Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ: ಹಿಟ್ಟಿನ ಗಿರಣಿ...

ಉತ್ತರಾಖಂಡ: ಹಿಟ್ಟಿನ ಗಿರಣಿ ಪ್ರವೇಶಿಸಿದ್ದಕ್ಕಾಗಿ ದಲಿತನ ಹತ್ಯೆ

ಹಿಟ್ಟನ್ನು 'ಅಶುದ್ಧ'ಗೊಳಿಸಿದ್ದಕ್ಕೆ ಕತ್ತು ಕತ್ತರಿಸಿದ ಶಿಕ್ಷಕ!

ವಾರ್ತಾಭಾರತಿವಾರ್ತಾಭಾರತಿ8 Oct 2016 8:23 PM IST
share
ಉತ್ತರಾಖಂಡ: ಹಿಟ್ಟಿನ ಗಿರಣಿ ಪ್ರವೇಶಿಸಿದ್ದಕ್ಕಾಗಿ ದಲಿತನ ಹತ್ಯೆ

ನೈನಿತಾಲ್,ಅ.8: ಕುಮಾಂವ್ ಹಿಲ್ಸ್‌ನ ಬಾಗೇಶ್ವರದ ಸರಕಾರಿ ಶಾಲೆಯ ಮೇಲ್ಜಾತಿಗೆ ಸೇರಿದ ಶಿಕ್ಷಕನೋರ್ವ ಹಿಟ್ಟಿನ ಗಿರಣಿಯನ್ನು ಪ್ರವೇಶಿಸಿ ಅದನ್ನು ‘ಅಶುದ್ಧ’ಗೊಳಿಸಿದ್ದಕ್ಕಾಗಿ ದಲಿತ ವ್ಯಕ್ತಿಯೋರ್ವನನ್ನು ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದು, ಇದನ್ನು ವಿರೋಧಿಸಿ ಉತ್ತರಾಖಂಡದ ಹೆಚ್ಚಿನ ಕಡೆಗಳಲ್ಲಿ ದಲಿತರು ಭಾರೀ ಪ್ರತಿಭಟನೆಯನ್ನು ನಡೆಸಿದ್ದಾರೆ.

 ಬಾಗೇಶ್ವರ ಜಿಲ್ಲೆಯ ಕರದಿಯಾ ಗ್ರಾಮದ ನಿವಾಸಿ,ದಲಿತ ಸೋಹನ ರಾಮ್(35) ಒಂದು ಚೀಲ ಗೋದಿಯನ್ನು ಹಿಟ್ಟು ಮಾಡಿಸಲೆಂದು ಗಿರಣಿಗೆ ನೀಡಿದ್ದ. ಅದನ್ನು ಒಯ್ಯಲೆಂದು ಬಂದಾಗ ಅದೇ ಗ್ರಾಮದ ಶಾಲೆಯಲ್ಲಿ ಶಿಕ್ಷಕನಾಗಿರುವ ಲಲಿತ್ ಕರ್ನಾಟಕ್ ಕೂಡ ಅಲ್ಲಿಗೆ ಬಂದಿದ್ದ. ಹಿಟ್ಟನ್ನು ಮುಟ್ಟುವ ಮೂಲಕ ಅದನ್ನು 'ಅಶುದ್ಧ'ಗೊಳಿಸಿದ್ದಕ್ಕಾಗಿ ಕರ್ನಾಟಕ್ ಅವಾಚ್ಯ ಶಬ್ದಗಳಿಂದ ಬೈಯ್ಯತೊಡಗಿದ್ದ. ಇದನ್ನು ಸೋಹನ ರಾಮ್ ಪ್ರಶ್ನಿಸಿದಾಗ ಅವರಿಬ್ಬರ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಕುಪಿತ ಕರ್ನಾಟಕ್ ತನ್ನ ಬಳಿಯಿದ್ದ ಹರಿತವಾದ ಆಯುಧದಿಂದ ಸೋಹನ ರಾಮ್‌ನ ಕುತ್ತಿಗೆಯನ್ನೇ ಸೀಳಿದ್ದು, ಆತ ತಕ್ಷಣವೇ ಕುಸಿದು ಬಿದ್ದು ಸಾವನ್ನಪ್ಪಿದ್ದ.

ಪೊಲೀಸರಿಗೆ ದೂರು ನೀಡಿದರೆ ಗಂಭೀರ ಪರಿಣಾಮವನ್ನು ಎದರಿಸಬೇಕಾಗುತ್ತದೆ ಎಂದು ಕರ್ನಾಟಕ್‌ನ ತಂದೆ ಮತ್ತು ಸೋದರ ಹತ ಸೋಹನ ರಾಮ್‌ನ ಕುಟುಂಬಕ್ಕೆ ಬೆದರಿಕೆಯೊಡ್ಡಿದ್ದರು ಎಂದು ಹಿಟ್ಟಿನ ಗಿರಣಿಯ ಮಾಲಿಕ ಕುಂದನ್ ಸಿಂಗ್ ಭಂಡಾರಿ ಪೊಲೀಸರಿಗೆ ತಿಳಿಸಿದ್ದಾನೆ.

ಸೋಹನ ರಾಮ್‌ನ ಚಿಕ್ಕಪ್ಪ ಕೇಶವ ರಾಮ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಗ್ರಾಮದ ಮೇಲ್ಜಾತಿಗಳ ಜನರು ಮತ್ತು ದಲಿತರು ಹಿಟ್ಟಿನ ಗಿರಣಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ನವರಾತ್ರಿ ಉತ್ಸವ ನಡೆಯುತ್ತಿರುವುದರಿಂದ ಗಿರಣಿಗೆ ಬರದಂತೆ ಮೇಲ್ಜಾತಿಗಳ ಜನರು ದಲಿತರಿಗೆ ತಾಕೀತು ಮಾಡಿದ್ದರು. ಅಗತ್ಯವಾದರೆ ದೇವರ ನೈವೇದ್ಯಕ್ಕಾಗಿ ಹಿಟ್ಟು ತಯಾರಾದ ಬಳಿಕವಷ್ಟೇ ಗಿರಣಿಗೆ ಬಂದು ಹಿಟ್ಟು ಮಾಡಿಸಿಕೊಳ್ಳುವಂತೆ ತಿಳಿಸಿದ್ದರು ಎಂದು ಕೇಶವ ರಾಮ್ ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯ ಆರೋಪಿ ಕರ್ನಾಟಕ್,ಸಹ ಆರೋಪಿಗಳಾದ ಆತನ ತಂದೆ ಮತ್ತು ಸೋದರನನ್ನು ಗುರುವಾರ ಬಂಧಿಸಲಾಗಿದ್ದು,ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ ಎಂದು ಬಾಗೇಶ್ವರ ಎಸ್‌ಪಿ ಸುಖವೀರ್ ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X