ಬಸ್ಸು ಸಂಚಾರಕ್ಕೆ ಯೋಗ್ಯವಾಗುವಂತೆ ಸಮೀಪದ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ 230 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದ್ದು, 1.30 ಕೋಟಿ ರೂ.ಗಳ ಕಾಮಗಾರಿಯ ಟೆಂಡರ್ ಇಂದು ತೆರೆಯಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಪ್ಪಿಲತಾ, ಲ್ಯಾನ್ಸಿ ಲೋಟ್ ಪಿಂಟೊ, ಕವಿತಾ ಸನಿಲ್, ಸದಸ್ಯ ಮುಹಮ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X