Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 68 ದಿನಗಳ ಉಪವಾಸ ವ್ರತದಿಂದ 13ರ ಹರೆಯದ...

68 ದಿನಗಳ ಉಪವಾಸ ವ್ರತದಿಂದ 13ರ ಹರೆಯದ ಜೈನ ಬಾಲಕಿ ನಿಧನ!

ವಾರ್ತಾಭಾರತಿವಾರ್ತಾಭಾರತಿ8 Oct 2016 11:41 PM IST
share

ಹೈದರಾಬಾದ್,ಅ.8: ಇಲ್ಲಿಯ 13ರ ಹರೆಯದ ಬಾಲಕಿಯೋರ್ವಳು ಪವಿತ್ರ ‘ಚೌಮಾಸಾ’ ಅವಧಿಯಲ್ಲಿ ಜೈನ ವಿಧಿಯಂತೆ 68 ದಿನಗಳವರೆಗೆ ನಿರಶನವನ್ನು ನಡೆಸಿದ ಬಳಿಕ ಕಳೆದ ವಾರ ನಗರದ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾಳೆ.

ಎಂಟನೆ ತರಗತಿಯ ವಿದ್ಯಾರ್ಥಿನಿಯಾಗಿದ್ದ ಆರಾಧನಾ ಎಂಬವಳನ್ನು ಉಪವಾಸವನ್ನು ಪೂರ್ಣ ಗೊಳಿಸಿದ ಎರಡು ದಿನಗಳ ಬಳಿಕ ಆಸ್ಪತ್ರೆಗೆ ದಾಖ ಲಿಸಲಾಗಿತ್ತು. ಅಲ್ಲಿ ಆಕೆ ಹೃದಯಾಘಾತದಿಂದ ಮೃತ ಪಟ್ಟಿದ್ದಾಳೆ ಎಂದು ಬಾಲಕಿಯ ಕುಟುಂಬವು ತಿಳಿಸಿದೆ.
ಆರಾಧನಾಳ ಅಂತ್ಯ ಸಂಸ್ಕಾರದಲ್ಲಿ ಕನಿಷ್ಠ 600 ಜನರು ಭಾಗಿಯಾಗಿದ್ದರು. ಈ ವೇಳೆ ಆಕೆಯನ್ನು ‘ಬಾಲ ತಪಸ್ವಿ’ ಎಂದು ಕೊಂಡಾಡಲಾಗಿತ್ತು ಮತ್ತು ಅಂತಿಮ ಮೆರವಣಿಗೆಯನ್ನು ‘ಶೋಭಾಯಾತ್ರೆ’ ಎಂದು ಹೆಸರಿಸಲಾಗಿತ್ತು.
ಆರಾಧನಾಳ ಕುಟುಂಬವು ಚಿನ್ನಾಭರಣಗಳ ವ್ಯಾಪಾರ ನಡೆಸುತ್ತಿದ್ದು, ಸಿಕಂದರಾಬಾದ್‌ನ ಪೋಟ್ ಬಝಾರ್‌ನಲ್ಲಿ ಅಂಗಡಿಯನ್ನು ನಡೆಸುತ್ತಿದೆ. ಬಾಲಕಿ ಶಾಲೆಗೆ ಹೋಗುವುದನ್ನು ಬಿಟ್ಟು ಉಪವಾಸ ಕೈಗೊಳ್ಳಲು ಮನೆಯವರು ಅನುಮತಿ ನೀಡಿದುದಾದರೂ ಏಕೆ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ.
ಜೈನ ಧರ್ಮೀಯರು ಆಹಾರ ಮತ್ತು ನೀರನ್ನೂ ತೊರೆದು ತಮ್ಮನ್ನು ತಾವೇ ತೀವ್ರ ದಂಡನೆಗೊಳಪಡಿಸಿಕೊಳ್ಳುವುದು ವಾಡಿಕೆಯಾಗಿದೆ. ಇದನ್ನು ಧಾರ್ಮಿಕ ಮುಖಂಡರ ಸಭೆಗಳಲ್ಲಿ ವೈಭವೀಕರಿಸಲಾಗುತ್ತದೆ, ಪ್ರಶಂಸಿಸಲಾಗುತ್ತದೆ ಮತ್ತು ಗೌರವಿಸಲಾಗುತ್ತದೆ. ಅವರಿಗೆ ಉಡುಗೊರೆಗಳೂ ಹರಿದು ಬರುತ್ತವೆ. ಆದರೆ, ಈ ಪ್ರಕರಣದಲ್ಲಿ ಉಪವಾಸ ಕೈಗೊಂಡಿದ್ದುದು ಅಪ್ರಾಪ್ತ ವಯಸ್ಕ ಬಾಲಕಿ ಮತ್ತು ಇದನ್ನು ನಾನು ಆಕ್ಷೇಪಿಸುತ್ತೇನೆ. ಇದು ಕೊಲೆಯಲ್ಲದಿದ್ದರೆ ಆತ್ಮಹತ್ಯೆಯಾಗಿದೆ ಎಂದು ಜೈನ ಸಮುದಾಯಕ್ಕೆ ಸೇರಿದವರೇ ಆದ ಲತಾ ಜೈನ್ ಎಂಬವರು ಹೇಳಿದ್ದಾರೆ.
ಆರಾಧನಾ ಈ ಹಿಂದೆಯೂ 41 ದಿನಗಳ ಉಪವಾಸವನ್ನು ಮಾಡಿ ದಕ್ಕಿಸಿಕೊಂಡಿದ್ದಳು ಎಂದು ಕುಟುಂಬದ ನಿಕಟ ಮೂಲಗಳು ತಿಳಿಸಿವೆ.
ನಾವು ಏನನ್ನೂ ಮುಚ್ಚಿಟ್ಟಿರಲಿಲ್ಲ.ಅದೆಷ್ಟೋ ಜನರು ಬಂದು ಆಕೆಯೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದರು. ಆದರೆ ಈಗ ಕೆಲವರು ಆಕೆಗೆ 68 ದಿನಗಳ ಉಪವಾಸಕ್ಕೆ ಅನುಮತಿ ನೀಡಿದ್ದುದಕ್ಕಾಗಿ ನಮ್ಮತ್ತ ಬೆಟ್ಟು ಮಾಡುತ್ತಿದ್ದಾರೆ ಎಂದು ಆರಾಧನಾಳ ಅಜ್ಜ ಮಣಿಕ್‌ಚಂದ್ ಸಮ್ಧಾರಿಯಾ ಎಂಬವರು ಹೇಳಿದ್ದಾರೆ.
  ಮದುಮಗಳಂತೆ ಸಿಂಗರಿಸಿಕೊಂಡಿದ್ದ ಆರಾಧನಾ ವೈಭವಯುತ ಸಾರೋಟಿನಲ್ಲಿ ಕುಳಿತಿರುವ ಮತ್ತು ಹಲವಾರು ಜನರು ಆಕೆಯನ್ನು ಸುತ್ತುವರಿದಿರುವ ಚಿತ್ರಗಳು ಇವೆ. ಉಪವಾಸ ಪೂರ್ಣಗೊಳಿಸಿದ ಬಳಿಕ ವೃತ್ತಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ಜಾಹೀರಾತುಗಳಲ್ಲಿ ಉಪವಾಸ ಸಮಾರೋಪಗೊಂಡ ಬಳಿಕ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ತೆಲಂಗಾಣದ ಸಚಿವೆ, ಶಾಸಕರು ಪಾಲ್ಗೊಂಡಿದ್ದ ಚಿತ್ರಗಳಿವೆ.
 ತುಂಬು ಬಾಳನ್ನು ನಡೆಸಿದ ಹಿರಿಯರು ಸ್ವ ಇಚ್ಛೆಯಿಂದ ‘ಸಲ್ಲೇಖನ’ ವ್ರತವನ್ನು ಕೈಗೊಳ್ಳುವ ಮೂಲಕ ಆಹಾರ ಮತ್ತು ನೀರನ್ನು ವರ್ಜಿಸಿ ದೇಹ ತ್ಯಾಗ ಮಾಡುವ ಪದ್ಧತಿ ಜೈನರಲ್ಲಿದೆ. ಆದರೆ, ಇದನ್ನು ಬಲವಂತದಿಂದ ಹೇರುವಂತಿಲ್ಲ. ಇದೊಂದು ದುರಂತವಾಗಿದೆ ಮತ್ತು ನಾವಿದರಿಂದ ಪಾಠವನ್ನು ಕಲಿಯಬೇಕಾಗಿದೆ ಎಂದು ಕಾಚಿಗುಹ ಸ್ಥಾನಕದ ಮಹಾರಸ ರವೀಂದ್ರ ಮುನೀಜಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X