Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ:...

ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ

ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ9 Oct 2016 11:40 PM IST
share
ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ

 ಪುತ್ತೂರು, ಅ.9: ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ 650 ಪಶು ವೈದ್ಯರನ್ನು ನೇಮಕ ಮಾಡಲಾಗಿದ್ದು, ಇನ್ನೂ 692 ಪಶು ವೈದ್ಯರು ಮತ್ತು ಸಹಾಯಕ ನಿರ್ದೇಶಕರ ಹುದ್ದೆ ಖಾಲಿಯಿದ್ದು, ಪಶು ಸಂಗೋಪನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ಸರಕಾರ ಕ್ರಮ ಕೈಗೊಳ್ಳಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕಾ ವಿಶ್ವ ವಿದ್ಯಾನಿಲಯ ಬೀದರ್ ಇದರ ನೇತೃತ್ವದಲ್ಲಿ ಪುತ್ತೂರು ತಾಲೂಕಿನ ಕೊಯ್ಲದಲ್ಲಿ 142 ಕೋ.ರೂ ವೆಚ್ಚದಲ್ಲಿ ನಿರ್ಮಿಸಲಿರುವ ಪಶು ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.
  ರಾಜ್ಯದ ಜನತೆಗೆ ತುರ್ತಾಗಿ ಆಗಬೇಕಾದ ಕೆಲಸಗಳಿಗೆ ಆರ್ಥಿಕ ನಿಯಮಾವಳಿಯನ್ನು ಸಡಿಲಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಪಶು ವೈದ್ಯಕೀಯ ಹಾಗೂ ಇನ್ನಿತರ ತುರ್ತು ಸೇವಾ ಇಲಾಖೆಗಳಿಗೆ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದರು.
ಸರಕಾರವು ಹಸಿವು ಮುಕ್ತ ರಾಜ್ಯದ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಬಡವರಿಗೆ ಉಚಿತ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡುತ್ತಿದೆ. ಮುಂದಿನ ವರ್ಷಗಳಿಂದ ಕ್ಷೀರಭಾಗ್ಯ ಯೋಜನೆಯನ್ನು 3ರಿಂದ 5ದಿನಕ್ಕೆ ವಿಸ್ತರಣೆ ಹಾಗೂ ಪಡಿತರ ಅಕ್ಕಿ ಮತ್ತು ಗೋಧಿಯನ್ನು 3 ಕಿಲೋದಿಂದ 5ಕಿಲೋಗೆ ಹೆಚ್ಚಿಸಲಾಗುವುದು ಎಂದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಅಂಗಾರ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರಸ್ತಾವಿತ ಕಡಬ ತಾಲೂಕು ರಚನೆ ಹಾಗೂ ಕುಮಾರಧಾರಾ ನದಿಯಿಂದ ಕೊಯ್ಲ ಮತ್ತು ರಾಮಕುಂಜ ಗ್ರಾಮಕ್ಕೆ ಕುಡಿಯುವ ನೀರಿನ ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣವಾಗುವಲ್ಲಿ ಮುಖ್ಯಮಂತ್ರಿಗಳು ಪ್ರಯತ್ನಿಸಬೇಕು ಎಂದರು. ಈ ವೇಳೆ ಮಾತನಾಡಿದ ಪಶುಸಂಗೋಪನಾ ಸಚಿವ ಎ.ಮಂಜು, ಕೊಯ್ಲದಲ್ಲಿ ಮಲೆನಾಡು ಗಿಡ್ಡತಳಿಯ ರಾಸು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಡಬ ತಾಲೂಕು ಹಾಗೂ ಕಡಬಕ್ಕೆ ಪ್ರತ್ಯೇಕ ಪದವಿ ಕಾಲೇಜು ಜನರ ಬಹುದಿನಗಳ ಬೇಡಿಕೆಯಾಗಿದೆ ಎಂದರು. ಸಚಿವ ಯು.ಟಿ.ಖಾದರ್ ಮಾತನಾಡಿ, ಕೊಯ್ಲದಲ್ಲಿ ಕೆಎಂಎಫ್ ಒಂದು ಘಟಕವನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
 ಸಚೇತಕ ಐವನ್ ಡಿಸೋಜಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಅಭಯ ಚಂದ್ರ ಜೈನ್, ಮುಹಿಯುದ್ದೀನ್ ಬಾವ, ಪ್ರತಾಪ್‌ಚಂದ್ರ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಮೀನಾಕ್ಷಿ, ಪ್ರಶಾಂತ್ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಪಶುಪಾಲನಾ ಇಲಾಖೆಯ ನಿರ್ದೇಶಕ ಡಾ.ಕೆ.ಮುಹಮ್ಮದ್ ಝಫ್ರುಲ್ಲಾ ಖಾನ್, ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ವಸಂತ ಎಂ.ಶೆಟ್ಟಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸ್ವಾಗತಿಸಿದರು. ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು, ಅ.9: ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ 650 ಪಶು ವೈದ್ಯರನ್ನು ನೇಮಕ ಮಾಡಲಾಗಿದ್ದು, ಇನ್ನೂ 692 ಪಶು ವೈದ್ಯರು ಮತ್ತು ಸಹಾಯಕ ನಿರ್ದೇಶಕರ ಹುದ್ದೆ ಖಾಲಿಯಿದ್ದು, ಪಶು ಸಂಗೋಪನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ಸರಕಾರ ಕ್ರಮ ಕೈಗೊಳ್ಳಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕಾ ವಿಶ್ವ ವಿದ್ಯಾನಿಲಯ ಬೀದರ್ ಇದರ ನೇತೃತ್ವದಲ್ಲಿ ಪುತ್ತೂರು ತಾಲೂಕಿನ ಕೊಯ್ಲದಲ್ಲಿ 142 ಕೋ.ರೂ ವೆಚ್ಚದಲ್ಲಿ ನಿರ್ಮಿಸಲಿರುವ ಪಶು ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.
