Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಹಿತ್ ವೇಮುಲಾ ಆತ್ಮಹತ್ಯೆ ಬಗ್ಗೆ ತನಿಖಾ...

ರೋಹಿತ್ ವೇಮುಲಾ ಆತ್ಮಹತ್ಯೆ ಬಗ್ಗೆ ತನಿಖಾ ಆಯೋಗದ ವರದಿ

ವಾರ್ತಾಭಾರತಿವಾರ್ತಾಭಾರತಿ6 Oct 2016 8:59 AM IST
share
ರೋಹಿತ್ ವೇಮುಲಾ ಆತ್ಮಹತ್ಯೆ ಬಗ್ಗೆ ತನಿಖಾ ಆಯೋಗದ ವರದಿ

►ಆತ್ಮಹತ್ಯೆಗೆ ಕಾರಣ ಯಾರು?

►ವೇಮುಲಾ ದಲಿತನೇ, ಅಲ್ಲವೇ?

►ಹೈದರಾಬಾದ್ ವಿವಿಯ ತಪ್ಪಿದೆಯೇ?

►ಸ್ಮತಿ ಇರಾನಿ, ಬಂಡಾರು ಒತ್ತಡ ಹಾಕಿದ್ದರೇ?

ಹೊಸದಿಲ್ಲಿ, ಅ.6: ‘’ರೋಹಿತ್ ವೇಮುಲಾ ತಾಯಿ ಮೀಸಲಾತಿ ಲಾಭ ಪಡೆಯಲು ದಲಿತ ಹಣೆಪಟ್ಟಿ ಕಟ್ಟಿಕೊಂಡಿದ್ದರು; ಆತನನ್ನು ಹೈದರಾಬಾದ್ ಕೇಂದ್ರೀಯ ವಿವಿ ಹಾಸ್ಟೆಲ್‌ನಿಂದ ಹೊರಹಾಕಿರುವುದು ಸಮರ್ಥನೀಯ; 26ರ ವರ್ಷದ ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆಗೆ ವೈಯಕ್ತಿಕ ಹತಾಶೆ ಕಾರಣವೇ ಹೊರತು ತಾರತಮ್ಯ ಅಲ್ಲ; ಕೇಂದ್ರ ಸಚಿವರಾದ ಬಂಡಾರು ದತ್ತಾತ್ರೇಯ ಹಾಗೂ ಸ್ಮತಿ ಇರಾನಿ ತಮ್ಮ ಕಾರ್ಯವನ್ನು ನಿಭಾಯಿಸಿದ್ದಾರೆಯೇ ವಿನಃ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಅಧಿಕಾರಿಗಳ ಮೇಲೆ ಒತ್ತಡ ತಂದಿಲ್ಲ.’’

ರಾಷ್ಟ್ರವನ್ನೇ ತಲ್ಲಣಗೊಳಿಸಿದ್ದ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಬಗ್ಗೆ ನಡೆದ ನ್ಯಾಯಾಂಗ ತನಿಖೆಯ ವರದಿಯ ಪ್ರಮುಖ ಅಂಶಗಳು ಇವು.

ವೇಮುಲಾ ಆತ್ಮಹತ್ಯೆ ನಡೆದ 11 ದಿನಗಳ ಬಳಿಕ ಸಾರ್ವಜನಿಕ ಒತ್ತಡ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ 2016ರ ಜನವರಿ 28ರಂದು ಈ ಏಕ ಸದಸ್ಯ ಆಯೋಗವನ್ನು ನೇಮಕ ಮಾಡಿತ್ತು. ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಕೆ.ರೂಪನ್‌ವಾಲ್ ಇದೀಗ 41 ಪುಟಗಳ ವರದಿಯನ್ನು ಆಗಸ್ಟ್‌ನಲ್ಲಿ ಸಲ್ಲಿಸಿದ್ದಾರೆ. ತನಿಖಾ ಆಯೋಗ 50 ಮಂದಿಯ ಅಭಿಪ್ರಾಯ ಪಡೆದಿದ್ದು, ಇದರಲ್ಲಿ ಬಹುತೇಕ ಮಂದಿ ವಿವಿ ಬೋಧಕರು, ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ. ಐದು ಮಂದಿ ವಿವಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದು, ಇವರು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ ಜಂಟಿ ಕ್ರಿಯಾ ಸಮಿತಿಯ ಸದಸ್ಯರು.

ವೇಮುಲಾ ಆತ್ಮಹತ್ಯೆ ನಿರ್ಧಾರ ವೈಯಕ್ತಿಕ ಕಾರಣದಿಂದಲೇ ವಿನಃ ಸರಕಾರ ಅಥವಾ ವಿಶ್ವವಿದ್ಯಾನಿಲಯದ ಒತ್ತಡದಿಂದಲ್ಲ ಎಂದು ವರದಿ ಸ್ಪಷ್ಟಪಡಿಸಿದೆ. ವೇಮುಲಾ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಅಧ್ಯಯನ ನಡೆಸಲು ಮತ್ತು ವಿದ್ಯಾರ್ಥಿಗಳ ದೂರುಗಳನ್ನು ಪರಾಮರ್ಶೆ ನಡೆಸಲು ಹಾಗೂ ಹೈದರಾಬಾದ್ ಕೇಂದ್ರೀಯ ವಿವಿ ಸುಧಾರಣೆಗೆ ಕ್ರಮಗಳನ್ನು ಶಿಫಾರಸ್ಸು ಮಾಡಲು ಆಯೋಗ ನೇಮಕ ಮಾಡಲಾಗಿತ್ತು.

ವರದಿಯ 12 ಪುಟಗಳಲ್ಲಿ ವೇಮುಲಾ ತಾಯಿ ವಿ.ರಾಧಿಕಾ ದಲಿತ ಹಣೆಪಟ್ಟಿ ಕಟ್ಟಿಕೊಂಡಿರುವುದಷ್ಟೇ ವಿನಃ ಮೂಲತಃ ದಲಿತರಲ್ಲ ಎಂದು ಪ್ರತಿಪಾದಿಸಲಾಗಿದೆ.

ವರದಿಯ ಇನ್ನೊಂದು ಪ್ರಮುಖ ಅಂಶವೆಂದರೆ, ವೇಮುಲಾ ವಿವಿಯಲ್ಲಿ ಯಾವ ತಾರತಮ್ಯವನ್ನೂ ಎದುರಿಸಿರಲಿಲ್ಲ. ವೇಮುಲಾ ಹಾಗೂ ಅವರ ಸಹಪಾಠಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕಿರುವುದು ರಾಜಕೀಯ ಒತ್ತಡದಿಂದ ಅಲ್ಲ ಎನ್ನುವುದು. ಒಂಬತ್ತು ಮಂದಿಯ ಸಮಿತಿಯ ಶಿಫಾರಸ್ಸಿನ ಆಧಾರದಲ್ಲೇ ವಿವಿ ಆಡಳಿತ ಈ ನಿರ್ಧಾರ ಕೈಗೊಂಡಿರುವುದು ಸಮರ್ಥನೀಯ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X