ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಾಧ್ಯ: ಚೈತ್ರಾಶ್ರೀ ಮಾಲತೇಶ್
ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ

ಚಿಕ್ಕಮಗಳೂರು, ಅ.7: ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಉತ್ತಮ ಅಭ್ಯಾಸ ಮಾಡಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ತಿಳಿಸಿದರು.
ಅವರು ಇಂದು ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14 ಮತ್ತು 17ರ ವಯೋಮಿತಿಯ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕ್ರೀಡೆ ಮನಸ್ಸಿಗೆ ಉಲ್ಲಾಸ, ಸಂತೋಷ ತರುವುದರ ಜೊತೆಗೆ ದೈಹಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಶಿಸ್ತು ಹಾಗೂ ಸಂಯಮವನ್ನು ರೂಢಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಇದರಲ್ಲಿ ಭಾಗವಹಿಸುವುದು ಅತಿಮುಖ್ಯ ಎಂದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರು ಉತ್ತಮ ತರಬೇತಿ ನೀಡಬೇಕೆಂದ ಅವರು, ಕ್ರೀಡೆಯಲ್ಲಿ ವಿಜೇತರಾದವರನ್ನು ಪ್ರೋತ್ಸಾಹಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಪ್ರತಿಭೆಯನ್ನು ಹೊರಸೂಸಲು ಅನುವು ಮಾಡಿಕೊಡಬೇಕೆಂದರು. ಶಾಸಕಿ ಮೋಟಮ್ಮ ಮಾತನಾಡಿ, ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಪ್ರಸ್ತುತ ವಿದ್ಯಮಾನದಲ್ಲಿ ಅವಶ್ಯ ಎಂದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಶಿಸ್ತನ್ನು ಕಲಿಸಬೇಕೆಂದರು. ದೈಹಿಕ ಶಿಕ್ಷಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಸರಕಾರದಿಂದ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ದೈಹಿಕ ಶಿಕ್ಷಕರ ನೇಮಕಾತಿಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದರು. ಶಾಸಕ ಪ್ರಾಣೇಶ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬೆಳವಾಡಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರೇಮಾ ಕೆ. ಮಂಜುನಾಥ್, ಸೋಮಶೇಖರ್, ತಾಪಂ ಅಧ್ಯಕ್ಷ ಎ. ಆರ್. ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
‘ಸಂಗೀತಕ್ಕೆ ಜನತೆಯನ್ನ್ನು







