Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ:...

ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ: ತೀರ್ಮಾನ

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಂಧಾನ ಸಭೆ

ವಾರ್ತಾಭಾರತಿವಾರ್ತಾಭಾರತಿ5 Oct 2016 10:17 PM IST
share
ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ: ತೀರ್ಮಾನ

 ಮೂಡಿಗೆರೆ, ಅ.5: ಕಳೆದ ಮೂರು ದಿನಗಳಿಂದ ತ್ರಿಪುರ ಮತ್ತು ಬೆಟ್ಟಗೆರೆ ಗ್ರಾಪಂಗಳ ನಡುವೆ ಕುಡಿಯುವ ನೀರಿನ ಬಗ್ಗೆ ಉಂಟಾದ ಗದ್ದಲದ ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬುಧವಾರ ತಾಪಂ ಸಭಾಂಗಣದಲ್ಲಿ ಶಾಸಕ ಬಿ.ಬಿ. ನಿಂಗಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಕೋಗಿಲೆ ಗ್ರಾಮದ ಎಡ ಮತ್ತು ಬಲ ಭಾಗಗಳಲ್ಲಿ ಎರಡು ನೈಸರ್ಗಿಕ ನೀರಿನ ಜಲ ಮೂಲಗಳಿದ್ದು, ಎಡ ಭಾಗದ ಜಲ ಮೂಲದ ನೀರನ್ನು ತ್ರಿಪುರ ಗ್ರಾಮದವರು ಬಳಕೆ ಮಾಡಿಕೊಂಡು ಬರುತ್ತಿದೆ. ಬಲ ಭಾಗದ ಜಲ ಮೂಲದ ನೀರನ್ನು ಬೆಟ್ಟಗೆರೆ ಗ್ರಾಮಕ್ಕೆ ಕುಡಿಯಲು ಬಳಕೆ ಮಾಡಿಕೊಳ್ಳಲು 2013-14ರಲ್ಲಿ ಸರಕಾರದಿಂದ ಅನುದಾನ ಮಂಜೂರಾಗಿದೆ. ಅದರಂತೆ ಈ ವರ್ಷ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ಕೋಗಿಲೆ ಗ್ರಾಮದ ಎಡ ಭಾಗದಲ್ಲಿ ಹರಿಯುವ ಜಲ ಮೂಲದಿಂದ ನೀರು ಕಡಿಮೆಯಾಗಿದೆ ಎಂಬ ಕಾರಣಕ್ಕೆ ಬಲ ಭಾಗದ ಜಲ ಮೂಲಕ್ಕೆ ತ್ರಿಪುರ ಗ್ರಾಮದವರು ತಾತ್ಕಾಲಿಕವಾಗಿ ಪೈಪ್ ಅಳವಡಿಸಿಕೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.

   

  ಬೆಟ್ಟಗೆರೆ ಗ್ರಾಮಕ್ಕೆ ನೀರು ಪೂರೈಕೆ ಮಾಡಿದರೆ ತ್ರಿಪುರ ಗ್ರಾಮಕ್ಕೆ ನೀರಿನ ಕೊರತೆಯುಂಟಾಗುತ್ತದೆ ಎಂಬ ಕಾರಣಕ್ಕೆ ಬೆಟ್ಟಗೆರೆ ಗ್ರಾಮಕ್ಕೆ ನಡೆಯುತ್ತಿರುವ ಕಾಮಗಾರಿಗೆ ತ್ರಿಪುರ ಗ್ರಾಮಸ್ಥರು ತಡೆ ಹಾಕಿ ಪೈಪು ಕಿತ್ತು ಹಾಕಿದ್ದರು. ಈ ಕಾರಣದಿಂದಾಗಿ ಬೆಟ್ಟಗೆರೆ ಗ್ರಾಮಸ್ಥರು ತ್ರಿಪುರ ಗ್ರಾಮಕ್ಕೆ ಸಾಗುವ ಮಾರ್ಗದ ರಸ್ತೆಯಲ್ಲಿ ಗುಂಡಿ ತೋಡುವುದರ ಮೂಲಕ ಪ್ರತಿಭಟನೆ ನಡೆಸಿದ್ದು, ಒಂದು ವಾರದೊಳಗೆ ಸಮಸ್ಯೆ ಸರಿಪಡಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಶಾಸಕ ಬಿ.ಬಿ.ನಿಂಗಯ್ಯ ತಾಪಂ ಸಭಾಂಗಣದಲ್ಲಿ ತ್ರಿಪುರ ಮತ್ತು ಬೆಟ್ಟಗೆರೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಹಾಜರಿದ್ದ ತಾಪಂ.ಅಧ್ಯಕ್ಷ ಕೆ.ಸಿ. ರತನ್, ಸದಸ್ಯರಾದ ರಂಜನ್ ಅಜಿತ್ ಕುಮಾರ್, ದೇವರಾಜು ಇವರುಗಳು ಈ ಬಗ್ಗೆ ಕಮಿಟಿ ರಚನೆ ಮಾಡಿ ಎರಡೂ ಜಲ ಮೂಲಗಳ ನೀರಿನ ಲಭ್ಯತೆಗಳನ್ನು ಪರಿಶೀಲಿಸಿ ಎರಡೂ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವ ಬಗ್ಗೆ ಸಲಹೆ ನೀಡಿದರು.

   ಈ ವೇಳೆ ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ಎಲ್ಲರ ತೀರ್ಮಾನದಂತೆ ಕಮಿಟಿ ರಚನೆ ಮಾಡಿ, ಎರಡೂ ಗ್ರಾಪಂಗಳ ಅಧ್ಯಕ್ಷರು, ಸದಸ್ಯರು ಸೇರಿದಂತೆ ಬೆಟ್ಟಗೆರೆ, ತ್ರಿಪುರ ಮತ್ತು ಕೋಗಿಲೆ ಗ್ರಾಮದ 6 ಮಂದಿ ಮುಖ್ಯಸ್ಥರನ್ನು ಕಮಿಟಿಯೊಳಗೆ ಸೇರಿಸಿಕೊಳ್ಳಲಾಗುವುದು. ಕಮಿಟಿ ರಚನೆ ಮಾಡಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದಾಗ ಸಭೆಯಲ್ಲಿದ್ದ ಎರಡೂ ಗ್ರಾಮದ ಜನರು ಶಾಸಕರ ಮಾತಿಗೆ ಒಪ್ಪಿಗೆ ಸೂಚಿಸಿದರು.

  ಈ ವೇಳೆ ಬೆಟ್ಟಗೆರೆ ಗ್ರಾಪಂ ಅಧ್ಯಕ್ಷ ದಿನೇಶ್, ತ್ರಿಪುರ ಗ್ರಾಪಂ ಅಧ್ಯಕ್ಷ ರಘು, ಪಪಂ ಸದಸ್ಯ ಮದೀಶ್, ಜಿಪಂ ಎಇಇ ಚನ್ನಬಸಪ್ಪ, ಆರ್‌ಡಬ್ಲೂಯುಎಸ್ ಎಇಇ ಜಯ ಪ್ರಕಾಶ್ ಸೇರಿದಂತೆ ಬೆಟ್ಟಗೆರೆ, ತ್ರಿಪುರ ಗ್ರಾ.ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X