  ರಾಜ್ಯದ ಜನತೆಗೆ ತುರ್ತಾಗಿ ಆಗಬೇಕಾದ ಕೆಲಸಗಳಿಗೆ ಆರ್ಥಿಕ ನಿಯಮಾವಳಿಯನ್ನು ಸಡಿಲಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಪಶು ವೈದ್ಯಕೀಯ ಹಾಗೂ ಇನ್ನಿತರ ತುರ್ತು ಸೇವಾ ಇಲಾಖೆಗಳಿಗೆ ನೇಮಕಾತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದರು.
ಸರಕಾರವು ಹಸಿವು ಮುಕ್ತ ರಾಜ್ಯದ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಬಡವರಿಗೆ ಉಚಿತ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡುತ್ತಿದೆ. ಮುಂದಿನ ವರ್ಷಗಳಿಂದ ಕ್ಷೀರಭಾಗ್ಯ ಯೋಜನೆಯನ್ನು 3ರಿಂದ 5ದಿನಕ್ಕೆ ವಿಸ್ತರಣೆ ಹಾಗೂ ಪಡಿತರ ಅಕ್ಕಿ ಮತ್ತು ಗೋಧಿಯನ್ನು 3 ಕಿಲೋದಿಂದ 5ಕಿಲೋಗೆ ಹೆಚ್ಚಿಸಲಾಗುವುದು ಎಂದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಅಂಗಾರ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರಸ್ತಾವಿತ ಕಡಬ ತಾಲೂಕು ರಚನೆ ಹಾಗೂ ಕುಮಾರಧಾರಾ ನದಿಯಿಂದ ಕೊಯ್ಲ ಮತ್ತು ರಾಮಕುಂಜ ಗ್ರಾಮಕ್ಕೆ ಕುಡಿಯುವ ನೀರಿನ ಬೃಹತ್ ಕುಡಿಯುವ ನೀರಿನ ಯೋಜನೆ ಪೂರ್ಣವಾಗುವಲ್ಲಿ ಮುಖ್ಯಮಂತ್ರಿಗಳು ಪ್ರಯತ್ನಿಸಬೇಕು ಎಂದರು. ಈ ವೇಳೆ ಮಾತನಾಡಿದ ಪಶುಸಂಗೋಪನಾ ಸಚಿವ ಎ.ಮಂಜು, ಕೊಯ್ಲದಲ್ಲಿ ಮಲೆನಾಡು ಗಿಡ್ಡತಳಿಯ ರಾಸು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಡಬ ತಾಲೂಕು ಹಾಗೂ ಕಡಬಕ್ಕೆ ಪ್ರತ್ಯೇಕ ಪದವಿ ಕಾಲೇಜು ಜನರ ಬಹುದಿನಗಳ ಬೇಡಿಕೆಯಾಗಿದೆ ಎಂದರು. ಸಚಿವ ಯು.ಟಿ.ಖಾದರ್ ಮಾತನಾಡಿ, ಕೊಯ್ಲದಲ್ಲಿ ಕೆಎಂಎಫ್ ಒಂದು ಘಟಕವನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
 ಸಚೇತಕ ಐವನ್ ಡಿಸೋಜಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಅಭಯ ಚಂದ್ರ ಜೈನ್, ಮುಹಿಯುದ್ದೀನ್ ಬಾವ, ಪ್ರತಾಪ್‌ಚಂದ್ರ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಮೀನಾಕ್ಷಿ, ಪ್ರಶಾಂತ್ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಪಶುಪಾಲನಾ ಇಲಾಖೆಯ ನಿರ್ದೇಶಕ ಡಾ.