Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ‘ಸ್ವಾಭಿಮಾನಿ ಸಂಘರ್ಷ ಜಾಥಾ’ದಡಿ ಐಕ್ಯತೆ!

‘ಸ್ವಾಭಿಮಾನಿ ಸಂಘರ್ಷ ಜಾಥಾ’ದಡಿ ಐಕ್ಯತೆ!

ಅ.9ರಂದು ಉಡುಪಿಯಲ್ಲಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ6 Oct 2016 8:24 PM IST
share
‘ಸ್ವಾಭಿಮಾನಿ ಸಂಘರ್ಷ ಜಾಥಾ’ದಡಿ ಐಕ್ಯತೆ!

ಮಂಗಳೂರು, ಅ.6: ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯಡಿ ಬೆಂಗಳೂರಿನಿಂದ ಹೊರಟಿರುವ ಚಲೋ ಉಡುಪಿ ಎಂಬ ‘ಸ್ವಾಭಿಮಾನಿ ಸಂಘರ್ಷ ಜಾಥಾ’ವು ರಾಜ್ಯದ ವಿವಿಧ ಚಳವಳಿಗಳು ಒಂದೇ ಬ್ಯಾನರ್, ಬಾವುಟ ಹಾಗೂ ಲಾಂಛನಡಿ ಐಕ್ಯತೆಯನ್ನು ಪ್ರದರ್ಶಿಸುತ್ತಿದೆ ಎಂದು ಸಮಿತಿಯ ಪ್ರಮುಖರಾದ ಎಂ. ದೇವದಾಸ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರು ಹಾಗೂ ದಮನಿತರ ಮೇಲೆ ಕೋಮುವಾದಿ ಶಕ್ತಿಗಳಿಂದ ನಿರಂತರ ದಾಳಿಯನ್ನು ಖಂಡಿಸಿ ಈ ಜಾಥಾವನ್ನು ರೂಪಿಸಲಾಗಿದೆ ಎಂದವರು ಹೇಳಿದರು. ಚಲೋ ಉಡುಪಿ ಜಾಥಾವು ಅ. 8ರಂದು ಉಡುಪಿ ತಲುಪಲಿದೆ. ಜಾಥಾ ತಂಡವು ಕೊಲೆಗೀಡಾದ ಪ್ರವೀಣ್ ಪೂಜಾರಿ ಮನೆಗೆ ಅಂದು ಭೇಟಿ ನೀಡಲಿದೆ. ಅ. 9ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಅಜ್ಜರಕಾಡು ಮೈದಾನದಿಂದ ಜಾಥಾ ಹೊರಟು ಬೀಡಿನಗುಡ್ಡೆಯಲ್ಲಿ ಸಮಾವೇಶಗೊಳ್ಳಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಸಭೆಯಲ್ಲಿ ಗುಜರಾತ್‌ನ ಊನಾ ಹೋರಾಟದ ಜಿಗ್ನೇಶ್ ಮೆವಾನಿ ಸೇರಿದಂತೆ ಖ್ಯಾತ ಹೋರಾಟಗಾರರು ಭಾಗವಹಿಸಲಿದ್ದಾರೆ. ದ.ಕ. ಜಿಲ್ಲೆಯಿಂದ ಸುಮಾರು 2000 ಮಂದಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ದಾದ್ರಿಯಲ್ಲಿ ದನದ ಮಾಂಸದ ಅಡುಗೆ ತಯಾರಿಸಿದ ಗುಮಾನಿ ಮೇಲೆ ಮುಸ್ಲಿಂ ಕುಟುಂಬದ ಮೇಲಿನ ದಾಳಿ, ಹೈದರಾಬಾದ್‌ನ ರೋಹಿತ್ ವೇಮುಲ ಸಾಂಸ್ಥಿಕ ಹತ್ಯೆ, ಜೆಎನ್‌ಯುವಿನಲ್ಲಿ ಪ್ರಗತಿಪರ ವಿದ್ಯಾರ್ಥಿ ಚಳವಳಿಯ ನಾಯಕರ ಮೇಲಿನ ದಾಳಿ, ಗುಜರಾತಿನ ಊನದಲ್ಲಿ ನಡೆದ ದಲಿತರ ಮೇಲಿನ ದಾಳಿಗಳು, ಉಡುಪಿಯ ಪ್ರವೀಣ್ ಪೂಜಾರಿ ಪ್ರಕರಣ ಸಮಾಜದ ಬಲಾಢ್ಯ ಬಲಪಂಥೀಯ ಶಕ್ತಿಗಳು ನಡೆಸುತ್ತಿರುವ ದಮನಗಳಾಗಿವೆ. ಪ್ರಜಾತಂತ್ರದಲ್ಲಿ ವಿಶ್ವಾಸವಿಟ್ಟಿರುವ ದೇಶದಲ್ಲಿ ಕೆಲ ಶಕ್ತಿಗಳು ಮನುವಾದ, ಮನುಸ್ಮತಿಯನ್ನು ಆಚರಣೆಗೆ ತರಲು ನಡೆಸುತ್ತಿರುವ ವ್ಯವಸ್ಥಿಯ ಪಿತೂರಿಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಜಾಥಾ ನಿರಂತರವಾಗಿ ಮುಂದುವರಿಯಲಿದೆ ಎಂದು ಅವರು ಹೇಳಿದರು.

100ಕ್ಕೂ ಅಧಿಕ ಸಂಘಟನೆಗಳು, ಚಳವಳಿಗಳನ್ನು ಒಳಗೊಂಡ ಈ ಹೋರಾಟ ಕೇವಲ ಪ್ರತಿಭಟನೆ ಮಾತ್ರವಲ್ಲ, ಇದು ಸಾಮಾಜಿಕ ಪರಿವರ್ತನೆಗೊಂದು ದಾರಿ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯಿಸಿದರು.

ಈ ಜಾಥಾವು ಹೊಸ ಮನ್ವಂತರದ ಸ್ಥಾಪನೆ ಎಂದು ಹಿರಿಯ ವಕೀಲರಾದ ದಯಾನಂದ ಕೋಟ್ಯಾನ್ ಅಭಿಪ್ರಾಯಿಸಿದರು.

ಗೋಷ್ಠಿಯಲ್ಲಿ ಪಿ. ಕೇಶವ, ನಿರ್ಮಲ್ ಕುಮಾರ್, ವಿಶು ಕುಮಾರ್, ರಘು ಎಕ್ಕಾರ್, ಗುಲಾಬಿ ಬಿಳಿಮಲೆ, ಚರಣ್ ಶೆಟ್ಟಿ, ವಾಸುದೇವ ಬೆಳ್ಳೆ, ಅಶೋಕ್ ಕೊಂಚಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X