Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಸಿಸಿಐ ಬ್ಯಾಂಕ್ ಖಾತೆಯ ದೈನಂದಿನ...

ಬಿಸಿಸಿಐ ಬ್ಯಾಂಕ್ ಖಾತೆಯ ದೈನಂದಿನ ಖರ್ಚು-ವೆಚ್ಚಕ್ಕೆ ನಿರ್ಬಂಧವಿಲ್ಲ

ಲೋಧಾ ಸಮಿತಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ4 Oct 2016 11:46 PM IST
share
ಬಿಸಿಸಿಐ ಬ್ಯಾಂಕ್ ಖಾತೆಯ ದೈನಂದಿನ ಖರ್ಚು-ವೆಚ್ಚಕ್ಕೆ ನಿರ್ಬಂಧವಿಲ್ಲ

 ಹೊಸದಿಲ್ಲಿ, ಸೆ.4: ಬಿಸಿಸಿಐ ಬ್ಯಾಂಕ್ ಖಾತೆಗೆ ನಿರ್ಬಂಧ ಹೇರುವಂತೆ ನಿರ್ದೇಶನ ನೀಡಿಲ್ಲ. ಬಿಸಿಸಿಐ ಖಾತೆಯಿಂದ ಎರಡು ನಿರ್ದಿಷ್ಟ ರಾಜ್ಯ ಅಸೋಸಿಯೇಶನ್‌ಗೆ ಹಣ ಬಿಡುಗಡೆ ಮಾಡದಂತೆ ಸೂಚಿಸಲಾಗಿತ್ತು. ಕ್ರಿಕೆಟ್ ಪಂದ್ಯಗಳ ಆಯೋಜನೆ ಸೇರಿದಂತೆ ಇತರ ದೈನಂದಿನ ಖರ್ಚುವೆಚ್ಚಕ್ಕೆ ಹಣ ಬಳಸಿಕೊಳ್ಳಲು ತನ್ನ ಅಭ್ಯಂತರವಿಲ್ಲ ಎಂದು ಜಸ್ಟೀಸ್ ಆರ್‌ಎಂ ಲೋಧಾ ಸಮಿತಿ ಮಂಗಳವಾರ ಸ್ಪಷ್ಟಪಡಿಸಿದೆ.

ತನ್ನ ಶಿಫಾರಸುಗಳನ್ನು ಸರಿಯಾದ ಜಾರಿಗೆ ತರದ ಬಿಸಿಸಿಐ ಮೇಲೆ ಆಕ್ರೋಶಗೊಂಡಿದ್ದ ಸುಪ್ರೀಂಕೋರ್ಟ್‌ನಿಂದ ನೇಮಿಲಸ್ಪಟ್ಟ ಲೋಧಾ ಸಮಿತಿ, ಸೋಮವಾರ ನೀಡಿದ ತನ್ನ ಆದೇಶದಲ್ಲಿ ಬಿಸಿಸಿಐ ವಿಶೇಷ ಮಹಾಸಭೆಯಲ್ಲಿ ಅನುಮೋದಿಸಿದ ಆರ್ಥಿಕ ನಿರ್ಧಾರಗಳಿಗೆ ಹಣ ಬಿಡುಗಡೆ ಮಾಡುವಂತಿಲ್ಲ ಎಂದು ಬಿಸಿಸಿಐ ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಸೂಚನೆ ನೀಡಿತ್ತು.

ಲೋಧಾ ಸಮಿತಿಯ ನಿರ್ದೇಶನದಂತೆ ಬ್ಯಾಂಕ್ ಖಾತೆ ನಿರ್ಬಂಧಕ್ಕೊಳಪಟ್ಟರೆ ನ್ಯೂಝಿಲೆಂಡ್ ವಿರುದ್ಧ ಸರಣಿಯನ್ನು ರದ್ದುಪಡಿಸಬೇಕಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಗಳು ನೀಡಿರುವ ಹೇಳಿಕೆಗೆ ಮಂಗಳವಾರ ಪ್ರತಿಕ್ರಿಯಿಸಿರುವ ಲೋಧಾ ಸಮಿತಿ,‘‘ನಾವು ಬಿಸಿಸಿಐ ಬ್ಯಾಂಕ್ ಖಾತೆಯನ್ನು ನಿರ್ಬಂಧಿಸಿಲ್ಲ್ಲ. ರಾಜ್ಯ ಸಂಸ್ಥೆಗಳಿಗೆ ಹಣ ವಿತರಿಸದಂತೆ ಬಿಸಿಸಿಐಗೆ ಸೂಚಿಸಿದ್ದೇವೆ. ದೈನಂದಿನ ವ್ಯವಹಾರಗಳು, ಪ್ರತಿದಿನದ ಖರ್ಚುವೆಚ್ಚ, ಪಂದ್ಯಗಳು ಎಂದಿನಂತೆ ಮುಂದುವರಿಯಲಿವೆೆ. ಇದಕ್ಕೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ ಎಂದು ಹೇಳಿದೆ.

