Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಜಯಾಬ್ಯಾಂಕ್‌ನಿಂದ 57 ಬಾಲಕಿಯರ ದತ್ತು...

ವಿಜಯಾಬ್ಯಾಂಕ್‌ನಿಂದ 57 ಬಾಲಕಿಯರ ದತ್ತು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ4 Oct 2016 9:45 PM IST
share
ವಿಜಯಾಬ್ಯಾಂಕ್‌ನಿಂದ 57 ಬಾಲಕಿಯರ ದತ್ತು ಸ್ವೀಕಾರ

ಮಣಿಪಾಲ,ಅ.4: ಬ್ಯಾಂಕುಗಳು ಠೇವಣಿ, ಸಾಲ, ಶಾಖೆಗಳ ಹೆಚ್ಚಳಕ್ಕೆ ಪ್ರತಿ ವರ್ಷ ಗುರಿ ನಿಗದಿ ಪಡಿಸುವಂತೆ, ವಿಜಯಾ ಬ್ಯಾಂಕ್ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ನಿಧಿ ಹಂಚಿಕೆಗೂ ಗುರಿ ನಿಗದಿ ಪಡಿಸಿದ ಪ್ರಥಮ ಬ್ಯಾಂಕ್ ಆಗಿದೆ ಎಂದು ವಿಜಯಾ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಸಿಇಓ ಡಾ.ಕಿಶೋರ್ ಸಾಂಸಿ ಹೇಳಿದ್ದಾರೆ.

ಬ್ಯಾಂಕಿನ ಸಿಎಸ್‌ಆರ್ ನಿಧಿಯಡಿ ವಿಜಯಾಬ್ಯಾಂಕ್ ಉಡುಪಿ ವಲಯ ವ್ಯಾಪ್ತಿಯ ಮೂರು ಜಿಲ್ಲೆಗಳ ಆರ್ಥಿಕವಾಗಿ ಹಿಂದುಳಿದ ಒಟ್ಟು 57 ಬಾಲಕಿಯರನ್ನು ದತ್ತು ಸ್ವೀಕರಿಸಿದ್ದು, ಅವರಿಗೆ ಇಂದು ಮಣಿಪಾಲದ ಕಂಟ್ರಿ ಇನ್ ಹೊಟೇಲ್‌ನಲ್ಲಿ ನಡೆದ ಸಮಾರಂಭದಲ್ಲಿ ದತ್ತು ಪತ್ರಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.

ದೇಶ ಸರ್ವತೋಮುಖ ಅಭಿವೃದ್ಧಿಯಾಗಲು ದೇಶದೊಳಗಿನ ಸಮಾಜವೂ ತಳಮಟ್ಟದಿಂದ ಏಳಿಗೆಯನ್ನು ಕಾಣಬೇಕಾಗಿದೆ. ಇದರಲ್ಲಿ ದೇಶದ ಉದ್ದಿಮೆಗಳ ಪಾತ್ರ ಹಾಗೂ ಜವಾಬ್ದಾರಿಯೂ ಇವೆ. ಸಾರ್ವಜನಿಕ ವಲಯದ ಬ್ಯಾಂಕ್ ಆಗಿ ವಿಜಯಾ ಬ್ಯಾಂಕ್ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ದೇಶಾದ್ಯಂತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಸಿಎಸ್‌ಆರ್ ನಿಧಿಯಡಿ ಕಾರ್ಯರೂಪಕ್ಕಿಳಿಸಲು ಮುಂದಾಗಿದೆ ಎಂದರು.

ಬ್ಯಾಂಕಿನ ಉಡುಪಿ ವಲಯ ವ್ಯಾಪ್ತಿಯಲ್ಲಿ 57 ಬಡಕುಟುಂಬದ ಬಾಲಕಿಯರನ್ನು ದತ್ತು ಸ್ವೀಕರಿಸಿದ್ದು, ಅವರಿಗೆ ಸ್ನಾತಕೋತ್ತರ ಪದವಿಯವರೆಗೆ ಕಲಿಯಲು ನೆರವನ್ನು ಬ್ಯಾಂಕ್ ನೀಡಲಿದೆ. ಶಿಕ್ಷಣದ ಮೂಲಕ ಹೆಣ್ಣು ಮಕ್ಕಳ ಸಬಲೀಕರಣ ಬ್ಯಾಂಕಿನ ಉದ್ದೇಶವಾಗಿದೆ. 20 ವರ್ಷಗಳಲ್ಲಿ ಈ ಪುಟಾಣಿ ಮಕ್ಕಳಲ್ಲಿ ಕೆಲವರಾದರೂ ವಿಜಯಾ ಬ್ಯಾಂಕಿಗೆ ಆಫೀಸರ್ ಆಗಿ ಸೇರ್ಪಡೆ ಗೊಳ್ಳುವಂತಾಗಲಿ ಎಂದವರು ಹಾರೈಸಿದರು.

