Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಯ ಪ್ರಜ್ಞೆ ಇಲ್ಲದ ಅಧಿಕಾರಿಗಳ ವಿರುದ್ಧ...

ಸಮಯ ಪ್ರಜ್ಞೆ ಇಲ್ಲದ ಅಧಿಕಾರಿಗಳ ವಿರುದ್ಧ ಲೋಬೊ ಆಕ್ರೋಶ

ಸಭೆ ಬಹಿಷ್ಕರಿಸಿ ಹೊರ ನಡೆದ ಸಮಿತಿ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ5 Oct 2016 10:31 PM IST
share

ಕಾರವಾರ, ಅ.5: ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿ ಸಭೆಗೆ ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆ ಆಕ್ರೋಶಗೊಂಡ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಜೆ. ಆರ್. ಲೋಬೊ ಹಾಗೂ ಸದಸ್ಯರು ಸಭೆ ಬಹಿಷ್ಕರಿಸಿ ಹೊರ ನಡೆದ ಘಟನೆ ನಗರದ ಜಿಲ್ಲಾ ಪಂಚಾಯತ್ ಸಭಾಭನವದಲ್ಲಿ ಬುಧವಾರ ನಡೆದಿದೆ.

ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಅವರು ವಿಧಾನ ಮಂಡಲದ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸದಸ್ಯರಲ್ಲಿ ಕ್ಷಮೆಯಾಚಿಸಿದರೂ ಒಪ್ಪದೇ ಸಭೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿದರು.

ಬೆಳಗ್ಗೆ 10:45ಕ್ಕೆ ಅಧಿಕಾರಿಗಳು ಜಿಪಂ ಸಭಾಂಗಣಕ್ಕೆ ಬರುತ್ತಿದ್ದಂತೆ ವೇದಿಕೆಯಲ್ಲಿ ಕುಳಿತಿದ್ದ ಸಮಿತಿಯ ಅಧ್ಯಕ್ಷ ಜೆ. ಆರ್. ಲೋಬೊ ಆಕ್ರೋಶ ಗೊಂಡು ಅಧಿಕಾರಿಗಳಿಗೆ ಯಾರ್ರೀ ನೀವು.....ಇಲಾಖೆ ಯಾವುದು ನಿಮ್ಮದು.. ಸಮಯ ಪ್ರಜ್ಞೆ ಇದೆಯೇ ನಿಮಗೆ? ಎಲ್ಲಿಂದ ಬರುತ್ತಿದ್ದೀರಿ? ಎನ್ನುವ ಪ್ರಶ್ನೆಗಳ ಸುರಿಮಳೆಯೇ ಸುರಿಸಿದರು. ಇದರಿಂದ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.

ಅಧಿಕಾರಿಗಳು ಅಧ್ಯಕ್ಷರ ಪ್ರಶ್ನೆಗೆ ಉತ್ತರಿಸಲಾಗದೆ ಸುಮ್ಮನಾದರು. ಬಳಿಕ ಅಧ್ಯಕ್ಷ ಲೋಬೊ ಅವರು ಉಳಿದ ಸದಸ್ಯರ ಜೊತೆಗೆ ಚರ್ಚೆ ನಡೆಸಿ ಬಳಿಕ ಹೊರ ನಡೆದರು. ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿ ಈಗಾಗಲೇ ಬೆಳಗಾವಿ, ಬಿಜಾಪುರ, ಬೀದರ್, ಚಿಕ್ಕಮಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಸಭೆ ನಡೆಸಿದೆ. ಎಲ್ಲಿಯೂ ಅಧಿಕಾರಿಗಳಿಂದ ಈ ರೀತಿಯ ನಿರ್ಲಕ್ಷ್ಯ ಧೋರಣೆ ಕಂಡುಬಂದಿಲ್ಲ. ಸಮಿತಿಯ ಘನತೆಗೆ ಕುಂದುಂಟಾಗುವಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಗೊಳಿಸಲಾಗುವುದು ಎಂದು ಸಮಿತಿ ಸದಸ್ಯರು ಹೇಳಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಿತಿ ಅಧ್ಯಕ್ಷ ಜೆ. ಆರ್. ಲೋಬೊ, ರದ್ದಾಗಿರುವ ಸಭೆಗೆ ಬಂದ ಸರ್ವ ಸದಸ್ಯರ ಪ್ರಯಾಣದ ವೆಚ್ಚ ಹಾಗೂ ಇತರ ಭತ್ತೆ ನೀಡಬೇಕೋ ಬೇಡವೋ ಎನ್ನುವುದು ಸರಕಾರಕ್ಕೆ ಬಿಟ್ಟ ವಿಚಾರ. 10 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಸಭೆಯಲ್ಲಿ ಎಲ್ಲೂ ಅಧಿಕಾರಿ ವರ್ಗ ಈ ರೀತಿ ನಡೆದುಕೊಂಡಿಲ್ಲ. ಸಭೆ ನಡೆದ ಬಳಿಕ ಸರಕಾರಕ್ಕೆ ವರದಿ ಸಲ್ಲಿಸುವುದು ನಮ್ಮ ಕರ್ತವ್ಯ. ಜಿಲ್ಲೆಯಲ್ಲಿ ಕೆಲವು ದಿನದ ಬಳಿಕ ಸಭೆ ನಡೆಸಲಾಗುವುದು ಎಂದರು.

 ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸತೀಶ ಸೈಲ್, ಮಂಕಾಳು ವೈದ್ಯ, ಸತೀಶ ಜಾರಕಿಹೊಳಿ, ಅಬ್ದುಲ್ ಜಬ್ಬಾರ್, ಎಂ. ಡಿ. ಲಕ್ಷ್ಮೀ ನಾರಾಯಣ, ಎಸ್. ಅಂಗಾರ, ಗೋಪಾಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X