ಕೆ.ಮುಹಮ್ಮದ್ ಝಫ್ರುಲ್ಲಾ ಖಾನ್, ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ವಸಂತ ಎಂ.ಶೆಟ್ಟಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸ್ವಾಗತಿಸಿದರು. ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಕೊಯ್ಲದ ಪಶು ಸಂಗೋಪನಾ ಇಲಾಖೆಯಲ್ಲಿ ಇರುವ 895 ಎಕರೆ ಜಮೀನಿನಲ್ಲಿ 247 ಎಕರೆ ಜಮೀನಿನಲ್ಲಿ ಪ್ರಸಾವಿತ ಪಶು ವೈದ್ಯಕೀಯ ಕಾಲೇಜು, ಪಶುವೈದ್ಯಕೀಯ ಆಸ್ಪತ್ರೆ, ವಿದ್ಯಾರ್ಥಿನಿಲಯ ಹಾಗೂ ಪಶು ಸಂಗೋಪನಾ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕಾಗಿ 142 ಕೋ.ರೂ. ಮಂಜೂರುಗೊಳಿಸಲಾಗಿದ್ದು, ಪ್ರಥಮ ಹಂತದಲ್ಲಿ 110.5 ಕೋ.ರೂ. ಕಾಮಗಾರಿ ನಡೆಯಲಿದೆ. ಇಲ್ಲಿ 60 ವಿದ್ಯಾರ್ಥಿಗಳ ಕಲಿಕೆಗೆ ಅವಕಾಶವಾಗಲಿದೆ. ಅಲ್ಲದೆ ಇದರೊಂದಿಗೆ ಗದಗ ಮತ್ತು ಅಥಣಿ ಜಿಲ್ಲೆಗಳಲ್ಲಿಯೂ ಪಶು ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ. ಜಾನುವಾರು ನಮ್ಮ ಸಂಪತ್ತಾಗಿದ್ದು, ಅದನ್ನು ಅಭಿವೃದ್ಧಿ ಪಡಿಸುವುದು ಈ ಯೋಜನೆ ಮೂಲ ಉದ್ದೇಶ.
-ಸಿದ್ದರಾಮಯ್ಯ, ಮುಖ್ಯಮಂತ್ರಿ ಕೋಮುವಾದ ಸಹಿಸಲಾಗದು
ರಾಜ್ಯದಲ್ಲಿ ಸಂವಿಧಾನ ಬದ್ಧವಾದ ಜಾತ್ಯತೀತ ನೆಲೆಯಲ್ಲಿ ಸೌಹಾರ್ದ ಕಾಪಾಡಲು ಸರಕಾರ ಬದ್ಧವಾಗಿದೆ. ಕೋಮುವಾದವನ್ನು ಯಾರೂ ಮಾಡಿದರೂ ಸಹಿಸಲು ಸಾಧ್ಯವಿಲ್ಲ. ಸರಕಾರ ಜನರಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ತಲುಪಬೇಕೇ ಹೊರತು ಕೋಮುವಾದದ ಮೂಲಕ ಅಲ್ಲ. ಎಲ್ಲಾ ಜಾತಿ ಧರ್ಮದ ಜನರು ಒಂದು ತಾಯಿಯ ಮಕ್ಕಳಂತೆ ಬದುಕುವ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಗುರಿ.
‘ಮುಂದಿನ ಹಂತದಲ್ಲಿ ಕಡಬ ತಾಲೂಕು ಘೋಷಣೆ’
ರಾಜ್ಯದಲ್ಲಿ 43 ಹೊಸ ತಾಲೂಕು ರಚನೆ ಯೋಜನೆ ಸರಕಾರದ ಮುಂದಿದ್ದು, ಈ ಭಾಗದ ಜನರ ಬೇಡಿಕೆಯಾಗಿರುವ ಕಡಬ ತಾಲೂಕು ರಚನೆಗೆ ಮುಂದಿನ ಘೋಷಣೆ ಸಂದರ್ಭ ಆದ್ಯತೆ ನೀಡಲಾಗುವುದು. ಅಲ್ಲದೆ ಕಡಬಕ್ಕೆ ನೂತನ ಪದವಿ ಕಾಲೇಜು ಮಂಜೂರುಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X