Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಹಿತ್ಯದಿಂದ ಆಂತರಿಕ ಪರಿವರ್ತನೆ ಸಾಧ್ಯ:...

ಸಾಹಿತ್ಯದಿಂದ ಆಂತರಿಕ ಪರಿವರ್ತನೆ ಸಾಧ್ಯ: ಪ್ರೊ.ನಿಸ್ಸಾರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ8 Oct 2016 9:40 PM IST
share
ಸಾಹಿತ್ಯದಿಂದ ಆಂತರಿಕ ಪರಿವರ್ತನೆ ಸಾಧ್ಯ: ಪ್ರೊ.ನಿಸ್ಸಾರ್ ಅಹ್ಮದ್

ಉಡುಪಿ, ಅ. 8: ಒಂದು ಕಾಲದಲ್ಲಿ ಸಾಹಿತ್ಯದಿಂದಲೇ ದೇಶ ಬದಲಾಗುತ್ತದೆ ಎಂಬ ಕಲ್ಪನೆ ನಮ್ಮೆಲ್ಲರಲ್ಲಿತ್ತು. ಅನಂತರ ಆ ಬಣ್ಣದ ಬಲೂನ್ ಒಡೆದುಹೋಯಿತು. ಸಾಹಿತ್ಯದಿಂದ ಆಂತರಿಕ ಪರಿವರ್ತನೆ ಮಾತ್ರ ಸಾಧ್ಯ ಎಂದು ಹಿರಿಯ ಕವಿ, ಸಾಹಿತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಾಡೋಜ ಪ್ರೊ.ಕೆ.ಎಸ್.ನಿಸ್ಸಾರ್ ಅಹ್ಮದ್ ಹೇಳಿದ್ದಾರೆ.

ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಶರನ್ನವರಾತ್ರಿ ವಿಶೇಷ ಸಾಹಿತ್ಯ ಉಪನ್ಯಾಸ ಸರಣಿಯಲ್ಲಿ ಇಂದು ಸಂಜೆ ‘ನನ್ನ ಲೇಖನ ಉದ್ಯಮ’ ವಿಷಯದ ಕುರಿತು ಅವರು ಮಾತನಾಡುತಿದ್ದರು. ಸಾಹಿತ್ಯ ನಾಗರಿಕತೆಯನ್ನು ಬೆಳೆಸುವುದಿಲ್ಲ, ಸಂಸ್ಕೃತಿಯನ್ನು ಬೆಳೆಸುತ್ತದೆ ಎಂದವರು ನುಡಿದರು. ನನ್ನೊಳಗಿನ ಆಂತರಿಕ ಸಂಘರ್ಷದಿಂದ ಅನೇಕ ಕವನಗಳು ರಚನೆಗೊಂಡವು ಎಂದೂ ನಿಸ್ಸಾರ್ ಅಹ್ಮದ್ ಹೇಳಿದರು.

‘ಸ್ತೋತ್ರ ಸಾಹಿತ್ಯ’ ಎಂಬ ವಿಷಯದ ಕುರಿತು ಮಾತನಾಡಿದ ಹಿರಿಯ ವಿಮರ್ಶಕ, ಲೇಖಕ ಡಾ.ಸಿ.ಎನ್.ರಾಮಚಂದ್ರನ್, ವೇದಮಂತ್ರಗಳ ಸಹಿತ ಸ್ತೋತ್ರ ಸಾಹಿತ್ಯಗಳು ಸೃಷ್ಟಿ, ಬದುಕಿನ ರಹಸ್ಯಗಳನ್ನು ಅರಿಯಲು ಸಂಕೀರ್ಣತೆಯ ಅತ್ಯಂತ ಚಿಂತನಾಪೂರ್ಣ ವಿಚಾರಗಳನ್ನು ಸಾರುತ್ತವೆ ಎಂದರು. ಮಂತ್ರಪುಷ್ಪ ಸ್ತೋತ್ರ ಸಾಮಾನ್ಯವೆಂದು ಪರಿಗಣಿಸಿದರೂ ಅದರಲ್ಲಿ ಗಂಭೀರವಾದ ಚಿಂತನೆಗಳಿವೆ. ಸೃಷ್ಟಿಯಾಗುವುದು ನೀರಿನಿಂದ ಎಂಬರ್ಥ ದಲ್ಲಿ ನೀರಿನ ಬಗ್ಗೆ ಚಿಂತನೆಗಳನ್ನು ಮಾಡಲಾಗಿದೆ ಎಂದು ರಾಮಚಂದ್ರನ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪರ್ಯಾಯ ಶ್ರೀಪೇಜಾವರ ಮಠದ ಶ್ರೀವಿಶ್ವೇ ತೀರ್ಥ ಶ್ರೀಪಾದರು ನಿಸ್ಸಾರ್ ಅವರ ಪುರಂದರದಾಸರ ಕುರಿತಾದ ಕವನ ವನ್ನು, ಪ್ರೊ.ರಾಮಚಂದ್ರನ್ ಅವರು ದಾಸರ ಹಾಡಿಗೆ ಗಂಭೀರ ಅರ್ಥ ಬೆಟ್ಟುಮಾಡಿದ್ದನ್ನು ಉಲ್ಲೇಖಿಸಿದರು. ಜಗತ್ತು ದೇವರಿಂದಾಯಿತು ಎಂದು ಸುಮ್ಮನೆ ಕುಳಿತುಕೊಳ್ಳದೆ ಮನುಷ್ಯ ಪ್ರಯತ್ನವನ್ನು ಮಾಡಬೇಕು ಎಂಬ ಪೇಜಾವರ ಶ್ರೀಗಳು ಹೇಳಿದರು.

ಎಸ್.ಪ್ರದೀಪ್‌ಕುಮಾರ್ ಕಲ್ಕೂರ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X