Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.9ರಂದು ಕೊಂಕಣಿ ಪ್ರಚಾರ ಸಂಚಾಲನದ...

ಅ.9ರಂದು ಕೊಂಕಣಿ ಪ್ರಚಾರ ಸಂಚಾಲನದ ದಶಮಾನೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Oct 2016 2:05 PM IST
share

ಮಂಗಳೂರು, ಅ.5: ಶಾಲೆಗಳಲ್ಲಿ ಕೊಂಕಣಿ ಕಲಿಕೆ ಬಗ್ಗೆ ಕೆಲಸ ಮಾಡಲು 2006ರಲ್ಲಿ ಸ್ಥಾಪಿಸಲಾದ ಕೊಂಕಣಿ ಪ್ರಚಾರ ಸಂಚಾಲನ ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಅ. 9ರಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಚಾಲನದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಅಂದು ಸಂಜೆ 5 ಗಂಟೆಗೆ ನಗರದ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫಾ. ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ, ಶಾಸಕ ಜೆ.ಆರ್ ಲೋಬೋ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಗೋವಾದ ಪ್ರಸಿದ್ಧ ಹಾಸ್ಯಗಾರ ಪ್ರಿನ್ಸ್ ಜೇಕಬ್‌ ಬರೆದು ನಟಿಸಿರುವ ‘ಪಾದ್ರಿ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು. ಕಳೆದ 10 ವರ್ಷಗಳಲ್ಲಿ ಕೊಂಕಣಿ ಪ್ರಚಾರ ಸಂಚಾಲನವು ಶಾಲೆಗಳ ಭೇಟಿ, ಕೊಂಕಣಿ ಶಿಕ್ಷಣ ಜಾಗೃತಿ ಅಭಿಯಾನಗಳು, ಕೊಂಕಣಿ ಶಿಕ್ಷಕರಿಗೆ ಪೂರಕ ತರಬೇತಿ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಉಚಿತ ಪಠ್ಯ ಪುಸ್ತಕ ವಿತರಣೆ, ಶಿಕ್ಷಕರ ವಾರ್ಷಿಕ ಸಮಾವೇಶದ ಮೂಲಕ ಶಾಲೆಗಳಲ್ಲಿ ಕೊಂಕಣಿ ಪಠ್ಯಕ್ಕೆ ಒತ್ತು ನೀಡಿದೆ ಎಂದು ಲಾರೆನ್ಸ್ ತಿಳಿಸಿದರು.

ರೋಮಿ ಲಿಪಿಯಲ್ಲೂ ಪಠ್ಯದ ಅಗತ್ಯವಿದೆ!

ಸದ್ಯ ಶಾಲೆಗಳಲ್ಲಿ ಐಚ್ಚಿಕ ಭಾಷೆಯಾಗಿ ಕೊಂಕಣಿಯನ್ನು ದೇವನಗರಿ ಹಾಗೂ ಕನ್ನಡ ಲಿಪಿಯ ಮೂಲಕ ಕಲಿಸಲಾಗುತ್ತಿದೆ. ಕೊಂಕಣಿ ಪಠ್ಯದ ಬಗ್ಗೆ ಆಸಕ್ತಿಯನ್ನು ಉಳಿಸಲು ಹಾಗೂ ಹೆಚ್ಚಿನ ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ರೋಮಿ ಲಿಪಿಯಲ್ಲೂ ಪಠ್ಯವನ್ನು ನಡೆಸುವ ಅಗತ್ಯವಿದೆ ಎಂದು ಕೊಂಕಣಿ ಸಾಹಿತ್ಯ ಅಕಾಡೆಯ ಅಧ್ಯಕ್ಷ ರಾಯ್ ಕ್ಯಾಸ್ತಲಿನೋ ಅಭಿಪ್ರಾಯಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕೊಂಕಣಿ ಭಾಷೆ ಕಲಿಕೆಗೆ ಏಕರೀತಿಯ ಲಿಪಿಯನ್ನು ಅನ್ವಯಿಸುವುದು ಸದ್ಯದ ಪರಿಸ್ಥಿತಿಯಲ್ಲಿ ಸೂಕ್ತವಲ್ಲ. ಈಗ ಕೊಂಕಣಿ ಭಾಷೆ ಕಲಿಯಲು ಮುಂದಾಗಿರುವ ಮಕ್ಕಳ ಆಸಕ್ತಿಯನ್ನು ಉಳಿಸಿ, ಪ್ರೋತ್ಸಾಹಿಸಬೇಕಾದರೆ ರೋಮಿ ಲಿಪಿಯನ್ನೂ ಅಳವಡಿಸುವುದು ಉತ್ತಮ ಎಂದವರು ಹೇಳಿದರು.

ಪ್ರಸ್ತತ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊಂಕಣಿ ಎಂಎ ಸ್ನಾತಕೋತ್ತರ ಪದವಿಗೆ 7 ಮಂದಿ ವಿದ್ಯಾರ್ಥಿಗಳು ಆಸಕ್ತಿ ತೋರಿ ಕಲಿಯುತ್ತಿದ್ದಾರೆ. ವಿವಿಯಿಂದ ಹಗಲು ಹೊತ್ತಿನಲ್ಲಿ ತರಗತಿಗೆ ಅನುಮತಿ ದೊರಕಿದೆಯಾದರೂ ಸದ್ಯ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಸಂಧ್ಯಾ ಕಲಿಕೆಯ ಮೂಲಕ ಕೊಂಕಣಿ ಸ್ನಾತಕೋತ್ತರ ಪದವಿ ಆರಂಭಗೊಂಡಿದೆ. ಮುಂದೆ ಹೆಚ್ಚಿನ ವಿದ್ಯಾರ್ಥಿಗಳು ಆಸಕ್ತಿ ತೋರ್ಪಡಿಸಿದ್ದಲ್ಲಿ ಹಗಲು ಹೊತ್ತಿಗೂ ಈ ಕೊಂಕಣಿ ಎಂಎಯನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಕೊಂಕಣಿ ಪ್ರಚಾರ ಸಂಚಾಲನದ ಸದಸ್ಯ ಎರಿಕ್ ಒಝಾರಿಯೊ, ಕಾರ್ಯದರ್ಶಿ ಜೇಮ್ಸ್ ಡಿಸೋಜಾ, ಕೊಂಕಣಿ ಶಿಕ್ಷಣ ಸಂಯೋಜಕ ಫಾ. ಆಲ್ವಿನ್ ಸೆರಾವೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X