Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ದಿಲ್ಲಿ, ಮಧ್ಯಪ್ರದೇಶಕ್ಕೆ...

ರಣಜಿ ಟ್ರೋಫಿ: ದಿಲ್ಲಿ, ಮಧ್ಯಪ್ರದೇಶಕ್ಕೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ9 Oct 2016 11:01 PM IST
share
ರಣಜಿ ಟ್ರೋಫಿ: ದಿಲ್ಲಿ, ಮಧ್ಯಪ್ರದೇಶಕ್ಕೆ ಭರ್ಜರಿ ಜಯ

 ಹೈದರಾಬಾದ್, ಅ.9: ರಣಜಿ ಟ್ರೋಫಿ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ರವಿವಾರ ಇಲ್ಲಿ ಕೊನೆಗೊಂಡಿದ್ದು ದಿಲ್ಲಿ, ಮಧ್ಯಪ್ರದೇಶ, ಜಾರ್ಖಂಡ್ ಹಾಗೂ ಹೈದರಾಬಾದ್ ತಂಡಗಳು ಜಯ ಸಾಧಿಸಿವೆ.

ವಡೋದರದಲ್ಲಿ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ದಿಲ್ಲಿ ತಂಡ ಅಸ್ಸಾಂ ತಂಡದ ವಿರುದ್ಧ ಇನಿಂಗ್ಸ್ ಹಾಗೂ 83 ರನ್‌ಗಳ ಅಂತರದಿಂದಲೂ, ದಿಲ್ಲಿಯಲ್ಲಿ ನಡೆದ ‘ಬಿ’ ಗುಂಪಿನ ಮತ್ತೊಂದು ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಜಾರ್ಖಂಡ್ ತಂಡ 6 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿ ಶುಭಾರಂಭ ಮಾಡಿದವು.

 ನಾಗ್ಪುರದಲ್ಲಿ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಹೈದರಾಬಾದ್ ತಂಡ ಗೋವಾದ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದರೆ, ಮತ್ತೊಂದು ಎ ಗುಂಪಿನ ಪಂದ್ಯದಲ್ಲಿ ಉತ್ತರ ಪ್ರದೇಶದ ವಿರುದ್ಧ ಮಧ್ಯಪ್ರದೇಶ ಇನಿಂಗ್ಸ್ ಹಾಗೂ 64 ರನ್‌ಗಳ ಅಂತರದಿಂದ ಜಯ ಸಾಧಿಸಿತು.

ನಾಲ್ಕನೆ ಹಾಗೂ ಕೊನೆಯ ದಿನವಾದ ರವಿವಾರ ನಡೆದ ಇನ್ನುಳಿದ 7 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿವೆ. ಹಿಮಾಚಲ ಪ್ರದೇಶ-ಆಂಧ್ರ, ಬರೋಡಾ-ಗುಜರಾತ್, ಸರ್ವಿಸಸ್-ಹರ್ಯಾಣ, ಕೇರಳ-ಜಮ್ಮು-ಕಾಶ್ಮೀರ, ಒಡಿಶಾ-ವಿದರ್ಭ, ರೈಲ್ವೇಸ್-ಪಂಜಾಬ್ ಹಾಗೂ ಸೌರಾಷ್ಟ್ರ-ರಾಜಸ್ಥಾನ ನಡುವಿನ ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿವೆ.

ದಿಲ್ಲಿಗೆ ಭರ್ಜರಿ ಗೆಲುವು ತಂದುಕೊಟ್ಟ ಮನನ್ ಶರ್ಮ

ವಡೋದರ, ಅ.9: ಐದು ವಿಕೆಟ್ ಗೊಂಚಲು ಕಬಳಿಸಿದ ಎಡಗೈ ಸ್ಪಿನ್ನರ್ ಮನನ್ ಶರ್ಮ ದಿಲ್ಲಿ ತಂಡ ಅಸ್ಸಾಂನ ವಿರುದ್ಧ ಇನಿಂಗ್ಸ್ ಹಾಗೂ 83 ರನ್‌ಗಳ ಭರ್ಜರಿ ಗೆಲುವಿಗೆ ಪ್ರಮುಖ ಕಾಣಿಕೆ ನೀಡಿದರು.

