Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮನುವಾದಿ, ಜಾತಿವಾದಿ ಮನಸ್ಥಿತಿ ಇಂದು...

ಮನುವಾದಿ, ಜಾತಿವಾದಿ ಮನಸ್ಥಿತಿ ಇಂದು ಹೆಚ್ಚಾಗಿದೆ: ಎನ್ ಮಹೇಶ್

ವಾರ್ತಾಭಾರತಿವಾರ್ತಾಭಾರತಿ4 Oct 2016 8:21 PM IST
share
ಮನುವಾದಿ, ಜಾತಿವಾದಿ ಮನಸ್ಥಿತಿ ಇಂದು ಹೆಚ್ಚಾಗಿದೆ: ಎನ್ ಮಹೇಶ್

ನಮ್ಮ ದೇಶದಲ್ಲಿ 2009 ರಲ್ಲಿ 33,543 ದಲಿತರ ಮೇಲೆ ದೌರ್ಜನ್ಯ ನಡೆದರೆ 2016ರಲ್ಲಿ 47,064 ಕ್ಕೆ ಏರಿಕೆಯಾಗಿವೆ. ಬಾಬಾ ಸಾಹೇಬರ ಪ್ರಕಾರ ಜೀವ ವಿರೋಧಿ, ಜನವಿರೋಧಿ ಮನಸ್ಥಿತಿಯೇ ಮನುವಾದಿ ಮನಸ್ಥಿತಿಯಾಗಿದ್ದು, ಕಾಂಗ್ರೆಸ್ ಸರ್ಕಾರ ಇದ್ದಾಗಲೂ ದೌರ್ಜನ್ಯ ನಡೆದಿದೆ. ಬಿಜೆಪಿ ಇದ್ದಾಗಲೂ  ನಡೆದಿದೆ. ಕಮ್ಯೂನಿಸ್ಟ್ ಸರ್ಕಾರ ಇದ್ದಾಗಲೂ ನಡೆದಿದೆ ಎಂದು ಬಹುಜನ ಸಮಾಜ ಪಕ್ಷದ ನಾಯಕರಾದ ಎನ್. ಮಹೇಶ್ ಅಭಿಪ್ರಾಯಪಟ್ಟರು.

ಉಡುಪಿ ಚಲೋ ಅಂಗವಾಗಿ ಇಂದು ನೆಲಮಂಗಲಕ್ಕೆ ಆಗಮಿಸಿದ ಸ್ವಾಭಿಮಾನಿ ಸಂಘರ್ಷ ಜಾಥ ಉದ್ದೇಶಿಸಿ ಮಾತನಾಡಿದ ಇವರು, ದೌರ್ಜನ್ಯಕ್ಕೆ ಕಾರಣವನ್ನು ತಿಳಿಯಬೇಕು, ಬಿಜೆಪಿ ಬಂದಾಗ ಜಾಸ್ತಿ ಆಗುವುದು ನಿಜ ಆದರೆ ಒಂದು ವರ್ಗ ಇನ್ನೊಂದು ವರ್ಗದ ಮೇಲೆ ದಬ್ಬಾಳಿಕೆ ಮಾಡಲು ಕಾರಣ ರಾಜಕೀಯ ಅಧಿಕಾರವಾಗಿದೆ. ಅವರಿಗೆ ರಕ್ಷಣೆಯ ಅಭಯವಿರುವುದರಿಂದ ದೌರ್ಜನ್ಯ ಎಸಗುತ್ತಾರೆ. ಇದನ್ನು ಕೊನೆಗಾಣಿಸಲು ದೌರ್ಜನ್ಯಕ್ಕೊಳಗಾದವರಯ ರಾಜಕೀಯ ಅಧಿಕಾರ ಪಡೆಯಬೇಕಾಗಿದೆ ಎಂದರು.

ಧರ್ಮಾಧಾರಿತ ಮತ್ತು ಜಾತ್ಯಾತೀತ ಪಕ್ಷಗಳು ಸಹ ದೌರ್ಜನ್ಯ ಮಾಡುತ್ತಿವೆ. ಜಾತಿಯ ಹಿಂದುತ್ವದ ಮನಸ್ಥಿತಿ ಕೆಲಸ ಮಾಡುತ್ತಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿಯಲ್ಲಿ ಬಸವಣ್ಣನವರ ದೇವಸ್ಥಾನಕ್ಕೆ ದಲಿತರನ್ನು ಒಳಗೆ ಬಿಡದ ಮನಸ್ಥಿತಿ ಜಾತ್ಯಾತೀತವೋ ಇಲ್ಲ ಕೋಮುವಾದಿಯೋ ನೀವೇ ಯೋಚಿಸಿ ಎಂದರು.

ಮಾದರ ಚೆನ್ನಯ್ಯನ ದಾಸಿಯ ಮಗನು ಡೋಹಾರ ಕಕ್ಕಯ್ಯನ ದಾಸಿಯ ಮಗಳು ಇಬ್ಬರು ಬೆರಣಿಗೆ ಹೋಗಿ ಸಂಗವ ಮಾಡಿದರು. ಇವರಿಬ್ಬರಿಗೆ ಹುಟ್ಟಿದ ಮಗ ನಾನು ಎಂದ ಬಸವಣ್ಣನವರನ್ನು ಯಾವ ಜಾತಿಗೆ ಸೇರಿಸುತ್ತೀರಿ ಎಂದು ಪ್ರಶ್ನಿಸಿದರು.

ನಂತರ ಮಾತನಾಡಿದ ನೆಲಮಂಗಲದ ತಹಶೀಲ್ದಾರ್ ರವರು ಇಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಹೋರಾಟ ನಡೆಯುತ್ತಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯ. ಉಡುಪಿ ಚಲೋ ಯಶಸ್ವಿಯಾಗಲಿ ಎಂದರು.

ಅಗ್ನಿ ಪತ್ರಿಕೆ ಸಂಪಾದಕ ಮಂಜುನಾಥ ಅದ್ದೆ, ಅಖಿಲ ವಿದ್ಯಾಸಂದ್ರ, ಜನಶಕ್ತಿಯ ಗೌರಿ, ಮಲ್ಲಿಗೆ, ಬಿ.ಆರ್. ಭಾಸ್ಕರ್ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X