Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಾವಿದರ ಕೈಗೆಟಕುತ್ತಿಲ್ಲ ಮಂಗಳೂರು...

ಕಲಾವಿದರ ಕೈಗೆಟಕುತ್ತಿಲ್ಲ ಮಂಗಳೂರು ಪುರಭವನ!

ರಂಗಮಂದಿರದ ಕೊರತೆಯಿಂದ ಕ್ಷೀಣಿಸುತ್ತಿದೆ ಪ್ರೋತ್ಸಾಹ!

ವಾರ್ತಾಭಾರತಿವಾರ್ತಾಭಾರತಿ5 Oct 2016 2:11 PM IST
share
ಕಲಾವಿದರ ಕೈಗೆಟಕುತ್ತಿಲ್ಲ ಮಂಗಳೂರು ಪುರಭವನ!

ಮಂಗಳೂರು, ಅ.5: ತುಳುನಾಡಿನಲ್ಲಿ ನಾಟಕ, ಯಕ್ಷಗಾನ ಸೇರಿದಂತೆ ಕಲಾವಿದರಿಗೆ ಅನ್ನದ ಬಟ್ಟಲಾಗಿದ್ದ, ಪ್ರೋತ್ಸಾಹದ ತಾಣವಾಗಿದ್ದ ಪುರಭವನ ಇಂದು ಕಲಾವಿದರ ಕೈಗೆಟಕದಂತಹ ಪರಿಸ್ಥಿತಿ ಬಂದೊದಗಿದೆ. ಇದರಿಂದಾಗಿ ನಗರದಲ್ಲಿ ಸೂಕ್ತ ರಂಗ ಮಂದಿರದ ಕೊರತೆಯಿಂದಾಗಿ ಕಲಾವಿದರ ಪಾಡನ್ನು ಕೇಳುವವರಿಲ್ಲದಂತಾಗಿದೆ.

ಈ ಮಾತು ತುಳು ರಂಗಭೂಮಿಯ ತೆಲಿಕೆದ ಬೊಳ್ಳಿ, ಖ್ಯಾತ ಹಾಸ್ಯ ಕಲಾವಿದ, ಚಿತ್ರ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರ ಬೇಸರದ ನುಡಿಗಳು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ತಮ್ಮ ಹೊಸ ತುಳು ಚಿತ್ರದ ಕುರಿತಂತೆ ಮಾತನಾಡುವ ಸಂದರ್ಭ ತುಳು ನಾಟಕಗಳು ಕಡಿಮೆಯಾಗುತ್ತಿರುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ನಾಟಕ ಪ್ರದರ್ಶನಕ್ಕೆ ಪುರಭವನದ ಶುಲ್ಕವು 30 ಸಾವಿರ ರೂ.ನಿಂದ 40,000 ರೂ.ವರೆಗೆ ಏರಿಕೆಯಾಗಿದೆ. ಪುರಭವನವೇನೋ ಸುಂದರವಾಗಿದೆ. ಆದರೆ ಹಿಂದೆ ವಾರದಲ್ಲಿ ನಾಲ್ಕೈದು ನಾಟಕ ಪ್ರದರ್ಶನಗಳನ್ನು ನೀಡುತ್ತಿದ್ದ ಕಲಾವಿದರಿಗೆ ಇಂದು ಅದು ಕೈಗೆಟುಕದಂತಾಗಿದೆ. ನಾಟಕ ಮಾಡುವವರು ಸೌಂಡ್ ವ್ಯವಸ್ಥೆ ಮಾಡುವಂತಿಲ್ಲ. ಆದರೆ ಅಲ್ಲಿ ಅಳವಡಿಸಿರುವ ಸೌಂಡ್ ವ್ಯವಸ್ಥೆಯಿಂದ ಪ್ರೇಕ್ಷಕರಿಗೆ ಕೇಳುವುದೇ ಇಲ್ಲ. ಇನ್ನು ಬೆಳಕಿನ ವ್ಯವಸ್ಥೆ ಅತೀ ಎತ್ತರದಲ್ಲಿದ್ದು, ನಾಟಕ ಮಾಡುವ ಕಲಾವಿದರನ್ನು ಪ್ರೇಕ್ಷಕರು ಟಾರ್ಚ್ ಹಿಡಿದು ನೋಡಬೇಕಾಗಿದೆ. ಒಟ್ಟಿನಲ್ಲಿ ಕಲಾವಿದರು ಮಾತ್ರ ನಗರದಲ್ಲಿ ಸೂಕ್ತ ಪರ್ಯಾಯ ರಂಗ ಮಂದಿರವೊಂದರ ವ್ಯವಸ್ಥೆ ಇಲ್ಲದೆ ಬಯಲು ರಂಗ ಮಂದಿರವನ್ನೇ ನೆಚ್ಚಿಕೊಳ್ಳುವಂತಾಗಿದೆ.

‘‘ನಾವೇನೋ ರಂಗ ಮಂದಿರದಲ್ಲಿ ಸ್ವಲ್ಪ ಉತ್ತಮ ಸ್ಥಿತಿಯಲ್ಲಿದ್ದೇವೆ. ಆದರೆ, ಹೊಸ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅತ್ಯಂತ ಸುಲಭವದಲ್ಲಿ ಲಭ್ಯವಾಗುತ್ತಿದ್ದ ಪುರಭವನ ಇಂದು ಮರೀಚಿಕೆಯಾಗಿದೆ. ಇದು ನಿಜಕ್ಕೂ ತುಳು ರಂಗಭೂಮಿಗೆ ಆಗಿರುವ ದೊಡ್ಡ ಹೊಡೆತ’’ ಎಂದು ದೇವದಾಸ್ ಕಾಪಿಕಾಡ್ ಬೇಸರ ವ್ಯಕ್ತಪಡಿಸಿದರು.

‘‘ನಾವೆಲ್ಲಾ ಕಲಾ ರಂಗಕ್ಕೆ ಪ್ರವೇಶ ಮಾಡುವ ಸಂದರ್ಭ ಈ ಪುರಭವನ ನಮ್ಮ ಪಾಲಿನ ಅನ್ನದ ಬಟ್ಟಲಾಗಿತ್ತು. ಆದರೆ ಪ್ರಸಕ್ತ ಕಲಾವಿದರಿಗೆ ಅದು ಕೈಗೆಟುಕದಂತಾಗಿದೆ. ದಾವಣಗೆರೆಯಂತಹ ಜಿಲ್ಲೆಯಲ್ಲೂ ರಂಗ ಕಲಾವಿದರಿಗೆ ಸೂಕ್ತ ರಂಗ ಮಂದಿರದ ವ್ಯವಸ್ಥೆ ಇದೆ. ಆದರೆ, ತುಳುನಾಡಿನ ರಂಗ ಕಲಾವಿದರಿಗೆ ಮಾತ್ರ ಭಾರೀ ಅನ್ಯಾಯವಾಗುತ್ತಿದೆ ’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X