Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರಿ ಭಾಷೆಗೆ ಸಂಬಂಧಿಸಿದ ಕಾರ್ಯಕ್ರಮ...

ಬ್ಯಾರಿ ಭಾಷೆಗೆ ಸಂಬಂಧಿಸಿದ ಕಾರ್ಯಕ್ರಮ ನಿರಂತರವಾಗಿ ನಡೆಯಲಿ: ಹರೇಕಳ ಹಾಜಬ್ಬ

ನ್ಯೂಪಡ್ಪು ಸರಕಾರಿ ಶಾಲೆಯಲ್ಲಿ ಮೇಲ್ತೆನೆಯಿಂದ ‘ಬ್ಯಾರಿ ಸಾಹಿತ್ಯ ಕೂಟ’

ವಾರ್ತಾಭಾರತಿವಾರ್ತಾಭಾರತಿ11 Oct 2016 1:56 PM IST
share
ಬ್ಯಾರಿ ಭಾಷೆಗೆ ಸಂಬಂಧಿಸಿದ ಕಾರ್ಯಕ್ರಮ ನಿರಂತರವಾಗಿ ನಡೆಯಲಿ: ಹರೇಕಳ ಹಾಜಬ್ಬ

ಕೊಣಾಜೆ, ಅ.11: ಬ್ಯಾರಿ ಭಾಷೆಯ ಉಳಿವು, ಬೆಳವಣಿಗೆ ನಿಟ್ಟಿನಲ್ಲಿ ನಿರಂತರ ಕಾರ್ಯಕ್ರಮ ನಡೆಯಬೇಕಾಗಿದೆ. ಬ್ಯಾರಿ ಭಾಷೆಯ ಬಗ್ಗೆ ನಿರ್ಲಕ್ಷ್ಯ ವಹಿಸದೆ ಎಲ್ಲರೂ ಒಟ್ಟಾಗಿ ಅದರ ಇನ್ನಷ್ಟು ಬೆಳವಣಿಗೆಗೆ ಪ್ರೋತ್ಸಾಹಿಸಿ ಎಂದು ಅಕ್ಷರ ಸಂತ ಹರೇಕಳ ಹಾಜಬ್ಬ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ‘ಮೇಲ್ತೆನೆ’ (ಬ್ಯಾರಿ ಬರಹಗಾರರು ಮತ್ತು ಕಲಾವಿದರ ಕೂಟ) ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ಹರೇಕಳ ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ‘ಬ್ಯಾರಿ ಸಾಹಿತ್ಯ ಕೂಟ’ ಉದ್ಘಾಟಿಸಿ ಅವರು ಮಾತನಾಡಿದರು.

ಹಾಜಬ್ಬ ಎನ್ನುವ ಬ್ಯಾರಿ ಸಮುದಾಯದ ವ್ಯಕ್ತಿ ಇಂದು ವಿವಿಧ ಕಾರ್ಯಕ್ರಮ ಉದ್ಘಾಟನೆ ಮಾಡುವಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೊಡ್ಡವರ ಜೊತೆ ಕುಳಿತುಕೊಳ್ಳುವಂತಾಗುವಲ್ಲಿ ದೇವನ ದಯೆ, ಮಾಧ್ಯಮಗಳ ಸಹಕಾರ ಕಾರಣ. ಇಂತಹ ಸಹಕಾರ ಮುಂದುವರಿಯಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮೆಲ್ತೆನೆ ಅಧ್ಯಕ್ಷ ಆಲಿಕುಂಞಿ ಪಾರೆ ಮಾತನಾಡಿ, ಭಾಷೆ ಎನ್ನುವುದು ನಮ್ಮ ಮನದ ಭಾವನೆಯನ್ನು ಇನ್ನೊಬ್ಬರ ಜೊತೆ ಪರಸ್ಪರ ಹಂಚಿಕೊಳ್ಳುವ ಮಾಧ್ಯಮ. ಎಲ್ಲಾ ಭಾಷೆಗಳನ್ನು ಕಲಿಯಬೇಕಿದ್ದು, ಮಾತೃಭಾಷೆಯ ಬಗ್ಗೆ ಹೆಚ್ಚಿನ ಒಲವು ಹೊಂದಿ ಇತರರಿಗೂ ಕಲಿಸುವ ಮೂಲಕ ಸಂಸ್ಕೃತಿ ಉಳಿಸಬೇಕು. ವಿದ್ಯಾರ್ಥಿಗಳು ಪದವಿ ಪಡೆದರೂ ಸಾಮಾನ್ಯ ಜ್ಞಾನವಿಲ್ಲದಿದ್ದರೆ ಏನನ್ನೂ ಸಾಧಿಸಲಾಗದು ಎಂದರು.

ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬ್ಯಾರಿ ಭಾಷೆ ಓದುವ, ಬ್ಯಾರಿ ಕ್ವಿಝ್ ಸ್ಪರ್ಧೆ ನಡೆಯಿತು. ಕವಿ, ಗಾಯಕ ಬಶೀರ್ ಅಹ್ಮದ್ ಕಿನ್ಯ ಅಧ್ಯಕ್ಷತೆಯಲ್ಲಿ ನಡೆದ ಬ್ಯಾರಿ ಕವಿಗೋಷ್ಠಿಯಲ್ಲಿ ಕವಿಗಳಾದ ಹಿರಿಯ ಎಚ್.ಆರ್.ಅರ್ಕುಳ, ಯುವ ಕವಿಗಳಾದ ನಿಝಾಮ್ ಕೊಳಂಬೆ, ಹಸನ್ ಸಫ್ವಾನ್ ಬಡಗನ್ನೂರು, ನಾಸಿರ್ ಸಜಿಪ, ಎಂ.ಎಂ.ಆತೂರು, ಸಲೀಂ ಮಾಣಿ, ಖ-ಶಿಖ ಕಲಂದರ್ ಬಜ್ಪೆ, ಎಡ್ವರ್ಡ್ ಡಿಸೋಜ ಮೊದಲಾದವರು ಕವನ ವಾಚಿಸಿದರು.

ಕಾರ್ಯಕ್ರಮದಲ್ಲಿ ಹಂಝ ಮಲಾರ್, ಇಸ್ಮತ್ ಪಜೀರ್ ಹಾಗೂ ಇಸ್ಮಾಯಿಲ್ ಮಾಸ್ಟರ್ ಅವರನ್ನು ಗೌರವಿಸಲಾಯಿತು. ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು, ಶಾಲೆಯ ಅಡುಗೆ ಸಿಬ್ಬಂದಿ ಶಂಕರ ಉಪಸ್ಥಿತರಿದ್ದರು. ಮೇಲ್ತೆನೆ ಪದಾಧಿಕಾರಿಗಳಾದ ಅನ್ಸಾರ್ ಇನೋಳಿ ಹಾಗೂ ಬಶೀರ್ ಕಲ್ಕಟ್ಟ ತೀರ್ಪುಗಾರರಾಗಿದ್ದರು.

ಮೇಲ್ತೆನೆ ಉಪಾಧ್ಯಕ್ಷ ಇಸ್ಮಾಯಿಲ್ ಮಾಸ್ಟರ್ ಸ್ವಾಗತಿಸಿದರು. ಕೈಸ್ ಅಬ್ಬಾಸ್ ಕಿರಾಅತ್ ಓದಿದರು. ಪ್ರಧಾನ ಕಾರ್ಯದರ್ಶಿ ಇಸ್ಮತ್ ಪಜೀರ್ ಬ್ಯಾರಿ ಕ್ವಿಝ್ ನಡೆಸಿಕೊಟ್ಟರು. ಸಂಚಾಲಕ ಹಂಝ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X