Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿಕ್ಕಪ್ಪನ ಪೆಟ್ರೋಲ್ ಪಂಪ್‌ಗೆ ಭೇಟಿ...

ಚಿಕ್ಕಪ್ಪನ ಪೆಟ್ರೋಲ್ ಪಂಪ್‌ಗೆ ಭೇಟಿ ನೀಡಿ ಮಾಪನ ಪರೀಕ್ಷಿಸಿದ ಆಹಾರ ಸಚಿವರು!

ವಾರ್ತಾಭಾರತಿವಾರ್ತಾಭಾರತಿ8 Oct 2016 9:20 PM IST
share
ಚಿಕ್ಕಪ್ಪನ ಪೆಟ್ರೋಲ್ ಪಂಪ್‌ಗೆ ಭೇಟಿ ನೀಡಿ ಮಾಪನ ಪರೀಕ್ಷಿಸಿದ ಆಹಾರ ಸಚಿವರು!

ವಿಟ್ಲ, ಅ.8: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ. ಖಾದರ್ ಅವರು ವಿಟ್ಲ ಸಮೀಪದ ಗ್ರಾಮೀಣ ಪ್ರದೇಶವಾದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಚಿಕ್ಕಪ್ಪನ ಪೆಟ್ರೋಲ್ ಪಂಪ್‌ಗೆ ಭೇಟಿ ನೀಡಿ ಪೆಟ್ರೋಲಿಯಂ ಅಳತೆಯನ್ನು ಪರಿಶೀಲಿಸಿದರು.

ಆಹಾರ ಸಚಿವರ ತಂದೆ, ಮಾಜಿ ಶಾಸಕ ದಿವಂಗತ ಯು.ಟಿ. ಫರೀದ್ ಅವರ ಸ್ವಂತ ತಮ್ಮ ಯು.ಟಿ. ಮೂಸಕುಂಞಿ ಮತ್ತು ಅವರ ಮಕ್ಕಳಿಗೆ ಸೇರಿದ ಈ ಪಂಪ್‌ನ್ನು ಯು.ಟಿ. ಮೂಸಕುಂಞಿ ಅವರ ಪುತ್ರ ಯು.ಟಿ. ಇರ್ಶಾದ್ ಪಂಪನ್ನು ಮುನ್ನಡೆಸುತ್ತಿದ್ದಾರೆ.

ವಿಟ್ಲದ ಪುಣಚ ಸಮೀಪ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಯು.ಟಿ. ಖಾದರ್ ತನ್ನ ಸಂಬಂಧಿಕರಿಗೆ ಹಾಗೂ ಇತರ ಯಾರಿಗೂ ತಿಳಿಸದೆ ಪುಣಚ ಪರಿಯಾಲ್ತಡ್ಕ ಪೆಟ್ರೋಲ್ ಪಂಪಿಗೆ ಕಾರು ತಿರುಗಿಸುವಂತೆ ಚಾಲಕನ ಬಳಿ ಹೇಳಿದರು. ಪಂಪಿನ ಸಿಬ್ಬಂದಿಗೆ 5 ಲೀಟರ್ ಅಳತೆ ಮಾಪನ ಪಾತ್ರೆ ಗೆ ಡೀಸೆಲ್ ತುಂಬಿಸಲು ಸೂಚಿಸಿದರು. ಸಚಿವರ ಅನಿರೀಕ್ಷಿತ ಆದೇಶಕ್ಕೆ ವಿಚಲಿತರಾದ ಪಂಪ್ ಸಿಬ್ಬಂದಿ ಕ್ಯಾನ್‌ಗೆ ಡೀಸೆಲ್ ತುಂಬಿಸಿದರು. 5 ಲೀಟರ್ ತುಂಬಿದ ತಕ್ಷಣ ಅಳತೆಯನ್ನು ಪರಿಶೀಲಿಸಿದ ಸಚಿವರು ಅಳತೆ ಸರಿಯಾಗಿರುವುದನ್ನು ಮನಗಂಡು ತೃಪ್ತಿಪಟ್ಟರು ಮತ್ತು ಪಂಪಿನ ನ್ಯಾಯಯುತ ವ್ಯವಹಾರವನ್ನು ಶ್ಲಾಘಿಸಿದರು.

ಅಳತೆಯಲ್ಲಿ ನ್ಯಾಯ ಮತ್ತು ಮೌಲ್ಯದಲ್ಲಿ ಪಾರದರ್ಶಕತೆ, ವ್ಯಾಪಾರದಲ್ಲಿ ದಕ್ಷತೆ ಇದ್ದರೆ ಪೆಟ್ರೋಲ್ ಪಂಪನ್ನು ಸಾರ್ವಜನಿಕರು ಹುಡುಕಿಕೊಂಡು ಬರುತ್ತಾರೆ. ಸದಾ ಮೌಲ್ಯ ಮತ್ತು ನ್ಯಾಯಯುತವಾಗಿ ಕಾರ್ಯಾಚರಿಸಿ ಎಂದು ಪೆಟ್ರೋಲ್ ಪಂಪು ನಿರ್ವಾಹಕರಿಗೆ ಆಹಾರ ಸಚಿವರು ಮನವಿ ಮಾಡಿದರು. ಸಚಿವರ ಈ ದಿಢೀರ್ ಭೇಟಿ ಮತ್ತು ಪರಿಶೀಲನೆಯನ್ನರಿತ ಸಾರ್ವಜನಿಕರು ಪುಣಚ ಪರಿಯಾಲ್ತಡ್ಕದ ಪೆಟ್ರೋಲ್ ಪಂಪಿನಲ್ಲಿ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿ ಸಚಿವರ ಕಾರ್ಯವೈಖರಿಯನ್ನು ವೀಕ್ಷಿಸಿದರು.

ವರದಿ: ರಶೀದ್ ವಿಟ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X