Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಲಯ, ಛಂದಸ್ಸು, ತಾಳವನ್ನು ಭಾಷೆಯ ಮೂಲಕ...

‘ಲಯ, ಛಂದಸ್ಸು, ತಾಳವನ್ನು ಭಾಷೆಯ ಮೂಲಕ ದುಡಿಸಿಕೊಳ್ಳಿ: ಸಾಹಿತಿ ಡಾ. ನಾ.ಡಿಸೋಜ

ದಸರಾ ಕವಿಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ9 Oct 2016 10:17 PM IST
share
‘ಲಯ, ಛಂದಸ್ಸು, ತಾಳವನ್ನು ಭಾಷೆಯ ಮೂಲಕ ದುಡಿಸಿಕೊಳ್ಳಿ:  ಸಾಹಿತಿ ಡಾ. ನಾ.ಡಿಸೋಜ

ಸಾಗರ, ಅ.9: ಲಯ, ಛಂದಸ್ಸು, ತಾಳವನ್ನು ಭಾಷೆಯ ಮೂಲಕ ದುಡಿಸಿಕೊಂಡಾಗ ಉತ್ತಮವಾದ ಕಾವ್ಯ ಸೃಷ್ಟಿಯಾಗುತ್ತದೆ. ಹೀಗೆ ಲಯಬದ್ಧವಾಗಿ ಸೃಷ್ಟಿಯಾದ ಕಾವ್ಯಗಳು ಮಾತ್ರ ಓದುಗರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂದು ಸಾಹಿತಿ ಡಾ. ನಾ.ಡಿಸೋಜ ಹೇಳಿದರು.

ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಸಾಗರ ಶಾಖೆ, ಡಾ. ಎಚ್.ಗಣಪತಿಯಪ್ಪ ಸೇವಾ ಟ್ರಸ್ಟ್, ಸಹೃದಯ ಬಳಗ ಹಾಗೂ ವೀತರಾಗ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಅವರು ತಮ್ಮ ಸ್ವರಚಿತ ‘ಅಣೆಕಟ್ಟು’ ಕವನ ವಾಚನದ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಸ್ತುತ ಸಂಕೀರ್ಣ ಕಾಲಘಟ್ಟದಲ್ಲಿ ನಾವಿದ್ದೇವೆ. ಕಾವ್ಯ ನಮ್ಮಲ್ಲಿ ವ್ಯವಸ್ಥೆಯ ವಿರುದ್ಧ ಕ್ರಾಂತಿಯನ್ನು ಸೃಷ್ಟಿಸುವ ಕೆಲಸ ಮಾಡಬೇಕು. ಯಾವುದೋ ಕಾಲದ ವಿಷಯವನ್ನು ವಸ್ತುವಾಗಿ ತೆಗೆದುಕೊಂಡು ಕಾವ್ಯ ರಚಿಸುವುದಕ್ಕಿಂತ ಪ್ರಸ್ತುತ ಸಂದರ್ಭದಲ್ಲಿನ ವಿಷಯ ಕುರಿತು ಕವನ ರಚಿಸಿ, ಸಮೂಹ ಜಾಗೃತಿಗೆ ಕವಿಗಳು ಪ್ರಯತ್ನ ನಡೆಸಬೇಕು ಎಂದರು. ಕಾವ್ಯ ಎಂದರೆ ಹಾಡಲು ಮಾತ್ರ ಯೋಗ್ಯ ಎನ್ನುವ ಮನೋಭಾವ ಹಿಂದೆ ಇತ್ತು. ಆದರೆ ಬದಲಾದ ದಿನಮಾನಗಳಲ್ಲಿ ಕಾವ್ಯದ ಮೂಲಕ ಮನಸ್ಸಿನ ಭಾವನೆಗಳನ್ನು ತೆರೆದಿಡುವ ಕೆಲಸ ನಡೆಯುತ್ತಿದೆ. ಒಬ್ಬ ಕವಿ ತಾನು ಕಂಡಿದ್ದನ್ನು, ಅನುಭವಿಸಿದ್ದನ್ನು ಶಬ್ದ ರೂಪ ನೀಡಿ ಅದನ್ನು ಕಾವ್ಯವಾಗಿ ಪ್ರಕಟಿಸಿದಾಗ ಆತನು ಹೆಚ್ಚಿನ ಸಂತೋಷಪಡುತ್ತಾನೆ ಎಂದರು. ಕವಿಗೋಷ್ಠಿಯಲ್ಲಿ ವಿ.ಗಣೇಶ್, ಜಿ.ನಾಗೇಶ್, ರವೀಂದ್ರ ಭಟ್ ಕುಳಿಬೀಡು, ನಾಗರಾಜ ತೋಂಬ್ರಿ, ಪ್ರಕಾಶ್ ಆರ್.ಕಮ್ಮಾರ್, ವಿ.ಟಿ.ಸ್ವಾಮಿ, ಡಾ.ಹಾ.ಉಮೇಶ್, ಬಸ್ತಿ ಸದಾನಂದ ಪೈ, ಎಂ.ನಾರಾಯಣಪ್ಪ, ಶ್ರಾವ್ಯಾಸಾಗರ್, ಮಹಾಬಲಗಿರಿಯಪ್ಪ, ಪರಮೇಶ್ ಕರೂರು, ಚಂದ್ರಶೇಖರ ಶಿರವಂತೆ, ಪೃಥ್ವಿ, ಎಲ್.ಟಿ.ಗವಿಯಪ್ಪ ಇನ್ನಿತರರು ಕವನ ವಾಚನ ಮಾಡಿದರು. ಸೇವಾ ಟ್ರಸ್ಟ್ ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಗಣಪತಪ್ಪಇಂದಿರಾ ಗಾಂಧಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ.ಪ್ರಭಾಕರ ರಾವ್, ನಗರಸಭೆ ಸದಸ್ಯ ರವಿ ಜಂಬಗಾರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X