Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಗರಿಕತೆ ಬೆಳೆದಂತೆ ಕರುಣೆ...

ನಾಗರಿಕತೆ ಬೆಳೆದಂತೆ ಕರುಣೆ ನಾಶವಾಗುತ್ತಿದೆ: ಅಬ್ದುಲ್ ಅಝೀಝ್

ವಿಶ್ವ ವನ್ಯಜೀವಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ11 Oct 2016 10:31 PM IST
share
ನಾಗರಿಕತೆ ಬೆಳೆದಂತೆ ಕರುಣೆ ನಾಶವಾಗುತ್ತಿದೆ: ಅಬ್ದುಲ್ ಅಝೀಝ್

 ಚಿಕ್ಕಮಗಳೂರು, ಅ.11: ವನ್ಯಜೀವಿಗಳು ಮನುಕುಲದ ರಕ್ಷಾ ಕವಚ. ಭೂ ಮಂಡಲದ ಸುಸ್ಥಿರತೆಗಾಗಿ ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಪಶ್ಚಿಮ ಘಟ್ಟ ಉಳಿಸಿ ಆಂದೋಲನ ರಾಜ್ಯ ಸಮಿತಿ ಸದಸ್ಯ ಗಜೇಂದ್ರ ಗೊರಸುಕುಡಿಗೆ ಅಭಿಪ್ರಾಯಿಸಿದರು.

ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ನಗರದ ಎಸ್.ಟಿ.ಜೆ. ಮಹಿಳಾ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ವನ್ಯಜೀವಿ ದಿನ ಅಂಗವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಪರಿಸರದ ಸಮತೋಲನಕ್ಕೆ ಸಸ್ಯ, ಪ್ರಾಣಿ, ಕೀಟ ಎಲ್ಲದರ ಅವಶ್ಯಕತೆಯೂ ಇದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಇವೆಲ್ಲವನ್ನು ಬಳಸಿಕೊಳ್ಳುತ್ತಿದ್ದಾನೆ. ವಾಸ್ತವವಾಗಿ ಭೂ ಮಂಡಲದ ಇರುವಿಕೆಗೆ ಸಸ್ಯ, ಪ್ರಾಣಿ, ಕೀಟದ ಅಗತ್ಯವಿದೆಯೇ ಹೊರತು, ಮಾನವನ ಅಗತ್ಯ ಹೆಚ್ಚಾಗಿಲ್ಲ.

ಭೂಮಿ ತನಗಾಗಿ ಇರುವುದು ಎಂಬ ದೃಷ್ಟಿಕೋನದಿಂದ ಆಲೋಚಿಸುವುದನ್ನು ಬಿಡುವುದು ಒಳಿತು ಎಂದರು.

   ಪಶ್ಚಿಮ ಘಟ್ಟಗಳು ಪರಿಸರ ಸಮತೋಲನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಶೇ.50ರಷ್ಟು ಅರಣ್ಯ ಭೂಮಿ ಇದ್ದು ಸಸ್ಯ ಶ್ಯಾಮಲೆ ಎನಿಸಿಕೊಂಡಿದ್ದ ಭಾರತದಲ್ಲಿ ಈಗ ಒಟ್ಟಾರೆ ಶೇ.11ರಷ್ಟು ಅರಣ್ಯ ಪ್ರದೇಶ ಅಷ್ಟೆ ಇದೆ. ಅದರಲ್ಲೂ ಶೇ.9 ದಟ್ಟ ಅರಣ್ಯವಾದರೆ ಶೇ.2 ಮಾನವ ನಿರ್ಮಿತ ಅರಣ್ಯ. ವನ್ಯ ಪ್ರಾಣಿಗಳಿರುವ ಜಾಗ ಇದರಲ್ಲಿ ಶೇ.1 ರಷ್ಟು ಮಾತ್ರ ಎಂದ ಗಜೇಂದ್ರ, ಕಾಡಿನಲ್ಲಿ ಹುಲಿ ಇದ್ದರೆ ಊರಿನ ಬಾವಿಯಲ್ಲಿ ನೀರಿರುತ್ತದೆ ಎಂಬ ಮಾತು ಹಳ್ಳಿಗರದ್ದಾಗಿತ್ತು. ಸಮೃದ್ಧ ಕಾಡಿದ್ದರೆ ಮಾತ್ರ ಹುಲಿ ವಾಸಿಸಲು ಸಾಧ್ಯ. ಕಾಡು ಚೆನ್ನಾಗಿದ್ದರೆ ಸಹಜವಾಗಿಯೇ ಮಳೆ ಬರುತ್ತದೆ.

ಮನುಷ್ಯನಿಗೆ ಬದುಕಲು ಎಲ್ಲಾ ಅವಶ್ಯಕತೆಗಳನ್ನು ಪೂರೈಸುವ ಸಂಪನ್ಮೂಲ ಭೂಮಿಗಿದೆ. ನಮ್ಮ ಸ್ವಾರ್ಥದಿಂದ ಅರಣ್ಯ ಕರಗಿ ವನ್ಯಜೀವಿಗಳ ಆವಾಸ ಸ್ಥಾನ ಕುಗ್ಗಿ ಅವುಗಳು ನಾಡಿನತ್ತ ಮುಖ ಮಾಡುವಂತಾಗಿದೆ ಎಂದರು.

ವಲಯಾರಣ್ಯಾಧಿಕಾರಿ ಅಬ್ದುಲ್ ಅಝೀಝ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಾಗರಿಕತೆ ಬೆಳೆದಂತೆ ಕರುಣೆ ಇಲ್ಲದಂತಾಗಿದೆ. ವನ್ಯಜೀವಿಗಳ ಆವಾಸ ಸ್ಥಾನ ನಾವು ಆಕ್ರಮಿಸಿಕೊಳ್ಳುತ್ತಿದ್ದೇವೆ. ಇದರ ಪರಿಣಾಮವೇ ವನ್ಯಜೀವಿಗಳು ಆಹಾರ ನೀರಿಗಾಗಿ ಜನ ವಸತಿಯತ್ತ ಧಾವಿಸುತ್ತಿವೆ ಎಂದರು. ಸಮಾರಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ.ಕೆ. ಹಳದಪ್ಪ ವಹಿಸಿದ್ದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ ಸ್ವಾಗತಿಸಿ ಪ್ರಾಸ್ತಾವಿಸಿದರು. ಉಪನ್ಯಾಸಕ ಲೋಹಿತ್ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X