Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಮೊದಲ ದಿನವೇ ತಮಿಳುನಾಡು,...

ರಣಜಿ ಟ್ರೋಫಿ: ಮೊದಲ ದಿನವೇ ತಮಿಳುನಾಡು, ಗೋವಾ ಆಲೌಟ್

ಚೊಚ್ಚಲ ಟೂರ್ನಿಯಲ್ಲಿ ಮಿಂಚಿದ ಛತ್ತೀಸ್‌ಗಡ

ವಾರ್ತಾಭಾರತಿವಾರ್ತಾಭಾರತಿ6 Oct 2016 10:59 PM IST
share
ರಣಜಿ ಟ್ರೋಫಿ: ಮೊದಲ ದಿನವೇ ತಮಿಳುನಾಡು, ಗೋವಾ ಆಲೌಟ್

ರಾಂಚಿ, ಅ.6: ಎಂಭತ್ತಮೂರನೆ ಆವೃತ್ತಿಯ ರಣಜಿ ಟ್ರೋಫಿ ಟೂರ್ನಿ ಗುರುವಾರ ಆರಂಭವಾಗಿದ್ದು, ಮೊದಲ ದಿನದಾಟದಲ್ಲೇ ತ್ರಿಪುರಾ, ಗೋವಾ, ಮಹಾರಾಷ್ಟ್ರ ಹಾಗೂ ತಮಿಳುನಾಡು ತಂಡಗಳು ಆಲೌಟಾಗಿವೆ.

ರೋಹ್ಟಕ್‌ನಲ್ಲಿ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ತಮಿಳುನಾಡು ತಂಡ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಕೇವಲ 87 ರನ್‌ಗೆ ಆಲೌಟಾಯಿತು. ಮುಂಬೈ ದಿನದಾಟದಂತ್ಯಕ್ಕೆ 85 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದೆ.

ರಾಂಚಿಯಲ್ಲಿ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ತ್ರಿಪುರಾ ತಂಡ ಚೊಚ್ಚಲ ಟೂರ್ನಿಯನ್ನು ಆಡುತ್ತಿರುವ ಛತ್ತೀಸ್‌ಗಡದ ವಿರುದ್ಧ 118 ರನ್‌ಗೆ ಆಲೌಟಾಗಿದೆ. ಛತ್ತೀಸ್‌ಗಡ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿದೆ.

ಹೈದರಾಬಾದ್‌ನಲ್ಲಿ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಗೋವಾ ತಂಡ ಹೈದರಾಬಾದ್‌ನ ವಿರುದ್ಧ 164 ರನ್‌ಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿದೆ. ದಿಲ್ಲಿಯಲ್ಲಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಮಹಾರಾಷ್ಟ್ರ ತಂಡ ಜಾರ್ಖಂಡ್‌ನ ವಿರುದ್ಧ 210 ರನ್‌ಗೆ ಆಲೌಟಾಗಿದೆ. ಜಾರ್ಖಂಡ್ ದಿನದಾಟದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿದೆ.

ಸ್ಯಾಮ್ಸನ್ ಔಟಾಗದೆ 129, ಸುಸ್ಥಿತಿಯಲ್ಲಿ ಕೇರಳ

ಕಲ್ಯಾಣಿ: ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಬಾರಿಸಿದ ಅಜೇಯ ಶತಕ(129)ದ ನೆರವಿನಿಂದ ಕೇರಳ ತಂಡ ಜಮ್ಮು-ಕಾಶ್ಮೀರದ ವಿರುದ್ಧ 7 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿದೆ.

ತಂಡ 9 ರನ್‌ಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗಿಳಿದ ಸ್ಯಾಮ್ಸನ್, ಜಲಜ್ ಸಕ್ಸೇನಾರೊಂದಿಗೆ(69ರನ್) 3ನೆ ವಿಕೆಟ್‌ಗೆ 97 ರನ್ ಜೊತೆಯಾಟ ನಡೆಸಿ ತಂಡವನ್ನು ಅಪಾಯದಿಂದ ಪಾರು ಮಾಡಿದರು.

ಪ್ರಶಾಂತ್ ಚೋಪ್ರಾ ಹಾಗೂ ಸುಮೀತ್ ವರ್ಮ ಬಾರಿಸಿದ ಶತಕದ ಬೆಂಬಲದಿಂದ ಹಿಮಾಚಲ ಪ್ರದೇಶ ತಂಡ ಆಂಧ್ರದ ವಿರುದ್ಧ 7 ವಿಕೆಟ್‌ಗೆ 317 ರನ್ ಗಳಿಸಿದೆ.

ತ್ರಿಪುರಾವನ್ನು 118 ರನ್‌ಗೆ ಆಲೌಟ್ ಮಾಡಿದ ಛತ್ತೀಸ್‌ಗಡ ತಂಡ ರಣಜಿ ಪಂದ್ಯದಲ್ಲಿ ಶುಭಾರಂಭ ಮಾಡಿದೆ. ಛತ್ತೀಸ್‌ಗಡದ 5 ಬೌಲರ್‌ಗಳಲ್ಲಿ ನಾಲ್ವರು ಚೊಚ್ಚಲ ರಣಜಿ ಪಂದ್ಯ ಆಡಿದ್ದು, ಎಡಗೈ ಸ್ಪಿನ್ನರ್ ಅಜಯ್ ಮಂಡಳ್(3-41) ಯಶಸ್ವಿ ಬೌಲರ್ ಎನಿಸಿಕೊಂಡರು.

ಮಧ್ಯಮ ವೇಗಿ ಮುಹಮ್ಮದ್ ಸಿರಾಜ್(4-14) ದಾಳಿಗೆ ಸಿಲುಕಿದ ಗೋವಾ ತಂಡ ಹೈದರಾಬಾದ್‌ನ ವಿರುದ್ಧ 164 ರನ್‌ಗೆ ಆಲೌಟಾಯಿತು.

ತಮಿಳುನಾಡು ತತ್ತರ: ಏಕದಿನ ತಂಡಕ್ಕೆ ಕರೆ ಪಡೆದಿರುವ ಮುಂಬೈ ವೇಗಿ ಧವಳ್ ಕುಲಕರ್ಣಿ(4-31) ಹಾಗೂ ತುಷಾರ್ ದೇಶಪಾಂಡೆ(4-25) ದಾಳಿಗೆ ತತ್ತರಿಸಿದ ತಮಿಳುನಾಡು ತಂಡ ಕೇವಲ 87 ರನ್‌ಗೆ ಆಲೌಟಾಯಿತು. ಇಂದ್ರಜಿತ್(28) ಸರ್ವಾಧಿಕ ರನ್ ಬಾರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X