ಅಲ್ಲದೇ ಇದೇ ನಿಧಿಯಡಿ ಶಿರೂರಿನಲ್ಲಿರುವ ಪದ್ಮಾವತಿ ಕಣ್ಣಿನ ಆಸ್ಪತ್ರೆಗೆ 10.50 ಲಕ್ಷ ರೂ.ವೆಚ್ಚದ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಅತ್ಯಾಧುನಿಕ ಯಂತ್ರವೊಂದನ್ನು ನೀಡಲಾಗಿದ್ದು, ಬೆಳಪು ಮತ್ತು ಎಲ್ಲೂರಿನ ಸರಕಾರಿ ಪ್ರೌಢ ಶಾಲೆಗಳಿಗೆ ಶೌಚಾಲಯಗಳನ್ನು ಸಹ ನಿರ್ಮಿಸಿಕೊಡಲಾಗಿದೆ ಎಂದು ಡಾ.ಸಾಂಸಿ ನುಡಿದರು.

ವಿಜಯಾ ಬ್ಯಾಂಕಿನ ಸಿಎಸ್‌ಆರ್ ಯೋಜನೆಯ ವಿವರಗಳನ್ನು ನೀಡಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಎ.ಸಿ.ಸ್ವಾನಿ, ಬ್ಯಾಂಕ್ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವುದು ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಸಮರ್ಪಕ ವಾಗಿ ನಿರ್ವಹಿಸಲು ದೇಶಾದ್ಯಂತ ಈ ನಿಧಿಯಡಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಈ ವರ್ಷ ಒಟ್ಟು 1132 ಬಾಲಕಿಯರನ್ನು ದತ್ತು ಸ್ವೀಕರಿಸುವ ಗುರಿಯಿದ್ದು, ಅದರಲ್ಲಿ ಈವರೆಗೆ 822 ಮಂದಿಯನ್ನು ದತ್ತು ಸ್ವೀಕರಿಸಲಾಗಿದೆ. ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಗೆ ಮುನ್ನ ಈ ಗುರಿ ಮುಟ್ಟಲು ಯೋಜಿಸಲಾಗಿದೆ. ಎಲ್‌ಕೆಜಿಯಿಂದ ಬಡ ಕುಟುಂಬದ ಮಕ್ಕಳನ್ನು ಇದರಲ್ಲಿ ಬ್ಯಾಂಕ್ ದತ್ತು ಸ್ವೀಕರಿಸಿ ಅವರಿಗೆ ಶಿಕ್ಷಣ ನೀಡುವ ಜವಾಬ್ದಾರಿ ಹೊತ್ತಿದೆ ಎಂದರು.

ಆರೋಗ್ಯ ಕ್ಷೇತ್ರದಡಿ ದೇಶಾದ್ಯಂತ ಗ್ರಾಮೀಣ ಭಾಗದಲ್ಲಿ 32 ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ನುರಿತ ವೈದ್ಯರನ್ನು ನೇಮಿಸಿ ಗ್ರಾಮೀಣ ಭಾಗದ ಜನತೆಗೆ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ. ಇದಕ್ಕೆ 1.25 ಕೋಟಿ ರೂ. ಖರ್ಚು ಮಾಡುತಿದ್ದೇವೆ. ಮಧ್ಯಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಎಂಟು ಕಡೆಗಳಲ್ಲಿ ತಲಾ 1.25 ಲಕ್ಷ ರೂ.ವೆಚ್ಚದಲ್ಲಿ ಬೋರ್‌ವೆಲ್ ಗಳನ್ನು ಕೊರೆದು ಕುಡಿಯುವ ನೀರನ್ನು ಗ್ರಾಮಸ್ಥರಿಗೆ ನೀಡುತಿದ್ದೇವೆ ಎಂದು ಸ್ವಾನಿ ವಿವರಿಸಿದರು. ಬಳ್ಳಾರಿಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸರಬರಾಜು ಮಾಡುತ್ತಿರುವ ಇಸ್ಕಾನ್‌ಗೆ ಚಪಾತಿ ಲಟ್ಟಿಸುವ ಯಂತ್ರವನ್ನು ನೀಡಿದ್ದೇವೆ. ಶಿರೂರಿನ ಶಾಲೆಗೆ ಶಾಲಾ ಬಸ್‌ನ್ನು ನೀಡಿದ್ದೇವೆ ಎಂದರು.

ಬ್ಯಾಂಕಿನ ಉಡುಪಿ ವಲಯದ ಡಿಜಿಎಂ ಎಂ.ಜೆ.ನಾಗರಾಜ್ ಅತಿಥಿಗಳನ್ನು ಸ್ವಾಗತಿಸಿ, ಯೋಜನೆಯ ಕುರಿತು ವಿವರಿಸಿದರು. ಚೀಫ್ ಮ್ಯಾನೇಜರ್ ನರೇಂದ್ರ ವಂದಿಸಿದರೆ, ರಶ್ಮಿ ಕಾರ್ಯಕ್ರಮ ನಿರ್ವಹಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X