ಅಸ್ಸಾಂನ ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಪ್ರತಿರೋಧದ ನಡುವೆಯೂ ಜಯ ಸಾಧಿಸಿದ ದಿಲ್ಲಿ ಏಳಂಕವನ್ನು ಬಾಚಿಕೊಂಡಿತು. 296 ರನ್ ಹಿನ್ನಡೆಯೊಂದಿಗೆ 3 ವಿಕೆಟ್ ನಷ್ಟಕ್ಕೆ 100 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಅಸ್ಸಾಂ ಕೊನೆಯ ದಿನದಾಟವಾದ ರವಿವಾರ ಇನ್ನೂ 213 ರನ್ ಗಳಿಸಿ 313 ರನ್‌ಗೆ ಆಲೌಟಾಯಿತು.

  ಅಸ್ಸಾಂ 121 ರನ್‌ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ತಂಡಕ್ಕೆ ಆಸರೆಯಾದ ಸೈಯದ್ ಮುಹಮಮ್ದ್(82) ಹಾಗೂ ತರ್ಜಿಂದರ್ ಸಿಂಗ್(42)6ನೆ ವಿಕೆಟ್‌ಗೆ8 ರನ್ ಸೇರಿಸಿದರು. ಸ್ವರೂಪಮ್(47) ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

ಮಾನ್ ಶರ್ಮ ಹಾಗೂ ಪ್ರದೀಪ್ ಸಾಂಗ್ವಾನ್ ಈ ಎರಡು ಜೊತೆಯಾಟವನ್ನು ಮುರಿದರು. ಮಾನ್(5-108) ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5ನೆ ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದರು. ಸಾಂಗ್ವಾನ್ ಹಾಗೂ ವರುಣ್ ಸೂಡ್ ತಲಾ 2 ವಿಕೆಟ್ ಪಡೆದರು.

ಮಹಾರಾಷ್ಟ್ರವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದ ಜಾರ್ಖಂಡ್ ತಂಡ ಆರು ಅಂಕ ಗಳಿಸಿತು. ಕೊನೆಯ ದಿನದಾಟದಲ್ಲಿ ಜಾರ್ಖಂಡ್ ಗೆಲುವಿಗೆ 37 ರನ್ ಅಗತ್ಯವಿತ್ತು. ವಿರಾಟ್ ಸಿಂಗ್ ಹಾಗೂ ಆನಂದ್ ಸಿಂಗ್ 6.5 ಓವರ್‌ಗಳಲ್ಲಿ 93 ರನ್ ಗುರಿಯನ್ನು ಬೆನ್ನಟ್ಟಿದರು. ಈ ಜೋಡಿ 5ನೆ ವಿಕೆಟ್‌ಗೆ ಅಜೇಯ 48 ರನ್ ಗಳಿಸಿತ್ತು.

ಹೈದರಾಬಾದ್‌ನಲ್ಲಿ ನಡೆದ ಎ ಗುಂಪಿನ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಮೊದಲ ಇನಿಂಗ್ಸ್‌ನಲ್ಲಿ 465 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್‌ನಲ್ಲಿ 176 ರನ್ ಗಳಿಸಿದ್ದ ಉತ್ತರ ಪ್ರದೇಶ ಫಾಲೋ-ಆನ್‌ಗೆ ಸಿಲುಕಿತ್ತು.

ಕೊನೆಯ ದಿನದಾಟದಲ್ಲಿ 2ನೆ ಇನಿಂಗ್ಸ್‌ನಲ್ಲಿ 255 ರನ್‌ಗೆ ಆಲೌಟಾಗಿರುವ ಉ.ಪ್ರದೇಶ ಇನಿಂಗ್ಸ್ ಹಾಗೂ 64 ರನ್‌ಗಳ ಅಂತರದಿಂದ ಸೋತಿತ್ತು.

ನಾಗ್ಪುರದಲ್ಲಿ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಹೈದರಾಬಾದ್ ತಂಡ 9 ವಿಕೆಟ್‌ಗಳ ಜಯ ಗಳಿಸಿತು. ಇಂದು 5 ರನ್‌ನಿಂದ 2ನೆ ಇನಿಂಗ್ಸ್ ಆರಂಭಿಸಿದ ಗೋವಾ ತಂಡ 255 ರನ್‌ಗೆ ಆಲೌಟಾಗಿ ಹೈದರಾಬಾದ್‌ಗೆ ಕೇವಲ 35 ರನ್ ಗುರಿ ನೀಡಿತು. ಹೈದರಾಬಾದ್ 1 ವಿಕೆಟ್ ನಷ್ಟದಲ್ಲಿ ಗೆಲುವಿನ ದಡ ಸೇರಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X