Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಾಲಿಗ ಕ್ಲಬ್‌ನೊಂದಿಗೆ ಇಶಾನ್ ಪಂಡಿತಾ...

ಲಾಲಿಗ ಕ್ಲಬ್‌ನೊಂದಿಗೆ ಇಶಾನ್ ಪಂಡಿತಾ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ5 Oct 2016 11:56 PM IST
share
ಲಾಲಿಗ ಕ್ಲಬ್‌ನೊಂದಿಗೆ ಇಶಾನ್ ಪಂಡಿತಾ ಒಪ್ಪಂದ

  ಕೋಲ್ಕತಾ, ಅ.5: ಬೆಂಗಳೂರಿನ ಹುಡುಗ ಇಶಾನ್ ಪಂಡಿತಾ ಸ್ಪೇನ್‌ನ ವೃತ್ತಿಪರ ತಂಡ ಲಾಲಿಗ ಕ್ಲಬ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಭಾರತದ ಮೊದಲ ಫುಟ್ಬಾಲ್ ಆಟಗಾರನೆಂಬ ಕೀರ್ತಿಗೆ ಭಾಜನರಾಗಿದ್ದಾರೆ. ಪಂಡಿತ್ ಹೊಸ ತಂಡ ಸಿಡಿ ಲೆಗನೆಸ್ ಕ್ಲಬ್‌ನ ಅಂಡರ್-19 ತಂಡದೊಂದಿಗೆ ಒಂದು ವರ್ಷ ಅವಧಿಗೆ ಸಹಿ ಹಾಕಿದ್ದಾರೆ.

ಮ್ಯಾಡ್ರಿಡ್‌ನ ಲೆಗಾನೆಸ್ ಕ್ಲಬ್ ಈ ಋತುವಿನಲ್ಲಿ ಸ್ಪೇನ್‌ನ ಅಗ್ರ ಡಿವಿಜನ್ ಫುಟ್ಬಾಲ್‌ನ್ನು ಪ್ರಚಾರಪಡಿಸಲಿದೆ. ಈ ತಂಡ ಪ್ರಸ್ತುತ ಲೀಗ್ ಪಟ್ಟಿಯಲ್ಲಿ 11ನೆ ಸ್ಥಾನದಲ್ಲಿದೆ.

 ಮಂಗಳವಾರ ಪಂಡಿತಾಗೆ ನಂ.50ನೆ ಜರ್ಸಿಯನ್ನು ಹಸ್ತಾಂತರಿಸಲಾಗಿದೆ. ‘‘ಇದೊಂದು ಸ್ಮರಣೀಯ ಕ್ಷಣ. ನನಗೆ ಇನ್ನೂ ತುಂಬಾ ದೂರ ಕ್ರಮಿಸಬೇಕಾಗಿದೆ. ಕೆಲವು ಗೋಲುಗಳನ್ನು ಬಾರಿಸುವುದು ನನ್ನ ಮುಂದಿರುವ ಮೊದಲ ಗುರಿ’’ ಎಂದು ಪ್ರಸ್ತುತ ಸ್ಪೇನ್‌ನಲ್ಲಿರುವ ಪಂಡಿತಾ ಪ್ರತಿಕ್ರಿಯೆ ನೀಡಿದ್ದಾರೆ.

   ‘‘ಇಶಾನ್ ಪಂಡಿತಾ ಭಾರತದಲ್ಲಿ ಆಡಿದ್ದನ್ನು ನಾನು ಈ ತನಕ ನೋಡಿಲ್ಲ. ಆದಾಗ್ಯೂ ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಲು ಬಯಸುವೆ. ಲಾಲಿಗ ತಂಡದೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ದೊಡ್ಡ ಸಾಧನೆ. ನ್ಯಾಶನಲ್ ಕೋಚ್ ಸ್ಟೀಫನ್ ಕಾನ್‌ಸ್ಟನ್‌ಟೈನ್ ಐಶಾನ್‌ರತ್ತ ಗಮನ ಹರಿಸಬೇಕೆಂದು ವಿನಂತಿಸುವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿದ ಆಟಗಾರರು ಭಾರತಕ್ಕೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಶಾನ್ ಅಂಡರ್-20 ತಂಡಕ್ಕೆ ಆಯ್ಕೆಯಾಗಲೂಬಹುದು’’ ಎಂದು ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಭೈಚುಂಗ್ ಭುಟಿಯಾ ಹೇಳಿದ್ದಾರೆ.