ಕೇವಲ ಎರಡು ನಿರ್ದಿಷ್ಟ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಹಣ ಬಿಡುಗಡೆ ಮಾಡದಂತೆ ನಿರ್ಬಂಧಿಸಲಾಗಿದೆ. ಇತರ ಕ್ರಿಕೆಟ್ ಸಂಸ್ಥೆಗಳಿಗೆ ಕ್ರಿಕೆಟ್ ಪಂದ್ಯ ಆಯೋಜನೆಗೆ ಇದರಿಂದ ತೊಂದರೆಯಾಗದು ಎಂದು ಲೋಧಾ ಸಮಿತಿಯ ಕಾರ್ಯದರ್ಶಿ ಗೋಪಾಲ್ ಶಂಕರ್‌ನಾರಾಯಣನ್ ಹೇಳಿದ್ದಾರೆ.

‘‘ಸದಸ್ಯರೆಲ್ಲರೂ ನ್ಯಾಯಾಲಯದ ತೀರ್ಪಿನಿಂದ ನೊಂದಿದ್ದಾರೆ. ಪಂದ್ಯಗಳನ್ನು ಆಯೋಜಿಸಲು ರಾಜ್ಯ ಕ್ರಿಕೆಟ್ ಸಂಸ್ಥೆಗಳು ಮಾತೃ ಸಂಸ್ಥೆ ಬಿಸಿಸಿಐಯನ್ನು ಹೆಚ್ಚು ಅವಲಂಭಿಸಿದೆ. ಈ ತನಕ ಏಳು ಸಂಸ್ಥೆಗಳು ಪಂದ್ಯ ಆಯೋಜಿಸಲು ನಮ್ಮಿಂದ ಸಾಧ್ಯವಿಲ್ಲ.ಲೋಧಾ ಸಮಿತಿಯ ಹೊಸ ಆದೇಶದಿಂದ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಸಮಸ್ಯೆ ಎದುರಿಸುವಂತಾಗಿದೆ. ಈಗ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯನ್ನು ರದ್ದುಪಡಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ’’ ಎಂದು ಬಿಸಿಸಿಐನ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಲೋಧಾ ಸಮಿತಿಯು ಬಿಸಿಸಿಐನ ಕಾರ್ಯಚಟುವಟಿಕೆಯಲ್ಲಿ ಪದೇ ಪದೇ ಮಧ್ಯಪ್ರವೇಶಿಸುತ್ತಿದೆ. ಬಿಸಿಸಿಐ ಆಡಳಿತದಲ್ಲಿ ಭಾರತ ಕ್ರಿಕೆಟ್‌ನ ಸೂಪರ್ ಪವರ್ ಆಗಿದೆ. ಸರಕಾರ ಸಹಿತ ಯಾರಿಂದಲೂ ಒಂದು ಪೈಸೆ ಪಡೆಯದೇ ಏಕೈಕ ಕ್ರೀಡಾ ಸಂಸ್ಥೆ ನಮ್ಮದು. ನಮ್ಮದೇ ಖರ್ಚಿನಲ್ಲಿ ಎಲ್ಲ ಮೂಲಭೂತ ಸೌಲಭ್ಯವನ್ನು ಮಾಡಿಕೊಂಡಿದ್ದೇವೆ ಎಂದು ಬಿಸಿಸಿಐನ ಹಿರಿಯ ಆಡಳಿತಾಧಿಕಾರಿ ಹೇಳಿದ್ದಾರೆ.

ಬಿಸಿಸಿಐ ಅಧಿಕಾರಿಗಳನ್ನು ಕಟ್ಟಿಹಾಕಬೇಕಿತ್ತು: ಕಾಟ್ಜು

 ಲೋಧಾ ಸಮಿತಿಯು ಬಿಸಿಸಿಐ ಅಧಿಕಾರಿಗಳನ್ನು ಇಷ್ಟಕ್ಕೆ ಬಿಡಬಾರದಿತ್ತು. ಬಿಸಿಸಿಐ ಅಧಿಕಾರಿಗಳ ಕೈಗಳನ್ನು ಕಟ್ಟಿಹಾಕಿ, ಬೆನ್ನಿಗೆ 100 ಚಾಟಿ ಏಟು ನೀಡಬೇಕಾಗಿತ್ತು ಎಂದು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮಾರ್ಕೆಂಡೇಯ ಕಾಟ್ಜು ಟ್ವೀಟ್ ಮಾಡಿದ್ದಾರೆ.

 ಆರು ವಾರಗಳ ಹಿಂದೆ ಬಿಸಿಸಿಐ ಸುಧಾರಣೆಯ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು, ಅಸಂವಿಧಾನಿಕ ಹಾಗೂ ಕ್ರಮಬದ್ಧವಾಗಿಲ್ಲ ಎಂದು ಟೀಕಿಸಿದ್ದ ಕಾಟ್ಜು ಇದೀಗ ಬಿಸಿಸಿಐ ವಿರುದ್ಧವೇ ಕಿಡಿಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X