ಎಐಎಫ್‌ಎಫ್ ಅಂಡರ್-20 ವಿಶ್ವಕಪ್‌ನ ಆತಿಥ್ಯ ವಹಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ಎಐಎಫ್‌ಎಫ್ ಅಧ್ಯಕ್ಷ ಪ್ರಫುಲ್ ಪಟೇಲ್ ಇತ್ತೀಚೆಗೆ ಗೋವಾಕ್ಕೆ ಆಗಮಿಸಿದ್ದ ಫಿಫಾ ಅಧ್ಯಕ್ಷರಾದ ಗಿಯಾನಿ ಇನ್ಫಾಂಟಿನೊರೊಂದಿಗೆ ಮಾತುಕತೆ ನಡೆಸಿದ್ದಾರೆ.

ಸ್ಪೇನ್‌ನ ಲಾಲಿಗ ಎ ದರ್ಜೆಯ ಕ್ಲಬ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವ ಭಾರತದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿರುವ ಇಶಾನ್ ಪಂಡಿತಾಗೆ ಹೃತ್ಪೂರ್ವಕ ವಂದನೆಗಳು. ಈ ಕಿರಿಯ ವಯಸ್ಸಿನಲ್ಲಿ ಆತನ ಸಾಧನೆ ಅತ್ಯದ್ಭುತವಾಗಿದೆ ಎಂದು ಪಟೇಲ್ ಬುಧವಾರ ಟ್ವೀಟ್ ಮಾಡಿದ್ದಾರೆ.

‘‘ಸ್ಪೇನೀಶ್ ಲೀಗ್‌ನಲ್ಲಿ ಆಡುವುದು ಒಂದು ಅದ್ಭುತ ಸಾಧನೆ. ಇದು ನಮಗೆಲ್ಲರಿಗೂ ಹೆಮ್ಮೆಯ ಕ್ಷಣ. ಯುರೋಪ್‌ನಲ್ಲಿ ಆಡಬಲ್ಲ ಇನ್ನಷ್ಟು ಪ್ರತಿಭಾವಂತ ಆಟಗಾರರನ್ನು ಭಾರತೀಯ ಕ್ಲಬ್ ತಯಾರಿಗೊಳಿಸಲಿದೆ ಎಂಬ ವಿಶ್ವಾಸ ನನಗಿದೆ’’ ಎಂದು ಎಐಎಫ್‌ಎಫ್ ಹಿರಿಯ ಉಪಾಧ್ಯಕ್ಷ ಸುಬ್ರತಾ ದತ್ತ ಹೇಳಿದ್ದಾರೆ.

ಕಾಶ್ಮೀರ ಮೂಲದ ಭಾರತದ ಸ್ಟ್ರೈಕರ್ ಇಶಾನ್ ಪಂಡಿತಾ 2009ರಲ್ಲಿ ಬೆಂಗಳೂರಿಗೆ ಬರುವ ಮೊದಲು ಫಿಲಿಪ್ಪೈನ್ಸ್‌ನಲ್ಲಿ ಬಾಲ್ಯ ಕಳೆದಿದ್ದರು. ಗೆರಾಫೆ ಕ್ಲಬ್ ಕೂಡ ಸಹಿ ಹಾಕಲು ಆಸಕ್ತಿ ತೋರಿತ್ತು. ಮಾರ್ಚ್‌ನಲ್ಲಿ ಗೆರಾಫೆ ತಂಡದೊಂದಿಗೆ ಟ್ರಯಲ್ಸ್ ನಡೆಸಿರುವ ಪಂಡಿತಾ ಕಳೆದ ವರ್ಷಾಂತ್ಯದಲ್ಲಿ ಸ್ಪೇನೀಶ್ ಎರಡನೆ ಡಿವಿಜನ್‌ನಲ್ಲಿ ಅಲ್ಮೇರಿಯದ ಜೂನಿಯರ್ ತಂಡದಲ್ಲಿ 8 ತಿಂಗಳ ಕಾಲ ಆಡಿದ್ದರು. ಆಗ ಅವರಿಗೆ 18 ವರ್ಷ ತುಂಬದ ಕಾರಣ ವೃತ್ತಿಪರ ಒಪ್ಪಂದಕ್ಕೆ ಸಹಿ ಹಾಕಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X